ತನಿಖೆಗೆ ತೊಡಕಾಗುತ್ತಿದೆ ಕ್ರಿಮಿನಲ್‌ಗ‌ಳ ಕೇರಳ ಸಂಪರ್ಕ

ಉಭಯ ರಾಜ್ಯ ಪೊಲೀಸರ ಸಮನ್ವಯ ಅನಿವಾರ್ಯ

Team Udayavani, Jul 31, 2022, 7:25 AM IST

ತನಿಖೆಗೆ ತೊಡಕಾಗುತ್ತಿದೆ ಕ್ರಿಮಿನಲ್‌ಗ‌ಳ ಕೇರಳ ಸಂಪರ್ಕ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ನಡೆಯುತ್ತಿರುವ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದವರ ಪೈಕಿ ಅನೇಕರಿಗೆ ಕೇರಳದ ಸಂಪರ್ಕ ಇರುವುದು ಪೊಲೀಸರ ತ್ವರಿತ ತನಿಖೆಗೆ ದೊಡ್ಡ ಅಡ್ಡಿಯಾಗಿ ಪರಿಣಮಿಸಿದೆ.

ಬೆಳ್ಳಾರೆಯಲ್ಲಿ ನಡೆದ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮತ್ತೂಮ್ಮೆ ಕೇರಳದ ಸಂಪರ್ಕ ವಿಷಯ ಮುನ್ನೆಲೆಗೆ ಬಂದಿದೆ.

ಶೇ. 20 ಮಂದಿಗೆ ಅಡಗುದಾಣ!
ಕೊಲೆ, ಗಲಭೆಗೆ ಸಂಚು, ಡ್ರಗ್ಸ್‌ ಸಾಗಣೆ, ರೌಡಿಸಂ, ದರೋಡೆ ಮೊದಲಾದ ಹಲವು ಅಪರಾಧಗಳನ್ನು ನಡೆಸಿ ಮಂಗಳೂರು, ಕಾಸರಗೋಡು ಸಹಿತ ಕೇರಳ, ಕರ್ನಾಟಕ ರಾಜ್ಯಗಳ ಕೆಲವೆಡೆ ಅಡಗಿಕೊಳ್ಳುವವರನ್ನು ಪತ್ತೆ ಹಚ್ಚುವುದು ಉಭಯ ರಾಜ್ಯಗಳ ಪೊಲೀಸರಿಗೂ ದೊಡ್ಡ ಸವಾಲಾಗಿದೆ.

ಮಂಗಳೂರು ಪೊಲೀಸರ ಪ್ರಕಾರ ಕರ್ನಾಟಕದಲ್ಲಿ, ಮುಖ್ಯವಾಗಿ ಕರಾವಳಿ ಭಾಗದಲ್ಲಿ ನಡೆಯುವ ಅಪರಾಧ ಚಟುವಟಿಕೆ ಗಳಲ್ಲಿ ಭಾಗಿಯಾಗುವ ಆರೋಪಿಗಳ ಪೈಕಿ ಶೇ. 20ಕ್ಕಿಂತಲೂ ಹೆಚ್ಚು ಮಂದಿ ಕೇರಳದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಉಳಿದಂತೆ ಸುಮಾರು ಶೇ. 30ರಷ್ಟು ಮಂದಿ ಬೆಂಗಳೂರು ಹಾಗೂ ಶೇ. 20ರಷ್ಟು ಮಂದಿ ಮುಂಬಯಿಯಲ್ಲಿ ತಲೆಮರೆಸಿಕೊಳ್ಳುತ್ತಾರೆ.

ಇತರ ರಾಜ್ಯಗಳಿಗೆ ಹೋಲಿಸಿದರೆ ಮುಂಬಯಿ, ಗೋವಾಗಳಲ್ಲಿ ಕರಾವಳಿ ಪೊಲೀಸರ ಸಮನ್ವಯ ವ್ಯವಸ್ಥೆ ಬಲಗೊಂಡಿದೆ. ಇತ್ತೀಚಿನ ವರ್ಷಗಳ ಪ್ರಕರಣಗಳಿಗೆ ಸಂಬಂಧಿಸಿ ಕೇರಳದಲ್ಲಿ ಕೆಲವರನ್ನು ಹಿಡಿದಿದ್ದರೂ ಹಳೆಯ ಕೆಲವು ಪ್ರಕರಣಗಳಲ್ಲಿ ಆರೋಪಿಗಳ ಬಂಧನ ಬಾಕಿ ಇದೆ. ಇದೀಗ ಪ್ರವೀಣ್‌ ಹತ್ಯೆಗೂ ಕೇರಳ ನಂಟು ತಳಕು ಹಾಕಿಕೊಂಡಿದೆ. ಹಾಗಾಗಿ ಉಭಯ ರಾಜ್ಯಗಳ ಪೊಲೀಸ್‌ ಇಲಾಖೆ ಸೇರಿದಂತೆ ಆಡಳಿತ ವರ್ಗ ಉನ್ನತ ಮಟ್ಟದ ಸಮನ್ವಯ ವ್ಯವಸ್ಥೆಗೆ ಗಂಭೀರ ಚಿಂತನೆ ನಡೆಸಿವೆ.

ಶೀಘ್ರ ಸಮನ್ವಯ ವ್ಯವಸ್ಥೆ ನಿರೀಕ್ಷೆ
ಸಮನ್ವಯ ವ್ಯವಸ್ಥೆ ರೂಪುಗೊಂಡರೆ ಎರಡೂ ರಾಜ್ಯಗಳ ಪೊಲೀಸರು ತಮಗೆ ಅಗತ್ಯವಿರುವ ಅಪರಾಧಿಗಳ ಪಟ್ಟಿಯನ್ನು ವಿನಿಮಯ ಮಾಡಿಕೊಳ್ಳಲು ಅನುಕೂಲವಾಗಲಿದೆ. ಇನ್‌ಸ್ಪೆಕ್ಟರ್‌ ದರ್ಜೆಯ ಅಧಿಕಾರಿಗಳು ಪರಸ್ಪರ ನೇರವಾಗಿ ನಿರಂತರವಾಗಿ ಸಂವಹನ ಸಾಧಿಸಲು ನೆರವಾಗಲಿದೆ ಎನ್ನುತ್ತಾರೆ ಹಿರಿಯ ಪೊಲೀಸ್‌ ಅಧಿಕಾರಿಗಳು. ಇತ್ತೀಚೆಗೆ ಎರಡೂ ರಾಜ್ಯಗಳ ಹಿರಿಯ ಪೊಲೀಸರ ಸಭೆ ನಡೆದಿದ್ದು, ಸಮನ್ವಯ ವ್ಯವಸ್ಥೆಯೊಂದು ಶೀಘ್ರ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕ-ಕೇರಳ ಪೊಲೀಸರ ನಿರಂತರ ಸಮನ್ವಯಕ್ಕಾಗಿ ಜುಲೈ ಮೊದಲ ವಾರ ಉಭಯ ರಾಜ್ಯಗಳ ಪೊಲೀಸರ ಸಭೆ ನಡೆಸಿದ್ದೇವೆ. ಕಾಸರಗೋಡು ಮತ್ತು ದ.ಕ. ಎಸ್‌ಪಿಗಳು, ಮಂಗಳೂರು ಡಿಸಿಪಿ ಸಹಿತ ಅಧಿಕಾರಿಗಳು ಪಾಲ್ಗೊಂಡಿದ್ದು, ಸಮನ್ವಯ ವ್ಯವಸ್ಥೆ ಕುರಿತು ಚರ್ಚಿಸಿದ್ದೇವೆ.
–  ಎನ್‌. ಶಶಿಕುಮಾರ್‌, ಮಂಗಳೂರು ಪೊಲೀಸ್‌ಆಯುಕ್ತ

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.