ಗಾಂಜಾ ಮಾರಾಟ ಜಾಲದ ಮೂಲ ಭೇದಿಸಲು ಶಾಸಕ ಹಾಲಪ್ಪ ಸೂಚನೆ

ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

Team Udayavani, Aug 1, 2022, 5:39 PM IST

ಗಾಂಜಾ ಮಾರಾಟ ಜಾಲದ ಮೂಲ ಭೇದಿಸಲು ಶಾಸಕ ಹಾಲಪ್ಪ ಸೂಚನೆ

ಸಾಗರ: ಗಾಂಜಾ ಬೆಳೆಯುವ ರೈತನನ್ನು ಹಿಡಿದು ಕೇಸು ಹಾಕುವುದು, ಸ್ಥಳೀಯವಾಗಿ ಗಾಂಜಾ ಮಾರುವವನನ್ನು ಹಿಡಿದು ಪ್ರಕರಣ ದಾಖಲಿಸುವುದು ನಡೆಯುತ್ತಿದೆ. ಇವುಗಳಿಂದ ಗಾಂಜಾ ಜಾಲಕ್ಕೆ ಏನೂ ಆಗುವುದಿಲ್ಲ. ಇದನ್ನು ಬೇರು ಸಮೇತ ತಾಲೂಕಿನಿಂದ ದೂರವಿಡಲು ಪೊಲೀಸ್ ಇಲಾಖೆ ಗಾಂಜಾ ತಯಾರಿಕೆಗೆ ಮೂಲಗಳನ್ನು ಬೇಧಿಸಬೇಕು ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ಸೂಚನೆ ನೀಡಿದರು.

ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಸೋಮವಾರ ಕರೆಯಲಾಗಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಣದ ಆಸೆಗೆ ಬಡಪಾಯಿ ರೈತ ಕಚ್ಚಾ ಗಾಂಜಾವನ್ನು ಬೆಳೆದು ಮಾರುತ್ತಾನೆ. ಸಿದ್ಧ ಗಾಂಜಾವನ್ನು ಇಲ್ಲಿ ಯಾರೋ ವ್ಯಾಪಾರ ಮಾಡುತ್ತಾರೆ. ಇವರ ಮೇಲೆ ಕೇಸ್ ಹಾಕಿದರೂ ಆ ಗಾಂಜಾ ಜಾಲದ ಪ್ರಮುಖ ಬೇರೆಯವರನ್ನು ಹಿಡಿದು ವ್ಯಾಪಾರ ಮುಂದುವರೆಸುತ್ತಾನೆ. ಅದರ ಬದಲು ಸಮಗ್ರವಾದ ತನಿಖೆ ನಡೆಸಿ ಗಾಂಜಾ ಜಾಲದ ಬೇರುಗಳನ್ನು ಕತ್ತರಿಸಿ ಎಂದರು.

ಶರಾವತಿ ಹಿನ್ನೀರಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಈಗ ೪ ಅಂಬುಲೆನ್ಸ್ ಇದೆ. 108 ಸೇವೆ ಇಲ್ಲವೆನ್ನುವ ಕಾರಣಕ್ಕೆ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆಯುತ್ತಿದ್ದು, ತಾಲೂಕು ಆರೋಗ್ಯಾಧಿಕಾರಿ ಸ್ಥಳೀಯರಿಗೆ ಸರಿಯಾದ ಮಾಹಿತಿ ತಲುಪಿಸುವ ಕೆಲಸ ಮಾಡುತ್ತಿಲ್ಲ. ಕಳೆದ ಒಂದು ತಿಂಗಳಿನಿಂದ 108 ಸೇವೆ ಇಲ್ಲ ಎನ್ನುವುದರ ಮೂಲಕ ಸರ್ಕಾರಕ್ಕೆ ಕೆಟ್ಟ ಹೆಸರು ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಲೆನಾಡಿನ ರೈತರು ಕಾಡು ಉಳಿಸಿದ್ದಾರೆಯೇ ವಿನಾ ಅರಣ್ಯ ಇಲಾಖೆ ಕಾಡು ಉಳಿಸಿಲ್ಲ. ಕಾಡು ಉಳಿಸಿದ ರೈತರ ಮಕ್ಕಳ ಕೈಗೆ ಸ್ಲೇಟ್ ನೀಡಿ ಭಯೋತ್ಪಾದಕರ ರೀತಿ ಬಿಂಬಿಸಿ ಫೋಟೋ ಹೊಡೆಸಿ, ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದು ಖಂಡನೀಯ. ಈ ಬಗ್ಗೆ ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಹ ವ್ಯಾಪಕ ಚರ್ಚೆಯಾಗಿದೆ. ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಮಕ್ಕಳ ಬಗ್ಗೆ ಇಲ್ಲಸಲ್ಲದ ಕೇಸ್‌ಗಳನ್ನು ಸೃಷ್ಟಿಸುವ ಪ್ರಯತ್ನ ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ : ಆಂಧ್ರ ಮಾಜಿ ಸಿಎಂ ಎನ್ ಟಿಆರ್ ಪುತ್ರಿ ಕಾಂತಮನೇನಿ ಉಮಾ ಮಹೇಶ್ವರಿ ಆತ್ಮಹತ್ಯೆ

ವಿದ್ಯುತ್ ಸಂಪರ್ಕ ಸಿಗುತ್ತದೆ ಎಂದು ಅವರು ಮರ ಕಡಿದಿರಬಹುದು. ೩೦ ಮರ ಕಡಿದಿದ್ದರೆ ೩೦೦ ಮರಗಳನ್ನು ನೆಡುವ ಸೀಡ್‌ಬಾಲ್, ಬೀಜಗಳನ್ನು ಕೊಟ್ಟು ಅವರನ್ನು ಕೆಲಸಕ್ಕೆ ಹಚ್ಚಬಹುದಿತ್ತು. ರಸ್ತೆ, ವಿದ್ಯುತ್ ಸೌಲಭ್ಯ ಕಲ್ಪಿಸುವ ಯೋಜನೆಗಳಿಗೆ ಅರಣ್ಯ ಇಲಾಖೆ ಅಡ್ಡಿಪಡಿಸಬಾರದು. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕೆಡಿಪಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಹಾಲಪ್ಪ ಸೂಚಿಸಿದರು.

ವಿಷಯಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಕೆಡಿಪಿ ಸದಸ್ಯ ಮಂಜಯ್ಯ ಜೈನ್, ರೈತರನ್ನು ದೇಶದ್ರೋಹಿಗಳಂತೆ ಚಿತ್ರಿಸುವ ಪ್ರಯತ್ನ ನಡೆಸಿದ ಅಧಿಕಾರಿಗಳ ಕ್ರಮ ಖಂಡನೀಯ. ಅರಣ್ಯ ಇಲಾಖೆ ಅಧಿಕಾರಿಗಳು ಅಮಾಯಕರಿಗೆ ಹಿಂಸೆ ನೀಡುವ ಜೊತೆಗೆ ಹೆಣ್ಣು ಮಕ್ಕಳನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ವಾಸ್ತವವಾಗಿ ಅವರು ರಸ್ತೆಗೆ ಅಡ್ಡವಾಗಿ ಬಿದ್ದಿದ್ದ ಮರ ಕಡಿದಿದ್ದು ಬಿಟ್ಟರೆ ಬೇರೆ ತಪ್ಪು ಮಾಡಿರಲಿಲ್ಲ. ಪ್ರಕರಣವನ್ನು ಅರಣ್ಯ ಇಲಾಖೆಯಿಂದ ತನಿಖೆ ಮಾಡಿಸಿದರೆ ಅಮಾಯಕರಿಗೆ ನ್ಯಾಯ ಸಿಗುವುದಿಲ್ಲ. ಬೇರೆ ತನಿಖಾ ಸಂಸ್ಥೆ ಮೂಲಕ ಪ್ರಕರಣದ ತನಿಖೆ ನಡೆಸಿ ಎಂದು ಒತ್ತಾಯಿಸಿದರು.

ತಾಲೂಕು ಪಂಚಾಯ್ತಿ ಆಡಳಿತಾಧಿಕಾರಿ ಮಲ್ಲಪ್ಪ ಕೆ. ತೊದಲಬಾವಿ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಪುಷ್ಪಾ ಎಂ. ಕಮ್ಮಾರ್, ಕೆಡಿಪಿ ಸದಸ್ಯರಾದ ಗೌತಮ ಎಸ್., ಪಶುಪತಿ, ದೇವೇಂದ್ರಪ್ಪ, ಸುವರ್ಣಾ ಟೀಕಪ್ಪ, ಈಶ್ವರ ಡಿ.ಎಚ್., ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಶಾಸಕ ಹಾಲಪ್ಪ ಅಣಿಮುತ್ತುಗಳು….
– ಕೆಲವರಿಗೆ ಪ್ರತಿ ವರ್ಷ ಅತಿವೃಷ್ಟಿಗೆ ಪರಿಹಾರ ಕೊಡುವ ಕಾರ್ಯಕ್ರಮವಿರುತ್ತದೆ. ಇದಕ್ಕೆ ಮಾಡಬೇಕಾಗಿರುವುದು ಕಂಪ್ಯೂಟರ್‌ನ ಕಾಪಿ, ಪೇಸ್ಟ್ ಕೆಲಸವಷ್ಟೇ!
– ಜಾನುವಾರುಗಳಿಗೆ ಕಾಲೊಡೆ, ಬಾಯೊಡೆ ಜ್ವರ ಬಂದಾಗ ಔಷಧ ಕೊಡಬೇಕೇ ಅಥವಾ ಔಷಧ ಸರಬರಾಜಾದಾಗ ಜ್ವರ ಬರಬೇಕೆ?
– ನಾಯಿಯ ಮೇಲಿನ ಕೂದಲು ಉದುರಿ ಹುಣ್ಣವಾಗುವ ಸಮಸ್ಯೆಗೆ ನಿರ್ದಿಷ್ಟ ಮಾತ್ರೆಯಿದೆ. ಅದು ಕೊಟ್ಟರೆ ಅದರ ಆರೋಗ್ಯ ಸುಧಾರಿಸುತ್ತದೆ. ಹುಣ್ಣಾದ ನಾಯಿ ನಮ್ಮ ಪಿಎಗೂ ಕಚ್ಚಿತ್ತು. ಇದರ ಮಾಹಿತಿ ಇಲ್ಲ ಎಂದು ಪಶು ಇಲಾಖೆಯ ಡಾಕ್ಟ್ರಾಗಿ ಹೇಳುತ್ತಿದ್ದೀರಿ. ನೀವು ಹಳೇ ಡಾಕ್ಟ್ರು, ಕಾಯಿಲೆ ಹೊಸದು!
– ಬಡವರಿಗೆ ಸಹಾಯ ಮಾಡಿದ್ದಾರೆ ಎಂದು ಈವರೆಗೆ ಯಾವ ಅಧಿಕಾರಿಯೂ ಸಸ್ಪೆಂಡ್ ಆಗಿಲ್ಲ. ಇಡಿಗಂಟು ಹೊಡೆಯಲು ಹೋಗಿ ಕೆಲವರು ಅಮಾನತ್ ಆಗಿದ್ದಾರಷ್ಟೇ!
– ಕಾನೂನಿಗಾಗಿ ನಾವು ಬದುಕುತ್ತಿದ್ದೇವೆಯೇ ಅಥವಾ ಬದುಕುವುದಕ್ಕಾಗಿ ಕಾನೂನುಗಳಿವೆಯೇ? ಕಸ್ತೂರಿ ರಂಗನ್ ವರದಿ ಇನ್ನೂ ಜಾರಿಯಾಗಿಲ್ಲ, ನೆನಪಿರಲಿ….

ಟಾಪ್ ನ್ಯೂಸ್

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.