ಪೋಷಕಾಂಶ; ಬಾಯಿರುಚಿ ಹೆಚ್ಚಿಸುವ ತಂಬುಳಿಗಳು

ತಂಬುಳಿ ತಯಾರಿಸಿ ಸೇವಿಸುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತವೆ

Team Udayavani, Jul 29, 2022, 3:47 PM IST

ಬಾಯಿರುಚಿ ಹೆಚ್ಚಿಸುವ ತಂಬುಳಿಗಳು

ಬೇಸಿಗೆಗಾಲದಲ್ಲಿ ತಂಬುಳಿಗಳು ನಮ್ಮ ದೇಹವನ್ನು ತಂಪಾಗಿಡುವುದಲ್ಲದೆ ಆರೋಗ್ಯ ಸುಧಾರಣೆಗೂ ಉತ್ತಮ. ಹಿತ್ತಲಿನಲ್ಲಿ ದೊರೆಯುವ ಬಸಳೆ ಸೊಪ್ಪು , ಬೇವಿನ ಸೊಪ್ಪಿನಿಂದ ತಂಬುಳಿ ತಯಾರಿಸಿ ಸೇವಿಸುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತವೆ. ಇಲ್ಲಿವೆ ಅಂತಹ ಕೆಲವು ರಿಸಿಪಿಗಳು.

ಬಸಳೆ ಚಿಗುರು ತಂಬುಳಿ
ಬೇಕಾಗುವ ಸಾಮಗ್ರಿ: ಒಂದು ಹಿಡಿ ಬಸಳೆ ಚಿಗುರು, ಜೀರಿಗೆ- 1 ಚಮಚ, ಸಣ್ಣ ತುಂಡು ಬೆಲ್ಲ, ಮಜ್ಜಿಗೆ- 3 ಸೌಟು (ಹುಳಿ ಇದ್ದರೆ ಕಡಿಮೆ ಸಾಕು), ಉಪ್ಪು ರುಚಿಗೆ, ಚೂರು ಬೆಣ್ಣೆ, ಹಸಿ ತೆಂಗಿನತುರಿ- 1 ಕಪ್‌. ಒಗ್ಗರಣೆಗೆ : ಮೆಣಸು, ಸಾಸಿವೆ, ಬೆಣ್ಣೆ ಚೂರು.

ತಯಾರಿಸುವ ವಿಧಾನ: ಬಸಳೆ ಚಿಗುರನ್ನು ಜೀರಿಗೆ, ಬೆಣ್ಣೆ ಹಾಕಿ ಹುರಿಯಬೇಕು. ಸ್ವಲ್ಪ ತಣ್ಣಗಾದ ಮೇಲೆ ತೆಂಗಿನತುರಿಯೊಂದಿಗೆ ನುಣ್ಣಗೆ ಬೀಸಬೇಕು. ಅದಕ್ಕೆ ಬೆಲ್ಲ , ಉಪ್ಪು, ಮಜ್ಜಿಗೆ, ಬೇಕಾದಷ್ಟು ನೀರು ಹಾಕಿ ಒಗ್ಗರಣೆ ಹಾಕಿದರೆ ಬಸಳೆ ಚಿಗುರು ತಂಬುಳಿ ತಯಾರು.

ಬೇವಿನ ಸೊಪ್ಪು ತಂಬುಳಿ
ಬೇಕಾಗುವ ಸಾಮಗ್ರಿ: ಬೇವಿನಸೊಪ್ಪು- 1 ಹಿಡಿ, ಜೀರಿಗೆ- 1 ಚಮಚ, ಒಳ್ಳೆ ಮೆಣಸು- 5 ಕಾಳು, ಹಸಿ ತೆಂಗಿನತುರಿ- 2 ಕಪ್‌, ಮಜ್ಜಿಗೆ- 2 ಸೌಟು, ಬೆಣ್ಣೆ- 1/2 ಚಮಚ, ಒಗ್ಗರಣೆಗೆ : ಒಣಮೆಣಸು, ಸಾಸಿವೆ, ಚೂರು ತುಪ್ಪ.

ತಯಾರಿಸುವ ವಿಧಾನ: ಶುದ್ಧೀಕರಿಸಿದ ಬೇವಿನಸೊಪ್ಪನ್ನು, ಜೀರಿಗೆ ಬೆಣ್ಣೆ ಹಾಕಿ ಹುರಿದುಕೊಳ್ಳಬೇಕು. ಹುರಿದ ಬೇವಿನಸೊಪ್ಪನ್ನು ತೆಂಗಿನತುರಿಯೊಂದಿಗೆ ನುಣ್ಣಗೆ ಬೀಸಿಕೊಳ್ಳಬೇಕು. ಬೀಸಿದ ಮಿಶ್ರಣಕ್ಕೆ ಮಜ್ಜಿಗೆ ಉಪ್ಪು ಹಾಕಿ ತಕ್ಕಷ್ಟು ನೀರು ಹಾಕಿ ಕುದಿಸಬೇಕು. ಸಣ್ಣಗೆ ಕುದಿಯುವಾಗ ಒಗ್ಗರಣೆ ಹಾಕಿದರೆ ಬೇವಿನಸೊಪ್ಪು ತಂಬುಳಿ ತಯಾರು.
ಉಪ್ಪಿನಕಾಯಿ ಮಿಡಿ ತಂಬುಳಿ

ಬೇಕಾಗುವ ಸಾಮಗ್ರಿ: ಉಪ್ಪಿನಕಾಯಿ ಮಿಡಿ- 2, ತೆಂಗಿನತುರಿ- 1 ಕಪ್‌, ಮಜ್ಜಿಗೆ – 2 ಸೌಟು, ಒಗ್ಗರಣೆಗೆ : ಎಣ್ಣೆ , ಮೆಣಸು, ಸಾಸಿವೆ.
ತಯಾರಿಸುವ ವಿಧಾನ: ಉಪ್ಪಿನಕಾಯಿ ಮಿಡಿಯನ್ನು ತೊಳೆದು ಹೆಚ್ಚಿನ ಖಾರ ತೆಗೆದುಬಿಡಬೇಕು. ಆಮೇಲೆ ಮಾವಿನ ಮಿಡಿಯನ್ನು ಮತ್ತು ತೆಂಗಿನತುರಿಯನ್ನು ನುಣ್ಣಗೆ ಬೀಸಬೇಕು. ಆ ಮಿಶ್ರಣವನ್ನು ಮಜ್ಜಿಗೆ, ಬೇಕಿದ್ದರೆ ಸ್ವಲ್ಪ ಉಪ್ಪು , ನೀರು ಹಾಕಿ ಕುದಿಸಬೇಕು. ಸಣ್ಣ ಕುದಿ ಬಂದಾಗ ಮೆಣಸು, ಸಾಸಿವೆ ಎಣ್ಣೆ ಹಾಕಿ ಒಗ್ಗರಣೆ ಕೊಟ್ಟರೆ ರುಚಿ ರುಚಿಯಾದ ಪರಿಮಳಯುಕ್ತ ತಂಬುಳಿ ತಯಾರು.

ಮೆಂತೆ ತಂಬುಳಿ
ಬೇಕಾಗುವ ಸಾಮಗ್ರಿ: ಮೆಂತೆ- 1 ಚಮಚ, ಸಣ್ಣ ತುಂಡು ಬೆಲ್ಲ, ಹುಳಿ ಮಜ್ಜಿಗೆ- 1 ಸೌಟು, ರುಚಿಗೆ ಉಪ್ಪು, ಚೂರು ಎಣ್ಣೆ ಅಥವಾ ಬೆಣ್ಣೆ. ತೆಂಗಿನತುರಿ- 1 ಕಪ್‌, ಕಾಳುಮೆಣಸು- 4 ಕಾಳು.

ತಯಾರಿಸುವ ವಿಧಾನ: ಮೆಂತೆಗೆ ಚೂರು ಎಣ್ಣೆ ಅಥವಾ ಬೆಣ್ಣೆ ಹಾಕಿ ಪಟಪಟ ಶಬ್ದ ಕೇಳುವಷ್ಟು ಹುರಿದುಕೊಳ್ಳಬೇಕು. ಹುರಿದ ಮೆಂತೆಯನ್ನು ತೆಂಗಿನತುರಿಯೊಂದಿಗೆ ಮಜ್ಜಿಗೆ ಉಪ್ಪು ಹಾಕಿ ನುಣ್ಣಗೆ ಬೀಸಬೇಕು. ಈ ಮಿಶ್ರಣಕ್ಕೆ ಬೆಲ್ಲ ತಕ್ಕಷ್ಟು ನೀರು ಸೇರಿಸಿ ಮೆಣಸು, ಸಾಸಿವೆ ಒಗ್ಗರಣೆ ಕೊಟ್ಟರೆ ಮೆಂತೆ ತಂಬುಳಿ ತಯಾರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.