ಬಸ್ಗೆ ವಿದ್ಯಾರ್ಥಿಗಳ ಮನವಿ
Team Udayavani, Jul 27, 2022, 5:40 PM IST
ಬಸವನಬಾಗೇವಾಡಿ: ನರಸಲಗಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಸೋಮವಾರ ವಿದ್ಯಾರ್ಥಿಗಳು ಬಸ್ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ನರಸಲಗಿ ಸೇರಿದಂತೆ ಅಂಬಳನೂರ, ಕೊಡಗಾನೂರ, ಇವಣಗಿ, ಹಂಚಿನಾಳ ಗ್ರಾಮಗಳಿಂದ ಪಟ್ಟಣದ ವಿವಿಧ ಶಾಲಾ ಕಾಲೇಜಿಗೆ ಬರುತ್ತೇವೆ. ಸರಿಯಾದ ಸಮಯಕ್ಕೆ ಬಸ್ ಬರದಿರುವುದರಿಂದ ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಮಧ್ಯಾಹ್ನ ಹಾಗೂ ಸಂಜೆ ಮನೆಗೆ ಹಿಂದಿರುಗಲು ಕಿ.ಮೀ.ವರೆಗೆ ನಡೆದುಕೊಂಡು ಹೋಗಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.
ಇಟ್ಟಗಿ ಗ್ರಾಪಂ ಸದಸ್ಯ ಭಾಷಾಸಾಹೇಬ ದಿಂಡವಾರ, ಮುತ್ತುರಾಜ ಹಾಲಿಹಾಳ, ಅರ್ಜುನ ಅಂಬಳನೂರ, ಡಿಎಸ್ಸೆಸ್ ಮುಖಂಡ ಯಮನೂರಿ ಚಲವಾದಿ, ಪವಾಡೇಶ ಮಣ್ಣೂರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು