ಒಬೆಡ್ ಮೆಕಾಯ್ ದಾಳಿಗೆ ಸಿಲುಕಿದ ಭಾರತ: ದ್ವಿತೀಯ ಟಿ20 ಗೆದ್ದ ವಿಂಡೀಸ್


Team Udayavani, Aug 2, 2022, 9:56 AM IST

ಒಬೆಡ್ ಮೆಕಾಯ್ ದಾಳಿಗೆ ಸಿಲುಕಿದ ಭಾರತ: ದ್ವಿತೀಯ ಟಿ20 ಗೆದ್ದ ವಿಂಡೀಸ್

ಸೈಂಟ್ ಕಿಟ್ಸ್: ನಿಗದಿತ ಸಮಯಕ್ಕಿಂತ ತಡವಾಗಿ ಆರಂಭವಾದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಐದು ವಿಕೆಟ್ ಅಂತರದ ಗೆಲುವು ಸಾಧಿಸಿದ ವೆಸ್ಟ್ ಇಂಡೀಸ್ ತಂಡ ಸರಣಿಯಲ್ಲಿ 1-1 ರ ಸಮಬಲ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 19.4 ಓವರ್ ಗಳಲ್ಲಿ 138 ರನ್ ಗಳಿಗೆ ಆಲೌಟಾದರೆ, ವಿಂಡೀಸ್ ತಂಡ ಐದು ವಿಕೆಟ್ ಕಳೆದುಕೊಂಡು ಕೊನೆಯ ಓವರ್ ನಲ್ಲಿ ಗುರಿ ತಲುಪಿತು.

ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತಕ್ಕೆ ವಿಂಡೀಸ್ ವೇಗಿ ಒಬೆಡ್ ಮೆಕಾಯ್ ದುಸ್ವಪ್ನವಾಗಿ ಕಾಡಿದರು. ಪಂದ್ಯದ ಮೊದಲ ಎಸೆತದಲ್ಲೇ ನಾಯಕ ರೋಹಿತ್ ಶರ್ಮಾ ವಿಕೆಟ್ ಕಿತ್ತ ಮೆಕಾಯ್, ಭಾರತದ ಬ್ಯಾಟಿಂಗ್ ಬಲ ಮುರಿದರು. ನಾಲ್ಕು ಓವರ್ ಗಳಲ್ಲಿ ಕೇವಲ 17 ರನ್ ನೀಡಿದ ಮೆಕಾಯ್ ಆರು ವಿಕೆಟ್ ಪಡೆದರು. ಭಾರತದ ಪರ ಹಾರ್ದಿಕ್ ಪಾಂಡ್ಯ 31 ರನ್, ಜಡೇಜಾ 27 ರನ್ ಮತ್ತು ಪಂತ್ 24 ರನ್ ಗಳಿಸಿದರು.

ಇದನ್ನೂ ಓದಿ:ಮಳೆಯ ನಡುವೆಯೇ ಕಬಡ್ಡಿ ಪಂದ್ಯ: ಹುಣಸೂರಿನ ಮಹಿಳಾ ಕಾಲೇಜು ಪ್ರಥಮ

ಗುರಿ ಬೆನ್ನತ್ತಿದ ವಿಂಡೀಸ್ ಗೆ ಬ್ರಾಂಡನ್ ಕಿಂಗ್ ಬ್ಯಾಟಿಂಗ್ ಬಲ ತುಂಬಿದರು. 52 ಎಸೆತ ಎದುರಿಸಿದ ಕಿಂಗ್ 68 ರನ್ ಗಳಿಸಿದರು. ಉಳಿದಂತೆ ಕೀಪರ್ ಡೆವೋನ್ ಥಾಮಸ್ 31 ರನ್ ಬಾರಿಸಿದರು.

ಅಂತಿಮ ಓವರ್ ನಲ್ಲಿ ವಿಂಡೀಸ್ ಗೆ ಹತ್ತು ರನ್ ಅಗತ್ಯವಿತ್ತು. ಭುವನೇಶ್ವರ್ ಕುಮಾರ್ ಲಭ್ಯರಿದ್ದರೂ, ನಾಯಕ ರೋಹಿತ್ ಶರ್ಮಾ ಯುವ ವೇಗಿ ಆವೇಶ್ ಖಾನ್ ರನ್ನು ನಂಬಿದರು. ಆದರೆ ಮೊದಲ ಎಸೆತವನ್ನು ನೋ ಬಾಲ್ ಹಾಕಿದ ಆವೇಶ್ ಖಾನ್, ನಂತರದ ಎರಡು ಎಸೆತಗಳಲ್ಲಿ ಸಿಕ್ಸ್- ಫೋರ್ ಬಿಟ್ಟು ಕೊಟ್ಟರು. 19.2 ಓವರ್ ಗಳಲ್ಲಿ ಗುರಿ ತಲುಪಿದ ವಿಂಡೀಸ್ ಜಯ ಸಾಧಿಸಿತು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.