ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಶ್ರಮಿಸಿ: ಬಿಇಒ ಅಕ್ಕಿ
Team Udayavani, Jul 31, 2022, 5:30 PM IST
ಬೀದರ: ಕೋವಿಡ್ನಿಂದ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಕೊರತೆ ಕಂಡುಬಂದಿದೆ. ಔಪ ಚಾರಿಕ ಶಿಕ್ಷಣದಲ್ಲಿ ಉಂಟಾಗಿರುವ ಅಡೆತಡೆ ನಿವಾರಿಸುವ ಸಲುವಾಗಿ ಶಿಕ್ಷಣ ಇಲಾಖೆ ವಿದ್ಯಾಪ್ರವೇಶ, ಕಲಿಕಾ ಚೇತರಿಕೆ ಉಪಕ್ರಮ ಕಾರ್ಯಕ್ರಮ ಅನುಷ್ಠಾನಗೊಳಿಸಿದೆ. ಇವುಗಳ ಮೂಲಕ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಶ್ರಮಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸಂತಬಾಯಿ ಅಕ್ಕಿ ಹೇಳಿದರು.
ಕೋಳಾರ (ಕೆ) ವಲಯದ ಗುರುಬಸವ ಪ್ರಾಥಮಿಕ-ಪ್ರೌಢ ಶಾಲೆಯಲ್ಲಿ ಆಯೋಜಿ ಸಿದ್ದ ಶೈಕ್ಷಣಿಕ ಚಿಂತನ-ಮಂಥನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಇಲಾಖೆ ಕಾರ್ಯ ಯೋಜನೆಗಳು ಫಲಪ್ರದವಾ ಗಬೇಕಾದರೆ ಶಿಕ್ಷಕರ ಯೋಗದಾನ ಮುಖ್ಯ. ಶಿಕ್ಷಣ ಇಲಾಖೆ ಹಮ್ಮಿಕೊಳ್ಳುವ ಶೈಕ್ಷಣಿಕ ಚಿಂತನ- ಮಂಥನಗಳಿಂದ ಜ್ಞಾನವೃದ್ಧಿಯಾಗುವುದು ಎಂದರು.
ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾ ಧಿಕಾರಿ ಡಾ| ವಿಜಯಕುಮಾರ ಬೆಳಮಗಿ ಮಾತನಾಡಿ, ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳನ್ನು ಮುಖ್ಯವಾಹಿನಿಗೆ ಕರೆತಂದು ಅವರಿಗೆಲ್ಲ ಗುಣಾತ್ಮಕ ಶಿಕ್ಷಣ ನೀಡುವುದು, ಕಲಿಕಾ ಹಾಳೆ ಬಳಸಿಕೊಂಡು ನಿರ್ದಿಷ್ಟ ಸಾಮರ್ಥ್ಯ ಪಡೆಯುವಂತೆ ನೋಡಿಕೊಳ್ಳುವುದು ಅವಶ್ಯ. ಈ ದಿಶೆಯಲ್ಲಿ ಅಧಿಕಾರಿಗಳು, ಶಿಕ್ಷಕರು, ಸಮಾಜದ ಭಾಗಿದಾರರು ಕೈಜೋಡಿ ಸಬೇಕು. ಸರ್ಕಾರದ ವಿವಿಧ ಯೋಜನೆ ಶಾಲಾ ಹಂತದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿ ಸಬೇಕು ಎಂದರು.
ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜು ಸಾಗರ, ಸಿದ್ರಾಮ ಹಿಂದೊಡ್ಡಿ, ಸುಮತಿ ರುದ್ರ, ಸೈಬಣ್ಣ ನಾಲವಾರ ಶೈಕ್ಷಣಿಕ ಚಿಂತನೆ ಹಂಚಿಕೊಂಡರು. ಈ ವೇಳೆ ಪ್ರಮುಖರಾದ ದತ್ತು ಸ್ವಾಮಿ, ಡೇವಿಡ್, ಮಂಜುನಾಥ ಬಿರಾದಾರ, ತಾನಾಜಿ ಕಾರಬಾರಿ, ಸೈಬಣ್ಣ ನಾಲವಾರ, ಗೌತಮ ವರ್ಮಾ, ನಿರ್ಮಲಾ ಚಂದನಹಳ್ಳಿ, ರೇಣುಕಾದೇವಿ, ಗೀತಾ, ನಿರ್ಮಲಾ ಬೆಲ್ದಾರ, ಸುನಂದಾ ಪಾಟೀಲ, ಅರ್ಜುನ ವರ್ಮಾ, ಚಂದ್ರಕಲಾ ಬೊರೆ, ರೋಹಿತ ಮೈಂದೆ, ದೀಲಿತ ಸಾವಳೆ, ಹಣಮಂತ ಮಂದಕನಳ್ಳಿ, ಸೋಮನಾಥ, ಶಶಿಕಲಾ ಇದ್ದರು. ನಿರ್ಗಮಿತ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುನೀಲಕುಮಾರ ಗಾಯಕವಾಡ ಅವರನ್ನು ಬೀಳ್ಕೊಡಲಾಯಿತು. ಡಾ| ರಘುನಾಥ ಪ್ರಾಸ್ತಾವಿಕ ಮಾತನಾಡಿ ದರು. ರವಿ ಶಂಭು ಅಧ್ಯಕ್ಷತೆ ವಹಿಸಿದ್ದರು. ನಾಗಶೆಟ್ಟಿ ಗಾದಗಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ