ಮುದ್ದೇಬಿಹಾಳ: ಸಿಡಿಲಿಗೆ ಜಾನುವಾರುಗಳು ಬಲಿ
Team Udayavani, Jul 29, 2022, 10:20 PM IST
ಮುದ್ದೇಬಿಹಾಳ: ತಾಲೂಕಿನಾದ್ಯಂತ ಶುಕ್ರವಾರ ಸಂಜೆ ಸಿಡಿಲಿನ ಅಬ್ಬರಕ್ಕೆ ಎರಡು ಪ್ರತ್ಯೇಕ ಗ್ರಾಮ ವ್ಯಾಪ್ತಿಯಲ್ಲಿ ಜಾನುವಾರುಗಳು ಬಲಿಯಾಗಿವೆ.
ಸಿದ್ದಾಪೂರ ಪಿಟಿ ಗ್ರಾಮದಲ್ಲಿ ಬಸಪ್ಪ ಗೋಡಿಕಾರ ಅವರಿಗೆ ಸೇರಿದ ಆಕಳು, ನೇಬಗೇರಿ ಗ್ರಾಮದಲ್ಲಿ ಶಿವಪ್ಪ ಬಿಸಲದಿನ್ನಿ ಅವರಿಗೆ ಸೇರಿದ ನಾಲ್ಕು ಆಡು, ಒಂದು ಕುರಿ ಸಾವನ್ನಪ್ಪಿವೆ.
ನೇಬಗೇರಿಯಲ್ಲಿ ಸಿಡಿಲಿನ ಹೊಡೆತಕ್ಕೆ ಮರದ ಬುಡದಲ್ಲಿರುವ ಮೇಲ್ಪದರು ಕಿತ್ತಿ ಹೋಗಿದ್ದು ಮರಕ್ಕೆ ಕಟ್ಟಿದ್ದ ಆಡು, ಕುರಿ ಒಂದೇ ಏಟಿಗೆ ಸಾವನ್ನಪ್ಪಿರುವುದು ಸ್ಥಳದಲ್ಲಿ ಕಂಡು ಬಂತು.
ಇದೇ ವೇಳೆ ಕುರಿ ಕಾಯಲು ಹೋಗಿದ್ದ ಯಮನಪ್ಪ ಬಿಸಲದಿನ್ನಿ ಹಾಗೂ ಬಸವರಾಜ ಮಕಾಶಿ ಅವರು ಆಶ್ರಯಕ್ಕಾಗಿ ಮರದ ಕೆಳಗೆ ನಿಂತಿದ್ದರೂ ಸಿಡಿಲಿನ ಹೊಡೆತದಿಂದ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಕಂದಾಯ ನಿರೀಕ್ಷಕ ಮಹಾಂತೇಶ ಮಾಗಿ ಈ ಕುರಿತು ಮಾಹಿತಿ ಸಂಗ್ರಹಿಸಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ