ನಾಗಾಇದಲಾಯಿ ಸಣ್ಣ ನೀರಾವರಿ ಕೆರೆಯಲ್ಲಿ ಬಿರುಕು: ಆತಂಕದಲ್ಲಿ ಗ್ರಾಮಸ್ಥರು
Team Udayavani, Aug 2, 2022, 2:14 PM IST
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ನಾಗಾಇದಲಾಯಿ ಗ್ರಾಮದಲ್ಲಿರುವ ಸಣ್ಣ ನೀರಾವರಿ ಕೆರೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕೆಂದು ಶಾಸಕ ಅವಿನಾಶ್ ಜಾಧವ್ ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕೆರೆಯನ್ನು 2020 ರಲ್ಲಿ ದುರಸ್ತಿ ಮಾಡಿದ್ದರೂ ಆಗಾಗ ಕೆರೆಯ ಮಣ್ಣಿನ ಕುಸಿತವಾಗುತ್ತಿತ್ತು. ಕೆಲವು ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದೆ. ಯಾವುದೇ ಕ್ಷಣದಲ್ಲಿ ಒಡೆಯುವ ಸಾಧ್ಯತೆ ಇರುವುದರಿಂದ ಕೆರೆಯ ಕೆಳಭಾಗದಲ್ಲಿರುವ ಗ್ರಾಮಸ್ಥರು ಮುನ್ನೆಚ್ಚರಿಕೆ ಕ್ರಮವಾಗಿ ಎಚ್ಚರಿಕೆಯಿಂದ ಇರಬೇಕೆಂದು ಶಾಸಕರು ಮನವಿ ಮಾಡಿದರು.
ನಾಗಾಇದಲಾಯಿ ಗ್ರಾಮದಲ್ಲಿ ಸಣ್ಣ ನೀರಾವರಿ ಕೆರೆ ಕಳೆದ 2020 ಅಕ್ಟೋಬರ್ 14 ರಂದು ನೀರಿನ ರಭಸಕ್ಕೆ ಒಡೆದು ಹೋಗಿತ್ತು. ಸಚಿವ ಜೆ.ಸಿ.ಮಾಧುಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಸರಕಾರದಿಂದ 4 ಕೋಟಿ ರೂಪಾಯಿ ಮಂಜೂರು ಮಾಡಿಸಿದರು ಅದರ ದುರಸ್ತಿ ಕಾಮಗಾರಿ ಕೆಲಸ ಕಳೆದ ಮೇ ತಿಂಗಳಲ್ಲಿ ಪೂರ್ಣ ಗೊಳಿಸಲಾಗಿದೆ. ಮಳೆಗಾಲ ಪ್ರಾರಂಭದಲ್ಲೇ ಕೆರೆಯಲ್ಲಿ ಮತ್ತೆ ಬಿರುಕುಗಳು ಕಾಣಿಸುತ್ತಿವೆ. ವೇಸ್ಟ್ ವೇರ್ ಮೂಲಕ ನೀರು ಹೊರಕ್ಕೆ ಹರಿದು ಬಿಡಲಾಗುತ್ತಿದೆ. ಕೆರೆ ನೀರು ಸಂಗ್ರಹಣೆ ಮಾಡುತ್ತಿಲ್ಲ.ಕೆರೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಕುರಿತು ತಜ್ಞರಿಂದ ಪರಿಶೀಲನೆ ನಡೆಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ