ಗಂಡನ ಮನೆಯವರ ಕಿರುಕುಳ ಆರೋಪ : ಡೆತ್ ನೋಟ್ ಬರೆದಿಟ್ಟು ತಾಯಿ ಮಗು ನೇಣಿಗೆ ಶರಣು
Team Udayavani, Aug 1, 2022, 7:55 PM IST
ಮಂಡ್ಯ: ಗಂಡನ ಮನೆಯವರು ಹಣಕ್ಕಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಡೆತ್ನೋಟ್ ಬರೆದಿಟ್ಟು ತಾಯಿ ಹಾಗೂ ಮಗು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ನಾಗಮಂಗಲ ಪಟ್ಟಣದ ಟಿ.ಬಿ.ಬಡಾವಣೆಯ ಕೆಂಚೇಗೌಡನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ನಾಗಮಂಗಲ ತಾಲೂಕಿನ ಚಿಕ್ಕವೀರನಕೊಪ್ಪಲು ಗ್ರಾಮದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಸುನಂದ ದೊರೆಸ್ವಾಮಿ ಪುತ್ರಿ ಬಿಂದು(25) ಹಾಗೂ 9 ತಿಂಗಳ ಹೆಣ್ಣು ಮಗು ಜ್ಞಾನವಿ ನೇಣಿಗೆ ಶರಣಾಗಿದ್ದಾರೆ.
ಕಳೆದ ಐದು ವರ್ಷದ ಹಿಂದೆ ಮನೆಯವರ ವಿರೋಧದ ನಡುವೆಯೂ ಬಿಂದು ನಾಗಮಂಗಲ ಪಟ್ಟಣದ ನವೀನ ಎಂಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ನಂತರ ಅತ್ತೆ ಮನೆಯವರ ಕಿರುಕುಳದಿಂದ ನೊಂದು ತಾಯಿ ಮನೆಗೆ ಬಂದ ಬಿಂದು ಮಗುವನ್ನು ನೇಣಿಗೆ ಹಾಕಿ ತಾನು ಕೂಡ ಅದೇ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನನ್ನ ಸಾವಿಗೆ ನನ್ನ ಗಂಡ ನವೀನ ಮತ್ತು ಆತನ ಪ್ರೇಯಸಿ ಮಮತ ಹಾಗೂ ಅತ್ತೆ ನಾಗಮ್ಮ, ನಾದಿನಿಯರಾದ ನಂದಿನಿ ಮತ್ತು ನಯನ ಅವರು ಹಣದ ವಿಚಾರವಾಗಿ ಪದೇ ಪದೇ ಕಿರುಕುಳ ಚಿತ್ರಹಿಂಸೆ ನೀಡುತ್ತಿದ್ದು, ನನ್ನ ಸಾವಿಗೆ ಇವರೇ ಕಾರಣರಾಗಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಿ.ಪಂ. ಮಾಜಿ ಸದಸ್ಯರಾದ ಸುನಂದ ದೊರೆಸ್ವಾಮಿ ಕುಟುಂಬವು ಕೆಂಚೇಗೌಡನ ಕೊಪ್ಪಲು ಗ್ರಾಮದ ವಕೀಲರಾದ ಚಿಕ್ಕಸ್ವಾಮಿ ಅವರ ಮನೆಯಲ್ಲಿ ಬಾಡಿಗೆಗೆ ಪಡೆದು ವಾಸವಿದ್ದರು.
ಇಂದು ನಡೆದ ಈ ದುರ್ಘಟನೆಗೆ ಗಂಡ ನವೀನ ಹಾಗೂ ಆತನ ಕುಟುಂಬದವರು ಕಾರಣವೆಂದು ತಂದೆ ದೊರೆಸ್ವಾಮಿ ಪಟ್ಟಣ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಡಿವೈಎಸ್ಪಿ ಲಕ್ಷ್ಮೀನಾರಾಯಣಪ್ರಸಾದ್, ಸರ್ಕಲ್ ಇನ್ಸ್ಪೆಕ್ಟರ್ ಸುಧಾಕರ, ಪಿಎಸ್ಐ ರವಿಶಂಕರ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..