ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ
Team Udayavani, Aug 2, 2022, 5:27 PM IST
ಶಹಾಬಾದ: ರಾಜ್ಯ ಸರಕಾರದ ಜನನ ಮತ್ತು ಮರಣ ನೋಂದಣಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದ ವಕೀಲರ ಸಂಘ ಸೋಮವಾರ ಪ್ರತಿಭಟನೆ ನಡೆಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ಬರೆದ ಮನವಿಪತ್ರವನ್ನು ಗ್ರೇಡ್-2 ತಹಶೀಲ್ದಾರ್ ಗುರುರಾಜ ಸಂಗಾವಿ ಅವರ ಮುಖಾಂತರ ಸಲ್ಲಿಸಲಾಯಿತು.
ಜನನ ಮತ್ತು ಮರಣ ನೋಂದಣಿ ವಿಳಂಬದ ಸಂಬಂಧ ವಿವಾದಗಳು ಏರ್ಪಟ್ಟಲ್ಲಿ ಅಥವಾ ತಿದ್ದುಪಡಿ ಅವಶ್ಯಕವಿದ್ದಲ್ಲಿ ವ್ಯಕ್ತಿಗಳು ಜನನ ಮತ್ತು ನೋಂದಣಿ ಕಾಯ್ದೆ ಕಲಂ-13ರ ಪ್ರಕಾರ ಸ್ಥಳೀಯ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ದಾಖಲಾತಿಗಳನ್ನು ನೀಡಿ ನ್ಯಾಯಾಲಯದ ಆದೇಶದ ನಂತರ ಸಂಬಂಧಪಟ್ಟ ಪ್ರಾಧಿಕಾರಗಳು ಈ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುತ್ತಿದ್ದರು. ಆದರೆ ಕರ್ನಾಟಕ ಸರಕಾರ ಈ ಮೇಲೆ ಹೇಳಿದ ಆದೇಶದ ಅನ್ವಯ ಈಗಿರುವ ಜೆಎಂಎಫ್ಸಿ ನ್ಯಾಯಾಲಯದ ಅಧಿಕಾರವನ್ನು ತೆಗೆದು ಉಪ-ವಿಭಾಗಾಧಿಕಾರಿಗಳ ನ್ಯಾಯಾಂಗಕ್ಕೆ ನೀಡಿದೆ. ಇದು ಜನ ಸಂದಣಿಗೆ ತೊಂದರೆ ನೀಡುವ ಮತ್ತು ಕ್ರಮಬದ್ಧ ರೀತಿಯಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರ ಪಡೆಯಲು ಕಷ್ಟ ಸಾಧ್ಯವಾಗುತ್ತದೆ.
ಈಗಾಗಲೇ ರೆವಿನ್ಯೂ ನ್ಯಾಯಾಲಯಗಳಲ್ಲಿ ಪ್ರಭಾವ, ಅಸಂಬದ್ಧ ಆದೇಶಗಳು ನೀಡುವ ಮೂಲಕ ಜನರಿಗೆ ಸೂಕ್ತ ನ್ಯಾಯ ದೊರೆಯುತ್ತಿಲ್ಲ. ಒಂದೊಮ್ಮೆ ಉಪ-ವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ಈ ಅಧಿಕಾರವನ್ನು ನೀಡಿದ್ದಲ್ಲಿ ದೂರದ ಕಕ್ಷಿದಾರರು ಎಸಿ ಕಚೇರಿಗೆ ಬರಬೇಕಾಗಿದೆ. ಇದರಿಂದ ಜನಸಾಮಾನ್ಯರು ಓಡಾಡಿ ಹರಸಾಹಸ ಪಡಬೇಕಾಗುತ್ತದೆ.
ಈಗ ಹೊರಡಿಸಿರುವ ಜನನ ಮತ್ತು ಮರಣ ನೋಂದಣಿ ಸಂಬಂಧ ಕರ್ನಾಟಕ ರಾಜ್ಯ ಸರಕಾರದ ಅಧಿಸೂಚನೆ ವಾಪಸು ಪಡೆದು ಈ ಹಿಂದಿನಂತೆ ಜೆಎಂಎಫ್ಸಿ ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿ ಮುಂದುವರೆಸುವಂತೆ ಮನವಿಯಲ್ಲಿ ಒತ್ತಾಯಿಸಿದರು.
ಈ ವೇಳೆ ದೇವಪ್ಪ ಕುಲಕುಂದಿ, ಜ್ಯೋತಿ, ರವೀಂದ್ರ ಕಟ್ಟಿಮನಿ, ರಮೇಶ ರಾಠೊಡ, ನಾಗೇಶ ಧನ್ನೇಕರ್, ತಿಮ್ಮಯ್ಯ ಮಾನೆ, ರಘುವೀರಸಿಂಗ ಠಾಕೂರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ
Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
MUST WATCH
ಹೊಸ ಸೇರ್ಪಡೆ
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ
Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ