ವರ್ಷದ ಸಂಭ್ರಮಕ್ಕೆ ಅಷ್ಟ ಸಿಹಿ ಕೊಡುಗೆ
Team Udayavani, Jul 29, 2022, 7:20 AM IST
ಬಿಜೆಪಿ ಸರಕಾರಕ್ಕೆ ಮೂರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜನತೆಗೆ “ಅಷ್ಟ ಸಿಹಿ’ ನೀಡಿದೆ. ಪ್ರವೀಣ್ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಜನೋತ್ಸವ ಕಾರ್ಯಕ್ರಮದಿಂದ ಹಿಂದೆ ಸರಿದ ಸಿಎಂ ವಿಧಾನಸೌಧದಲ್ಲಿಯೇ ಅಷ್ಟ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಈ ಯೋಜನೆಗಳ ಮೂಲಕ ಸಮೃದ್ಧ ಕರ್ನಾಟಕ ಕಟ್ಟುವುದೇ ಸರಕಾರದ ಗುರಿ ಎಂದಿದ್ದಾರೆ.
75 ಸಾವಿರ ಮಕ್ಕಳಿಗೆ ವಿದ್ಯಾನಿಧಿ ವಿಸ್ತರಣೆ:
ಆರಂಭದಲ್ಲಿ ರೈತರ ಮಕ್ಕಳಿಗೆ ಮಾತ್ರ ಮೀಸ ಲಾಗಿದ್ದ ಈ ಯೋಜನೆಯನ್ನು ನೇಕಾರ, ಮೀನು ಗಾರ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿಸ್ತರಿಸಿರು ವುದರಿಂದ 75 ಸಾವಿರ ಮಕ್ಕಳಿಗೆ ಅನುಕೂಲವಾಗಲಿದೆ.
75 ಯುನಿಟ್ ವರೆಗೆ ಉಚಿತ ವಿದ್ಯುತ್ :
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಡ ಕುಟುಂಬ ಗಳಿಗೆ ಉಚಿತವಾಗಿ 75 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯಡಿ ಡಿಬಿಟಿ ವರ್ಗಾವಣೆ ಪ್ರಾರಂಭ. ಇದರಿಂದ 25 ಲಕ್ಷ ಫಲಾನುಭವಿಗಳಿಗೆ ಸಹಾಯ. ಇದಕ್ಕಾಗಿ 700 ಕೋ.ರೂ. ಮೀಸಲು
ಪ್ರತೀ ಕ್ಷೇತ್ರದಲ್ಲಿ ಸ್ವಯಂ ಉದ್ಯೋಗ :
ಬಾಬು ಜಗಜೀವನ್ ರಾಂ ಹೆಸರಿನಲ್ಲಿ ಸ್ವಯಂ ಉದ್ಯೋಗ ಯೋಜನೆ ವ್ಯಾಪ್ತಿಯಲ್ಲಿ ಪ್ರತೀ ವಿಧಾನ ಸಭಾ ಕ್ಷೇತ್ರದಲ್ಲಿ 100 ಪರಿಶಿಷ್ಟ ಜಾತಿ, ಪಂಗಡದ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಅವಕಾಶ.
ವಿವೇಕ ಯೋಜನೆ:
ಶಿಕ್ಷಣ ಮತ್ತು ಅದರ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವ ಸಲುವಾಗಿ “ವಿವೇಕ’ ಯೋಜನೆ ಜಾರಿ. ಅದರ ವ್ಯಾಪ್ತಿಯಲ್ಲಿ ಮೊದಲ ಬಾರಿಗೆ 8 ಸಾವಿರ ಶಾಲಾ ಕೊಠಡಿಗಳ ನಿರ್ಮಾಣ.
ಆರೋಗ್ಯ ಕೇಂದ್ರ ಉನ್ನತ ಮಟ್ಟಕ್ಕೆ :
ರಾಜ್ಯದ 100 ಪ್ರಾಥಮಿಕ ಆರೋಗ್ಯ ಕೇಂದ್ರ ಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತ ಮಟ್ಟಕ್ಕೇರಿಸುವ ಯೋಜನೆಗೆ ಚಾಲನೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 71 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ.
ಸುಲಭ ಸಾಲ ಯೋಜನೆ :
ಸ್ತ್ರೀಶಕ್ತಿ ಸಂಘಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ 1.50 ಲಕ್ಷ ರೂ. ನೀಡುವ ಜತೆಗೆ ಸುಲಭವಾಗಿ ಸಾಲ ಸೌಲಭ್ಯ ಒದಗಿಸಲು ಆ್ಯಂಕರ್ ಬ್ಯಾಂಕ್ ಜೋಡಣೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ನೀಡುವ “ಸ್ತ್ರೀ ಸಾಮರ್ಥ್ಯ ಯೋಜನೆ’ಗೆ ಚಾಲನೆ. ಸುಮಾರು 5 ಲಕ್ಷ ಮಹಿಳೆಯರ ಸ್ವಾವಲಂಬನೆಗೆ ಆಮೂಲಾಗ್ರ ನೆರವು.
ವಿವೇಕಾನಂದ ಸ್ವಸಹಾಯ ಸಂಘ :
ರಾಜ್ಯದ ಸುಮಾರು 28 ಸಾವಿರ ಗ್ರಾಮಗಳಲ್ಲಿ ತಲಾ ಒಂದು ವಿವೇಕಾನಂದ ಸ್ವಸಹಾಯ ಸಂಘ ರಚಿಸಿ ಯುವಕರಿಗೆ ಆರ್ಥಿಕ ನೆರವು, ಬ್ಯಾಂಕ್ ವ್ಯವಸ್ಥೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಯೋಜನೆ. ಇದರಿಂದ 5 ಲಕ್ಷ ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗುವ ಅವಕಾಶ.
ಪುಣ್ಯಕೋಟಿ ದತ್ತು ಯೋಜನೆ :
ಗೋವುಗಳ ಸಂರಕ್ಷಣೆಯಲ್ಲಿ ಜನರ ಪಾಲು ದಾರಿಕೆಯನ್ನು ಉತ್ತೇಜಿಸಲು ಪುಣ್ಯಕೋಟಿ ದತ್ತು ಯೋಜನೆ ಜಾರಿ. ಈ ಯೋಜನೆಗೆ ಸಂಬಂಧಿಸಿದ ವೆಬ್ಸೈಟ್ ಲೋಕಾರ್ಪಣೆ. ಪ್ರತಿಯೊಬ್ಬ ವ್ಯಕ್ತಿಯೂ ವಾರ್ಷಿಕ 11,000 ರೂ. ಪಾವತಿಸಿ, ಒಂದು ಗೋವಿನ ಒಂದು ವರ್ಷದ ನಿರ್ವಹಣೆ ಮಾಡಬಹುದಾಗಿದೆ. ಗೋವು ದತ್ತು ಪಡೆಯಬಹುದು ಅಥವಾ 11 ಸಾವಿರ ರೂ. ನೀಡಿದರೆ ಗೋಶಾಲೆಗಳವರೇ ನೋಡಿಕೊಳ್ಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ