ಬಿಜೆಪಿ ಸರಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಲಿ: ಹರಿಪ್ರಸಾದ್‌ ಆಗ್ರಹ


Team Udayavani, Aug 1, 2022, 5:00 AM IST

ಬಿಜೆಪಿ ಸರಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಲಿ: ಹರಿಪ್ರಸಾದ್‌ ಆಗ್ರಹ

ಮಂಗಳೂರು: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ರಾಜ್ಯಪಾಲರು ಕೂಡಲೇ ಬಿಜೆಪಿ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ವಿಧಾನಪರಿಷತ್‌ನ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ಪ್ರವೀಣ್‌ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸುವ ಮೂಲಕ ಮುಖ್ಯಮಂತ್ರಿಯವರು ಆಡಳಿತ ವೈಫ‌ಲ್ಯವನ್ನು ಒಪ್ಪಿಕೊಂಡಂತಾಗಿದೆ. ರಾಜ್ಯ ಪೊಲೀಸರು ಕೊಲೆ ಪ್ರಕರಣವನ್ನು ಭೇದಿಸಲು ಸಮರ್ಥರಿರುವಾಗ ಪ್ರಕರಣದ ತನಿಖೆ ಎನ್‌ಐಎಗೆ ವಹಿಸುವ ಅಗತ್ಯವಿರಲಿಲ್ಲ. ಇದು ಕೇವಲ ಕಣ್ಣೊರೆಸುವ ತಂತ್ರ. ಉತ್ತರ ಕನ್ನಡದಲ್ಲಿ ಪರೇಶ ಮೇಸ್ತ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿ ವರ್ಷಗಳೇ ಕಳೆದರೂ ಯಾರನ್ನೂ ಇದುವರೆಗೆ ಬಂಧಿಸಿಲ್ಲ ಎಂದರು.

ಹಿಂದೆ ಕಾಂಗ್ರೆಸ್‌ ಆಡಳಿತದಲ್ಲಿದ್ದಾಗ ನಡೆದ ಹತ್ಯೆಗಳಲ್ಲಿ ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸಿ ಅಧಿಕಾರಕ್ಕೆ ಬಂದ ಬಿಜೆಪಿಗೆ ತನ್ನ ಪಕ್ಷದ ಕಾರ್ಯಕರ್ತರನ್ನು ರಕ್ಷಣೆ ಮಾಡಲು ಆಗುತ್ತಿಲ್ಲ. ಅದರ ಪರಿಣಾಮ ಇದೀಗ ಗೃಹಸಚಿವರು, ಸಂಸದರು, ಸಚಿವರು, ಶಾಸಕರು ಎಲ್ಲರೂ ಪ್ರತಿಭಟನೆ ಬಿಸಿ ಎದುರಿಸಬೇಕಾಗಿ ಬಂದಿದೆ ಎಂದವರು ಟೀಕಿಸಿದರು.

ತಾರತಮ್ಯ ನೀತಿ
ಹತ್ಯೆಗೀಡಾದ ಮಸೂದ್‌ ಮತ್ತು ಫಾಝಿಲ್‌ ಕುಟುಂಬಕ್ಕೆ ಯಾವುದೇ ಪರಿಹಾರ ನೀಡದೆ ಮುಖ್ಯಮಂತ್ರಿಯವರು ತಾರತಮ್ಯ ಎಸಗಿದ್ದಾರೆ. ಈ ರೀತಿಯ ತಾರತಮ್ಯ ಯಾಕೆ ಎಂದು ಪ್ರಶ್ನಿಸಿದ ಅವರು ಸಿಎಂ ಆಗಿರುವುದು ರಾಜ್ಯಕ್ಕೋ ಅಥವಾ ಬಿಜೆಪಿಗೋ ಎಂದು ಪ್ರಶ್ನಿಸುವಂತೆ ಆಗಿದೆ ಎಂದರು.

ನಾವು ಪ್ರವೀಣ್‌ ಮನೆಗೆ ಸಾಂತ್ವನ ಹೇಳಲು ಹೋದಾಗ ಬಿಜೆಪಿಯವರು ಬಾಡಿಗೆ ಜನರನ್ನು ಕಳುಹಿಸಿ ಧಿಕ್ಕಾರ ಕೂಗಿಸಿದ್ದಾರೆ ಎಂದು ಆರೋಪಿಸಿದರು.

ಡಿಸಿಸಿ ಅಧ್ಯಕ್ಷ ಹರೀಶ್‌ ಕುಮಾರ್‌, ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್‌, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಮೊದಿನ್‌ ಬಾವಾ, ಎಐಸಿಸಿ ಸದಸ್ಯೆ ಕವಿತಾ ಸನಿಲ್‌, ಕಾರ್ಪೊರೇಟರ್‌ಗಳಾದ ಶಶಿಧರ್‌ ಹೆಗ್ಡೆ, ನವೀನ್‌ ಡಿ’ಸೋಜಾ, ಜಿಲ್ಲಾ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಸಾಹುಲ್‌ ಹಮೀದ್‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಲುಕಾ¾ನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.