ಬೆಂಗಳೂರು ಬಂಟರ ಸಂಘದಲ್ಲಿ ವಿಶೇಷ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
ಸಾಧಕರನ್ನ ಕಂಡು ಖುಷಿಪಟ್ಟರಷ್ಟೇ ಸಾಲದು ಅವರಂತೆ ಆಗಲು ಪ್ರಯತ್ನಿಸಬೇಕು: ಜಯಪ್ರಕಾಶ್ ಹೆಗ್ಡೆ
Team Udayavani, Jul 28, 2022, 8:20 PM IST
ಬೆಂಗಳೂರು: ಕುಂದಾಪ್ರ ಸಂಸ್ಕೃತಿಯನ್ನ ಸದುದ್ದೇಶದಿಂದ ವಿಜೃಂಭಣೆ ಯಿಂದ ಆಚರಿಸಿ.ಆದರೆ ಮೂಲ ಆಶಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.ಕುಂದಾಪುರ ಭಾಗದಲ್ಲಿ ಸಾಕಷ್ಟು ಜನ ಸಾಧಕರಿದ್ದಾರೆ. ಆದರೆ ಅವರನ್ನ ಕಂಡು ಖುಷಿಪಟ್ಟರಷ್ಟೇ ಸಾಲದು ಅವರಂತೆ ಆಗಲು ಪ್ರಯತ್ನಿಸಬೇಕು ಎಂದು ಬಂಟರ ಸಂಘದಲ್ಲಿ ನಡೆದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ವೇಳೆ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಬೆಂಗಳೂರಿನ ಬಂಟರ ಸಂಘದ ಸಭಾಭವನದಲ್ಲಿ ವಿಶ್ವಕುಂದಾಪ್ರ ಕನ್ನಡ ದಿನವನ್ನು ವಿಶೇಷವಾಗಿ ಆಚರಿಸಲಾಯಿತು. ಕುಂದಾಪ್ರ ಕನ್ನಡ ಗೀತೆಯನ್ನು ಯುವ ಗಾಯಕಿ ಸಾನ್ವಿ ಶೆಟ್ಟಿ ಹಾಡಿ ಜನರನ್ನ ರಂಜಿಸಿದರು. ಚೇತನ್ ನೈಲಾಡಿ ನೇತೃತ್ವದಲ್ಲಿ ಹೆಂಗಸರ ಪಂಚಾಯ್ತಿ ಕಾರ್ಯಕ್ರಮದ ಮೂಲಕ ಸಂಸ್ಕೃತಿ ಬಿಂಬಿಸುತ್ತಾ ಹಾಸ್ಯದ ಮೂಲಕ ಭಾಷಿ, ಬದುಕನ್ನ ತೋರಿಸಿಕೊಟ್ಟರು.
ಕುಂದಾಪ್ರ ಕನ್ನಡದ ರಾಯಭಾರಿ ಎಂದೇ ಖ್ಯಾತಿಯಾಗಿರುವ ಮನು ಹಂದಾಡಿ ಕುಂದಾಪುರ ಭಾಷೆಯಲ್ಲಿ ಹಾಸ್ಯದ ಮೂಲಕವೇ ಭಾಷೆ ಮಹತ್ವ ಸಾರಿದರು. ತಮ್ಮ ಮಾತಿನ ಕೊನೆಯವರೆಗೂ ಪ್ರೇಕ್ಷಕರನ್ನು ನೆಗೆಗಡಲಲ್ಲಿ ತೇಲಿಸಿದರು.ಕುಂದಾಪ್ರ ಕಟ್ಕಟ್ಲೆ ಕಾರ್ಯಕ್ರಮದ ಮೂಲಕ ಈ ಭಾಗದ ಮಹತ್ವದ ಸಂಸ್ಕ್ರತಿಯನ್ನು ಪರಿಚಯಿಸಲಾಯಿತು.
ಬೆಂಗಳೂರಿನ ಹಲವರಿಗೆ ಕುಂದಾಪುರ ವೈಶಿಷ್ಟ್ಯ ವಿಭಿನ್ನ ಹಬ್ಬದ ಬಗೆಗಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನವರಾತ್ರಿಯ ಸಮಯದಲ್ಲಿನ ಕಟ್ಟೆ ಪೂಜೆ, ಹುಲಿ ವೇಷ ಆರ್ಭಟವನ್ನ ಪರಿಚಯಿಸಲಾಯಿತು. ಬಲೀಂದ್ರ ಪೂಜೆಯ ಮೌಲ್ಯವನ್ನು ಕಾರ್ಯಕ್ರಮದ ಮೂಲಕ ತಿಳಿಸಲಾಯ್ತು. ಇದೀಗ ವಿರಳವಾಗಿ ಕಾಣ ಸಿಗುವ ವಸಂತ ಕುಣಿತದ ಹೌದರಾಯನ ವಾಲಗದ ಕುಣಿತವನ್ನು ಬೆಂಗಳೂರನಲ್ಲಿ ಪ್ರದರ್ಶಿಸಿದ್ದು ವಿಶೇಷವಾಗಿತ್ತು.
ಹಾಗೇ ಭಜನಾ ಕುಣಿತವನ್ನು ಪ್ರದರ್ಶಿಸಿ ಭಕ್ತಿ ಭಾವ ಮೆರೆಯಲಾಯ್ತು.ಯಕ್ಷಗಾನ ಅಂದರೆ ಕರಾವಳಿ ಭಾಗದಲ್ಲಿ ಆರಾಧಿಸಿ ಪೂಜಿಸುವರಿದ್ದಾರೆ.ವಿಶ್ವಕುಂದಾಪ್ರ ದಿನದ ವಿಶೇಷ ಸಂದರ್ಭದಲ್ಲಿ ವೀರ ಅಭಿಮನ್ಯು ಕಾಳಗದ ಯಕ್ಷಗಾನದಲ್ಲಿ ಅಭಿಮನ್ಯುವನ್ನು ಯುದ್ದಭೂಮಿಗೆ ಸುಭದ್ರೆ ನೋವಿನಿಂದಲೇ ಕಳುಹಿಸಿಕೊಡುವ ಸಂದರ್ಭದ ಯಕ್ಷಗಾನ ತುಣುಕನ್ನು ತೋರಿಸಲಾಯಿತು. ದಿಮ್ಸಾಲ್, ತುಳಸಿ ಪೂಜೆ ಸೇರಿ ಸಂಸ್ಕೃತಿಯ ಅನಾವರಣವನ್ನು ಬೆಂಗಳೂರಿನಲ್ಲಿ ಪ್ರದರ್ಶಿಸಿಸಲಾಯಿತು. ಒಟ್ಟಿನಲ್ಲಿ ವಿಶ್ವಕುಂದಾಪ್ರ ಕನ್ನಡ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ