ಅಕ್ರಮವಾಗಿ ಡೀಸೆಲ್‌ ಮಾರಾಟ: ಟ್ಯಾಂಕರ್‌ ವಶ


Team Udayavani, Jul 31, 2022, 11:26 AM IST

1tanker

ಚಿಂಚೋಳಿ: ತಾಲೂಕಿನ ಕಲ್ಲೂರ-ಮಿರಿಯಾಣ ಗ್ರಾಮಗಳ ಮಧ್ಯೆ ಇರುವ ಪದ್ಮನಾಭ ಫ್ಯೂಲ್ಸ್‌ ಪೆಟ್ರೋಲ್‌ ಪಂಪ್‌ನಿಂದ ರಾತ್ರಿ ವೇಳೆ ಟ್ಯಾಂಕರ್‌ದಲ್ಲಿ ಡೀಸೆಲ್‌ ತುಂಬಿಕೊಂಡು ಅಕ್ರಮವಾಗಿ ಮಾರಾಟ ಮಾಡಲು ತೆಲಂಗಾಣದ ನಿಜಾಮಬಾದ ವಿಕಾರಬಾದ ಜಿಲ್ಲೆಗಳಿಗೆ ಹೊರಟಿದ್ದ ಮೂರು ಟ್ಯಾಂಕರ್‌ಗಳನ್ನು ಮಿರಿಯಾಣ ಪೊಲೀಸರು ದಾಳಿ ನಡೆಸಿ, ಲಾರಿ ಚಾಲಕನನ್ನು ಬಂಧಿಸಿ ಡೀಸೆಲ್‌ ತುಂಬಿದ ಟ್ಯಾಂಕರ್‌ ವಶಪಡಿಸಿಕೊಂಡಿದ್ದಾರೆ ಎಂದು ಸಿಪಿಐ ಮಹಾಂತೇಶ ಪಾಟೀಲ ತಿಳಿಸಿದ್ದಾರೆ.

ಮಿರಿಯಾಣ ಗ್ರಾಮದ ಹತ್ತಿರ ಇರುವ ಪದ್ಮಾನಾಭ ಪೆಟ್ರೋಲ್‌ ಬಂಕ್‌ ನಿಂದ ಅಕ್ರಮವಾಗಿ ತೆಲಂಗಾಣ ರಾಜ್ಯದ ವಿಕಾರಬಾದ ಮತ್ತು ನಿಜಾಮಬಾದ ಜಿಲ್ಲೆಗಳಲ್ಲಿ ಹೆಚ್ಚು ದರಕ್ಕೆ ಮಾರುವುದಕ್ಕಾಗಿ ಇಲ್ಲಿಂದ ರಾತ್ರಿ ವೇಳೆ ತೆಲಂಗಾಣ ರಾಜ್ಯದ ಟ್ಯಾಂಕರ್‌ಗಳಲ್ಲಿ ಡೀಸೆಲ್‌ ತುಂಬಿಸಿಕೊಂಡು ಹೊರಟಿರುವ ವಾಹನಗಳನ್ನು ಖಚಿತ ಮಾಹಿತಿ ಆಧರಿಸಿ 112 ಪೊಲೀಸರು ದಾಳಿ ಮಾಡಿ ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡು ಮಿರಿಯಾಣ ಪೋಲಿಸರಿಗೆ ಒಪ್ಪಿಸಿದ್ದಾರೆ.

ಚಿಂಚೋಳಿ ಪೊಲೀಸ್‌ ಠಾಣೆಗೆ ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಪ್ರಸನ್ನಕುಮಾರ ದೇಸಾಯಿ ಭೇಟಿ ನೀಡಿದ ಸಂದರ್ಭದಲ್ಲಿ ತಾಲೂಕಿನ ಗಡಿಪ್ರದೇಶದಲ್ಲಿ ಕೆಲವು ಪೆಟ್ರೋಲ್‌ ಪಂಪ್‌ಗ್ಳಿಂದ ಅಕ್ರಮವಾಗಿ ಪೆಟ್ರೋಲ್‌, ಡೀಸೆಲ್‌ ತೆಲಂಗಾಣ ರಾಜ್ಯಗಳಿಗೆ ಟ್ಯಾಂಕರ್‌ಗಳನ್ನು ತುಂಬಿ ಸಾಗಿಸಲಾಗುತ್ತಿದೆ. ಅಂತವರವನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು. ಶುಕ್ರವಾರ ರಾತ್ರಿ 10ಗಂಟೆಗೆ ತೆಲಂಗಾಣ ರಾಜ್ಯದ ಟ್ಯಾಂಕ್‌ನಲ್ಲಿ ಆರು ಸಾವಿರ ಲೀಟರ್‌ ಡೀಸೆಲ್‌ ತುಂಬಿಕೊಂಡು ಹೊರಟಿದ್ದ ಲಾರಿ ಚಾಲಕ ಶೇಖ ಯೂಸೂಫ್‌ ನಿಜಾಮಾಬಾದ ಎನ್ನುವನನ್ನು ವಿಚಾರಿಸಿದಾಗ ಮಾಲಿಕ ನವೀನಕುಮಾರ ಎನ್ನುವವರು ಇಲ್ಲಿಂದ ಡೀಸೆಲ್‌ ತುಂಬಿಕೊಂಡು ಬರುವಂತೆ ಹೇಳಿದ್ದರಿಂದ ಟ್ಯಾಂಕರ್‌ದಲ್ಲಿ ತುಂಬಿಕೊಂಡು ವಿಕಾರಾಬಾದಗೆ ಕೊಂಡ್ನೂತ್ತಿದ್ದೇನೆ ಎಂದು ತಿಳಿಸಿದ್ದಾನೆ.

ಚಿಂಚೋಳಿ ತಾಲೂಕಿನ ಮಿರಿಯಾಣ ಗ್ರಾಮದ ಪದ್ಮನಾಭನ್‌ ಪೆಟ್ರೋಲ್‌ ಬಂಕನಿಂದ ತೆಲಂಗಾಣ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಡಿಸೇಲ್‌ ಟ್ಯಾಂಕರ್‌ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಪೆಟ್ರೋಲ್‌ ಬಂಕ ಮಾಲೀಕ ಚಂದ್ರಕಾಂತರೆಡ್ಡಿ ಮಿರಿಯಾಣ ಎನ್ನುವರನ್ನು ಪೊಲೀಸರು ವಿಚಾರಣೆ ನಡೆಸಿದಾಗ ಕಲಬುರಗಿ ನಗರದಿಂದ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ ವತಿಯಿಂದ ಪ್ರತಿ ದಿವಸ 20ಸಾವಿರ ಲೀಟರ್‌ ಡೀಸೆಲ್‌ ತರಿಸಲಾಗುತ್ತಿದೆ. ಅದರಂತೆ ಪ್ರತಿನಿತ್ಯ 16ಸಾವಿರ ಲೀಟರ್‌ ಡೀಸೆಲ್‌ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾನೆ.

ಪದ್ಮಾನಾಭನ್‌ ಪೆಟ್ರೋಲ್‌ ಪಂಪ್‌ನಲ್ಲಿ ರಾತ್ರಿ ಸಮಯ ದಲ್ಲಿ ತೆಲಂಗಾಣ ರಾಜ್ಯದ ಟ್ಯಾಂಕರ್‌ಗಳು ಡೀಸೆಲ್‌ ತುಂಬಿಸಿಕೊಂಡು ಸಂಚರಿಸುತ್ತಿದ್ದರೂ, ಹೆದ್ದಾರಿಯಲ್ಲಿಯೇ ಮಿರಿಯಾಣ ಪೊಲೀಸ್‌ ಠಾಣೆ ಇದ್ದರೂ ಪೊಲೀಸರು ಗಮನಹರಿಸದೇ ಇರುವುದು ಗಮನಾರ್ಹ ವಿಷಯವಾಗಿದೆ. ಲಾರಿ ಚಾಲಕನ ವಿರುದ್ಧ ಮಿರಿಯಾಣ ಸಬ್‌ ಇನ್ಸಪೆಕ್ಟರ್‌ ನಿಂಗಪ್ಪ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಸಿಪಿಐ ಮಹಾಂತೇಶ ಪಾಟೀಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.