4 ಸಾವಿರ ಮನೆಗಳಿಗೆ ‘ಬೆಳಕು’ ನೀಡಲು ಬಾಕಿ


Team Udayavani, Jul 30, 2022, 1:32 PM IST

9

ಉಡುಪಿ: ಬಡತನ ರೇಖೆಗಿಂತ ಕೆಳಗಿ ರುವ ಕುಟುಂಬಗಳಲ್ಲಿ ವಿದ್ಯುತ್‌ ಸಂಪರ್ಕವಿಲ್ಲದ ಮನೆಗಳಿಗೆ ವಿದ್ಯುತ್‌ ಒದಗಿಸುವ ರಾಜ್ಯಸರಕಾರದ ಮಹತ್ವಾಕಾಂಕ್ಷೆ “ಬೆಳಕು’ ಯೋಜನೆ ಮೂಲಕ ಜಿಲ್ಲೆಯಲ್ಲಿ ಪ್ರಥಮ ಹಂತದಲ್ಲಿ 3,500 ಮನೆಗಳಿಗೆ ವಿದ್ಯುತ್‌ ಸಂಪರ್ಕ ನೀಡಲಾಗಿದ್ದು, ಇನ್ನೂ 4 ಸಾವಿರ ಮನೆಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸಲು ಬಾಕಿ ಉಳಿದಿದೆ.

ಪ್ರಾರಂಭಿಕ ಹಂತದಲ್ಲಿ ಗ್ರಾ.ಪಂ. ನಿರಾಕ್ಷೇಪಣ ಪತ್ರಗಳನ್ನು ಕಡ್ಡಾಯ ಮಾಡಲಾಗಿತ್ತು. ಇದರಿಂದ ಗ್ರಾಮಾಂತರ ಭಾಗದ ನಿವಾಸಿಗಳಿಗೆ ತೊಂದರೆ ಉಂಟಾಗಿತ್ತು. ಬಳಿಕ ಯಾವುದೇ ದಾಖಲೆಗಳು ಬೇಡ. ಆಧಾರ್‌ ಕಾರ್ಡ್‌ ಅಥವಾ ವಾಸವಾಗಿರುವ ಮನೆಗೆ ಸಂಬಂಧಿಸಿದ ದಾಖಲೆ ನೀಡಿದರೆ ಸಾಕು ಎಂದು ಸಚಿವರು ಸೂಚಿಸಿದ್ದರು. ಅದರಂತೆ ಈಗ ಎನ್‌ಒಸಿ ಇಲ್ಲದೆಯೇ ಅರ್ಹರಿಗೆ ವಿದ್ಯುತ್‌ ಸಂಪರ್ಕ ನೀಡಲಾಗುತ್ತಿದೆ.

ನೀಡಲಾಗಿರುವ ಸಂಪರ್ಕ

ಜಿಲ್ಲೆಯ ಉಡುಪಿ ವಿಭಾಗದಲ್ಲಿ 593, ಕಾರ್ಕಳ ವಿಭಾಗದಲ್ಲಿ 1139, ಕುಂದಾಪುರ ವಿಭಾಗದಲ್ಲಿ 1,817 ಸಹಿತ ಒಟ್ಟು 3,549 ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಇದಕ್ಕಾಗಿ 4 ಸಾವಿರಕ್ಕೂ ಅಧಿಕ ಅರ್ಜಿಗಳು ಫ‌ಲಾನುಭವಿಗಳಿಂದ ಬಂದಿತ್ತು.

ಬಾಕಿ ಉಳಿಕೆಗೆ ಕಾರಣ

ಜಿಲ್ಲೆಯ ಕುಂದಾಪುರ, ಬೈಂದೂರು ಭಾಗದಲ್ಲಿ ಹೆಚ್ಚಿನ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಬಾಕಿ ಇದೆ. ಕೆಲವೊಂದು ಮನೆಗಳಿಗೆ ಸಂಪರ್ಕ ಒದಗಿಸಲು ಹಲವಾರು ತಂತಿಕಂಬಗಳನ್ನು ಹಾಕಬೇಕಾಗುತ್ತದೆ. ಹಾಗೆಯೇ ಈ ಯೋಜನೆ ಬಂದ ಬಳಿಕ ಹಲವಾರು ಮಂದಿ ಸಣ್ಣ-ಪುಟ್ಟ ಮನೆಗಳನ್ನು ಮಾಡಿಕೊಂಡು ವಾಸ್ತವ್ಯ ಹೂಡಿ ಅವರೂ ಬೆಳಕು ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಎಲ್ಲ ಕಾರಣ ಗಳಿಂದಾಗಿ 4 ಸಾವಿರದಷ್ಟು ಹೊಸ ಸಂಪರ್ಕ ನೀಡಲು ಬಾಕಿ ಉಳಿದಿದೆ.

ಸೂಕ್ತ ಪರಿಶೀಲನೆ

ಬೆಳಕು ಯೋಜನೆಗೆ ನೋಂದಣಿ ಮಾಡಿರುವ ಪ್ರತಿಯೊಬ್ಬ ಫ‌ಲಾನುಭವಿಗಳ ವಿವರಗಳನ್ನು ನೋಡಿ ಮನೆಗಳನ್ನು ಪರಿಶೀಲಿಸುವ ಕೆಲಸ ಮೆಸ್ಕಾಂನಿಂದ ನಡೆಯುತ್ತಿದೆ. ಒಂದೇ ಊರಿನಲ್ಲಿ ವಿದ್ಯುತ್‌ ಸಂಪರ್ಕವಿಲ್ಲದ ಹಲವಾರು ಮನೆಗಳಿದ್ದರೆ ಅವುಗಳನ್ನು ಗುರುತಿಸಿ ಹೆಚ್ಚುವರಿ ಟ್ರಾನ್ಸ್‌ ಫಾರ್ಮರ್‌ಗಳು ಬೇಕಿದ್ದರೆ ಅಳವಡಿಸುವ ಪ್ರಕ್ರಿಯೆ ಹಾಗೂ ಹೆಚ್ಚುವರಿ ವಿದ್ಯುತ್‌ ಕಂಬಗಳು, ತಂತಿಗಳ ಅಳವಡಿಕೆ ಪ್ರಕ್ರಿಯೆಗಳೂ ನಡೆಯಲಿವೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಶೀಘ್ರ ವಿದ್ಯುತ್‌ ಸಂಪರ್ಕ: ಜಿಲ್ಲೆಯಲ್ಲಿ ಈಗಾಗಲೇ 3 ಸಾವಿರಕ್ಕೂ ಅಧಿಕ ಫ‌ಲಾನುಭವಿಗಳು ಬೆಳಕು ಯೋಜನೆಯ ಸೌಲಭ್ಯ ಪಡೆದುಕೊಂಡಿದ್ದಾರೆ. ವಿದ್ಯುತ್‌ ಸಂಪರ್ಕ ಇಲ್ಲದ 4 ಸಾವಿರದಷ್ಟು ಮನೆಗಳನ್ನು ಗುರುತಿಸಲಾಗಿದೆ. ಈ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದ್ದು, ಆದಷ್ಟು ಶೀಘ್ರದಲ್ಲಿ ಇವರಿಗೆ ವಿದ್ಯುತ್‌ ಸಂಪರ್ಕ ನೀಡುವ ಕೆಲಸವಾಗಲಿದೆ. -ನರಸಿಂಹ ಪಂಡಿತ್‌, ಮೆಸ್ಕಾಂ ಅಧೀಕ್ಷಕ ಎಂಜಿನಿಯರ್‌, ಉಡುಪಿ

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.