ಸಿಎಂ ಭೇಟಿ ಮಾಡಿದ ನ್ಯೂ ಸೌತ್ ವೇಲ್ಸ್ ಪ್ರೀಮಿಯರ್ ಡೊಮಿನಿಕ್ ಪೆರೊಟ್ವೆಟ್

ಸೈಬರ್ ಸುರಕ್ಷತಾ ನೀತಿ ಮತ್ತು ಶ್ರೇಷ್ಠತಾ ಕೇಂದ್ರಗಳ ಬಗ್ಗೆ ಉತ್ಸುಕತೆ

Team Udayavani, Jul 29, 2022, 7:09 PM IST

1-sdssa

ಬೆಂಗಳೂರು: ಆಸ್ಟೇಲಿಯಾದ ನ್ಯೂ ಸೌತ್ ವೇಲ್ಸ್ ಪ್ರೀಮಿಯರ್ ಡೊಮಿನಿಕ್ ಪೆರೊಟ್ವೆಟ್ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿತು.

ಆಸ್ಟ್ರೀಲಿಯಾ ಸರ್ಕಾರವು ಇಂಡಿಯಾ ಆರ್ಥಿಕ ಕಾರ್ಯತಂತ್ರಕ್ಕಾಗಿ 280 ಮಿಲಿಯನ್ ಡಾಲರ್ ಗಳ ಅನುದಾನವನ್ನು ಒದಗಿಸಿದೆ. ಭಾರತದೊಂದಿಗೆ ಆರ್ಥಿಕ ಪಾಲುದಾರಿಕೆಯನ್ನು ವೃದ್ಧಿಸಲು ಈ ಕಾರ್ಯತಂತ್ರ ಸಹಕಾರಿಯಾಗಲಿದೆ ಎಂದು ಡೊಮಿನಿಕ್ ಪೆರೊಟ್ವೆಟ್ ತಿಳಿಸಿದರು.

ಕರ್ನಾಟಕದಲ್ಲಿ ಸೈಬರ್ ಸುರಕ್ಷತಾ ನೀತಿ ಹಾಗೂ ಶ್ರೇಷ್ಠತಾ ಕೇಂದ್ರಗಳ ಬಗ್ಗೆ ಉತ್ಸುಕತೆ ತೋರಿದ ಅವರು ಆಸ್ಟ್ರೇಲಿಯಾ ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಆಸ್ಟ್ರೇಲಿಯಾ ಸತತವಾಗಿ ನಾಲ್ಕು ವರ್ಷಗಳೂ ಭಾಗಿಯಾಗಿದೆ. ಈ ವರ್ಷವೂ ಭಾಗವಹಿಸಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಗತ್ತಿನ ವಿವಿಧ ದೇಶಗಳ ಮುಖ್ಯಸ್ಥರು ಹಿಂದೆ ನವದೆಹಲಿಗೆ ಭೇಟಿ ನೀಡುತ್ತಿದ್ದರು. ಆದರೆ ಈಗ ಅವರೆಲ್ಲರೂ ಬೆಂಗಳೂರಿಗೆ ಇನ್ಫೋಸಿಸ್ ಹಾಗೂ ವಿಪ್ರೋ ಮುಂತಾದ ಸಂಸ್ಥೆಗಳಿಗೆ ಭೇಟಿ ನೀಡುತ್ತಾರೆ. ಜ್ಞಾನವೇ ಶಕ್ತಿ ಎನ್ನುವುದು ಈ ಮೂಲಕ ನಿರೂಪಿತವಾಗಿದೆ. ಕರ್ನಾಟಕ ರಾಜ್ಯ ಆರ್ ಅಂಡ್ ಡಿ, ಜೆನಿಟಿಕ್ಸ್, ಏರೋಸ್ಪೇಸ್, ಶಿಕ್ಷಣ ಆರೋಗ್ಯ, ನಾವೀನ್ಯತೆ, ಎಲೆಕ್ಟ್ರಿಕ್ ವೆಹಿಕಲ್, ಮುಂತಾದ ವಲಯಗಳಲ್ಲಿ ಮುಂಚೂಣಿಯಲ್ಲಿದ್ದು ಹೂಡಿಕೆಗಳಿಗೆ ಪ್ರಶಸ್ತ ಸ್ಥಳ ಎಂದು ವಿವರಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸುಧಾರಣೆ ಕಾಣುತ್ತಿದ್ದು, ರಸ್ತೆ ಸಂಪರ್ಕಗಳು ಉತ್ತಮಗೊಂಡಿವೆ. ಶಾಲೆ, ಆರೋಗ್ಯ ಹಾಗೂ ಡಿಜಿಟಲ್ ಸಂಪರ್ಕಗಳನ್ನೂ ಇನ್ನೂ ಹೆಚ್ಚಿನ ರೀತಿಯಲ್ಲಿ ಸುಧಾರಿಸಲು ನಮ್ಮ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದರು. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಮಧ್ಯೆ ಅಸಮಾನತೆ ಇದ್ದು, ಅದರ ನಿವಾರಣೆಗೆ ಸರ್ಕಾರ ನಿರ್ದಿಷ್ಟ ಕ್ರಮಗಳನ್ನು ಕೈಗೊಂಡಿದೆ. ಗ್ರಾಮೀಣ ಪ್ರದೇಶದಲ್ಲಿರುವವರಿಗೆ ಉದ್ಯೋಗಾವಕಾಶಗಳನ್ನು ಒದಗಿಸಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವುದು ನಮ್ಮ ಗುರಿ ಎಂದರು.

ಕರ್ನಾಟಕ ಸಂಪದ್ಭರಿತ ರಾಜ್ಯವಾಗಿದ್ದು, ಹತ್ತು ಕೃಷಿ ಹವಾಮಾನ ವಲಯಗಳನ್ನು ಹೊಂದಿದೆ. ಇಲ್ಲಿನ ಜನ ಉದ್ಯಮಶೀಲರಾಗಿದ್ದಾರೆ ಎಂದರು. ಬೆಂಗಳೂರಿನಲ್ಲಿರಬಹುದಾದ ಸವಾಲುಗಳ ಬಗ್ಗೆ ಡೊಮಿನಿಕ್ ಪೆರೊಟ್ವೆಟ್ ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಬೆಂಗಳೂರಿನ ವಾಹನಗಳ ಸಂಖ್ಯೆ ಹಾಗೂ ಸಂಚಾರ ದಟ್ಟಣೆ ಸವಾಲುಗಳಾಗಿವೆ. ಸಂಚಾರ ದಟ್ಟಣೆಯನ್ನು ನಿವಾರಿಸಲು ಸಬ್ ಅರ್ಬನ್ ರೈಲು ಹಾಗೂ ಮೆಟ್ರೋ ಯೋಜನೆಗಳು ಸಹಕಾರಿಯಾಗಿವೆ ಎಂದರು.

ನಿಯೋಗದಲ್ಲಿ ಆಸ್ಟ್ರೇಲಿಯಾ ಕೌನ್ಸಿಲ್ ಜನರಲ್ ಸಾರಾ ಕಿಲ್ರ್ಯೂ, ಮೈಕಲ್ ಕೌಟ್ಸ್ ಟ್ರಾಟ್ಟರ್, ಐಟಿ ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ್ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.