ಗುಡಿವಾಡ: 8ನೇ ತರಗತಿ ವಿದ್ಯಾರ್ಥಿ ಜತೆ ಎರಡು ಮಕ್ಕಳ ತಾಯಿ ಪರಾರಿ…
ವಿದ್ಯಾರ್ಥಿ ನಾಪತ್ತೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸಿದಾಗ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
Team Udayavani, Jul 29, 2022, 12:50 PM IST
ಹೈದರಾಬಾದ್: ಎರಡು ಮಕ್ಕಳ ತಾಯಿ (30ವರ್ಷ) 8ನೇ ತರಗತಿ ವಿದ್ಯಾರ್ಥಿ ಜತೆ ಓಡಿ ಹೋದ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಗುಡಿವಾಡ ನಗರದ ಈ ಮಹಿಳೆ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದ ಬಾಲಕನ ಜತೆ ನಿಕಟ ಸಂಬಂಧ ಹೊಂದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಇದನ್ನೂ ಓದಿ:ಮಂಗಳೂರು: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ
ಜುಲೈ 19ರಿಂದ 8ನೇ ತರಗತಿ ವಿದ್ಯಾರ್ಥಿ ನಾಪತ್ತೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸಿದಾಗ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿ ತಂದೆ ತನ್ನ ಮಗ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದರು.
ಈಕೆ ಬಾಲಕನ ಜತೆ ದೈಹಿಕ ಸಂಬಂಧ ಹೊಂದಿದ್ದು, ಆಗಾಗ್ಗೆ ಈಕೆಯ ಮನೆಗೆ ಹೋಗುತ್ತಿದ್ದ ಬಗ್ಗೆ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿಚಾರವನ್ನು ಬಾಲಕ ಮಹಿಳೆ ಬಳಿ ಹೇಳಿಕೊಂಡಾಗ ಇಬ್ಬರೂ ಓಡಿ ಹೋಗುವ ಬಗ್ಗೆ ಸಿದ್ಧತೆ ಮಾಡಿಕೊಂಡಿದ್ದರು ಎಂದು ವರದಿ ವಿವರಿಸಿದೆ.
ಆಕೆ ಎಲ್ಲಿಗೆ ಹೋಗಿದ್ದಾಳೆ ಎಂಬ ಬಗ್ಗೆ ಪತಿಗಾಗಲಿ, ಮಕ್ಕಳಿಗಾಗಲಿ ಯಾವುದೇ ಸುಳಿವು ಸಿಕ್ಕಿರಲಿಲ್ಲವಾಗಿತ್ತು. ಏತನ್ಮಧ್ಯೆ ಹೈದರಬಾದ್ ನಲ್ಲಿ ಮಹಿಳೆ ಕೆಲವು ದಿನ ಕಾಲ ಕಳೆದಿದ್ದಳು. ಆಗ ಮಹಿಳೆ ತನ್ನ ಬಳಿ ಹಣ ಖಾಲಿಯಾಗಿದೆ ಎಂದು ಹುಡುಗನ ಬಳಿ ಹೇಳಿದ್ದಳು. ಈತ ಕೆಲವು ಗೆಳೆಯರಿಗೆ ಕರೆ ಮಾಡಿ ಹಣಕಾಸಿನ ನೆರವು ನೀಡುವಂತೆ ಕೇಳಿಕೊಂಡಿದ್ದ. ಆದರೆ ಗೆಳೆಯರು ಪ್ರತಿಕ್ರಿಯೆ ನೀಡದಿದ್ದಾಗ, ಬಾಲಕ ಪೋಷಕರಿಗೆ ಕರೆ ಮಾಡಿ ಮನೆಗೆ ವಾಪಸ್ ಬರುವುದಾಗಿ ತಿಳಿಸಿದ್ದ!
ಬಾಲಕನ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ ನಂತರ ಜುಲೈ 26ರಂದು ಹೈದರಾಬಾದ್ ನ ಬಾಲಾನಗರ್ ಪ್ರದೇಶದಲ್ಲಿ ಮಹಿಳೆ ಮತ್ತು ಬಾಲಕನನ್ನು ಪತ್ತೆ ಹಚ್ಚಲಾಗಿತ್ತು ಎಂದು ಗುಡಿವಾಡ ಪೊಲೀಸ್ ಇನ್ಸ್ ಪೆಕ್ಟರ್ ದುರ್ಗಾ ರಾವ್ ತಿಳಿಸಿದ್ದಾರೆ. ಮಹಿಳೆಯನ್ನು ಸ್ವಪ್ನಾ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
MUST WATCH
ಹೊಸ ಸೇರ್ಪಡೆ
BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್ ಜಾಮ್
Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ
Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್ ಮಾಡಿಸಲು ಕ್ರಮ: ಪರಂ
Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫಲ್ಯ ಕಾರಣ: ಅಶೋಕ್
Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ