ಶ್ರಾವಣ ಮಾಸದ ಚೂಡಿ ಪೂಜೆ ಸಂಭ್ರಮ


Team Udayavani, Aug 1, 2022, 12:21 PM IST

9

ಕುಂದಾಪುರ: ಗೌಡ ಸಾರಸ್ವತ ಬ್ರಾಹ್ಮಣ, ವಿಶ್ವಕರ್ಮ ಮತ್ತು ದೈವಜ್ಞ ಬ್ರಾಹ್ಮಣ ಸಮಾಜದ ಮುತ್ತೈದೆಯರ ಶ್ರೇಷ್ಠ ಆಚರಣೆಗಳಲ್ಲಿ ಒಂದಾಗಿರುವ ಶ್ರಾವಣ ಮಾಸದ ಚೂಡಿ ಪೂಜೆ ಪ್ರಾರಂಭವಾಗಿದೆ. ತುಳಸಿ ಸಾನ್ನಿಧ್ಯದಲ್ಲಿ ಶ್ರಾವಣ ಮಾಸದ ಪ್ರತೀ ಶುಕ್ರವಾರ ಮತ್ತು ರವಿವಾರ ಚೂಡಿ ಪೂಜೆ ನಡೆಯುತ್ತದೆ.

ಚೂಡಿ: ಸಿಂಹ ಮಾಸದ ಶ್ರಾವಣದಲ್ಲಿ ಸೂರ್ಯ ದೇವನು ಸಿಂಹ ರಾಶಿಗೆ ಪ್ರವೇಶಿಸುವ ಸಂದರ್ಭದಲ್ಲಿ ಸೂರ್ಯ ದೇವನ ಬಿಂಬವನ್ನು ರಂಗೋಲಿಯಲ್ಲಿ ಬರೆದು ಅದರ ಹತ್ತಿರ ಗರಿಕೆ, ಲಕ್ಷ್ಮೀ ಸಾನ್ನಿಧ್ಯವುಳ್ಳ ಹೂಗಳನ್ನು ಅರ್ಪಿಸಿ ಸೂರ್ಯನಿಗೆ ವಂದನೆ ಸಲ್ಲಿಸಲಾಗುತ್ತದೆ. ಗರಿಕೆ ಹುಲ್ಲಿನೊಂದಿಗೆ ರಥ ಪುಷ್ಟ, ಕರವೀರ, ಮಿಠಾಯಿ ಹೂವು ಹಾಗೂ ಸಸ್ಯಗಳನ್ನು ಜೋಡಿಸಿ ಬಾಳೆ ನಾರಿನಿಂದ ಚೂಡಿ ಕಟ್ಟಲಾಗುತ್ತದೆ.

ಕಥೆ: ರಕ್ಕಸ ದೊರೆ ಜಲಂಧರನ ಪತ್ನಿ ವೃಂದಾ ಪತಿವ್ರತೆಯಾಗಿದ್ದಳು. ವಿಷ್ಣುವಿನ ಪರಮ ಭಕ್ತೆ. ಜಲಂಧರನಿಂದ ದೇವತೆಗಳನ್ನು ರಕ್ಷಿಸಲು ವಿಷ್ಣು ಅವಕಾಶಕ್ಕಾಗಿ ಕಾಯುತ್ತಿರುತ್ತಾನೆ. ಜಲಂಧರ ಸಾಯಬೇಕಾದರೆ ವೃಂದಾಳ ಪಾತಿವ್ರತ್ಯಕ್ಕೆ ಧಕ್ಕೆ ಬರಬೇಕು. ಹೀಗಾಗಿ ಜಲಂಧರ ಯುದ್ಧಕ್ಕೆ ತೆರಳಿದ್ದ ಸಂದರ್ಭದಲ್ಲಿ ವಿಷ್ಣು ಆತನ ರೂಪದಲ್ಲಿ ವೃಂದಾಳ ಬಳಿಗೆ ಬರುತ್ತಾನೆ. ತನ್ನ ಗಂಡನೆಂದು ನಂಬಿ ವೃಂದಾ ವಿಷ್ಣುವನ್ನು ಕೂಡುತ್ತಾಳೆ. ಯುದ್ದ ಭೂಮಿಯಲ್ಲಿ ಜಲಂಧರ ಸಾಯುತ್ತಾನೆ. ಪತಿಯ ಸಾವಿನಿಂದ ದುಃಖೀತಳಾದ ವೃಂದಾ ಮತ್ತೆ ಪಾತಿವ್ರತ್ಯ ಕೊಡಿಸುವಂತೆ ವಿಷ್ಣುವಿನ ಮೊರೆ ಹೋಗುತ್ತಾಳೆ. ಶ್ರಾವಣ ಮಾಸದಲ್ಲಿ ವಿವಿಧ ಹೂವುಗಳನ್ನು ನಾರಿನಿಂದ ಕಟ್ಟಿ ತುಳಸಿಗೆ ಅರ್ಪಿಸಿ, ತುಳಸಿ ದೇವಿಯನ್ನು ಪೂಜಿಸುವಂತೆ ವೃಂದಾಳಿಗೆ ತಿಳಿಸುತ್ತಾನೆ. ತುಳಸಿಯನ್ನು ಪೂಜಿಸಿ ವೃಂದಾ ಪವಿತ್ರಳಾಗುವ ಕಥೆಯೇ ಚೂಡಿ ಪೂಜೆಗೆ ಹಿನ್ನೆಲೆ.

ಕ್ರಮ: ಪೂಜೆಯ ಅನಂತರ ಮೊದಲ ಚೂಡಿಯನ್ನು ಗಂಡನಿಗೆ ನೀಡಿ ಕಾಲಿಗೆರಗಿ ಆಶೀರ್ವಾದ ಬೇಡುತ್ತಾರೆ. ಸುಮಂಗಲಿಯರು ಹಿರಿಯರ ಆಶೀರ್ವಾದ ಪಡೆಯುತ್ತಾರೆ. ಮುತ್ತೈದೆಯರು ಬೆಳಗ್ಗೆ ಬಾವಿ ದಂಡೆಗೆ ಹಳದಿ, ಕುಂಕುಮ ಹಚ್ಚಿ ಹೂವು ಇಟ್ಟು ನೀರಿಗೆ ಹರಿದ್ರಾ ಕುಂಕುಮ ಅರ್ಪಿಸಿ ಅಂಗಳದಲ್ಲಿ ತುಳಸಿ ಕಟ್ಟೆ ಎದುರು ರಂಗೋಲಿ, ಹೊಸ್ತಿಲಿಗೆ ಶೇಡಿ ಬರೆದು ಅಲಂಕರಿಸಿ ಚೂಡಿ ಪೂಜೆ ಪ್ರಾರಂಭಿಸುತ್ತಾರೆ. ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದವರು ತಮ್ಮೂರ ದೇವಸ್ಥಾನಗಳಲ್ಲಿ ಸಾಮೂಹಿಕ ಚೂಡಿ ಪೂಜೆಯನ್ನು ಆಚರಿಸುತ್ತಿರುವ ರೂಢಿ ಇದೆ.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.