ಮಂಡ್ಯ: ಕುಂಭದ್ರೋಣ ಮಳೆಗೆ ಮುಳುಗಿದ ವಿವೇಕಾನಂದನಗರ, ಬೀಡಿ ಕಾರ್ಮಿಕರ ಕಾಲೋನಿ
Team Udayavani, Aug 2, 2022, 7:40 PM IST
ಮಂಡ್ಯ: ಸೋಮವಾರ ರಾತ್ರಿ ಸುರಿದ ಕುಂಭದ್ರೋಣ ಮಳೆಗೆ ಮಂಡ್ಯ ನಗರದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ಮಳೆಯಿಂದ ತತ್ತರಿಸಿದ್ದಾರೆ.
ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆಗಳು, ಪಾತ್ರೆ ಸಾಮಾನುಗಳು, ಎಲೆಕ್ಟಾçನಿಕ್ಸ್ ವಸ್ತುಗಳು, ನೀರಿನಿಂದ ಜಲಾವೃತಗೊಂಡು ಸಂಪೂರ್ಣ ಹಾಳಾಗಿವೆ. ಅಲ್ಲದೆ, ಕುಟುಂಬಸ್ಥರು ಮಳೆಯ ನೀರನ್ನು ಮನೆಯಿಂದ ಹೊರ ಹಾಕುವುದರಲ್ಲೇ ಇಡೀ ರಾತ್ರಿ ಜಾಗರಣೆ ಮಾಡಿದ್ದಾರೆ.
ಮುಳುಗಿದ ವಿವೇಕಾನಂದನಗರ:
ರಾತ್ರಿ 6.45ರಲ್ಲಿ ಪ್ರಾರಂಭಗೊಂಡ ಮಳೆ ಮಧ್ಯರಾತ್ರಿವರೆಗೂ ಸುರಿಯಿತು. ಇದರಿಂದ ನಗರದ ಕೆರೆ ಅಂಗಳದಲ್ಲಿರುವ ವಿವೇಕಾನಂದ ಬಡಾವಣೆ ಹಾಗೂ ಪಕ್ಕದಲ್ಲೇ ಇರುವ ಬೀಡಿ ಕಾರ್ಮಿಕರ ಕಾಲೋನಿ ಸಂಪೂರ್ಣ ಜಲಾವೃತಗೊಂಡು ಕೆರೆಯಂತಾಗಿದೆ. ಬಡಾವಣೆಯ ನಿವಾಸಿಗಳ ಮನೆಗಳಿಗೆ ನೀರು ನುಗ್ಗಿದ್ದು, ಬಡಾವಣೆಯನ್ನು ಸಂಪೂರ್ಣವಾಗಿ ಜಲದಿಗ್ಬಂಧನ ವಿಧಿಸಿದೆ. ನಗರಸಭೆ ಹಾಗೂ ರಕ್ಷಣಾ ತಂಡ ಬೋಟ್ಗಳ ಮೂಲಕ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು. ನಗರಸಭೆ ಸಿಬ್ಬಂದಿಗಳು ನೀರು ಹೊರ ಹಾಕಲು ಹರಸಾಹಸಪಡುತ್ತಿದ್ದಾರೆ.
ಮನೆಯ ಮೇಲೆ ಹತ್ತಿ ಕುಳಿತ ನಿವಾಸಿಗಳು:
ಮಂಡಿಯುದ್ದ ನೀರು ಮನೆಗಳಿಗೆ ನುಗ್ಗಿದ್ದರಿಂದ ಆರ್ಸಿಸಿ ಮನೆ ಇರುವ ನಿವಾಸಿಗಳು ಮನೆಯ ಮೇಲೆ ಹತ್ತಿ ಕುಳಿತರೆ, ಆರ್ಸಿಸಿ ಇಲ್ಲದ ಮನೆಯವರು ಸಂಪೂರ್ಣ ತೊಂದರೆ ಅನುಭವಿಸಿದರು. ರಾತ್ರಿ ಇಡೀ ಊಟ, ನಿದ್ರೆ ಇಲ್ಲದೆ ಸಾಕಷ್ಟು ಸಂಕಷ್ಟ ಅನುಭವಿಸಿದರು. ಬೀಡಿ ಕಾರ್ಮಿಕರ ಕಾಲೋನಿಯ ಬಹುತೇಕ ಎಲ್ಲ ಮನೆಗಳಿಗೂ ನೀರು ನುಗ್ಗಿದೆ. ಮನೆ ಒಳಗಡೆ ಹಾಗೂ ಹೊರಗಡೆ ಸುಮಾರು ನಾಲ್ಕು ಅಡಿಯಷ್ಟು ನೀರು ನಿಂತಿದ್ದ ದೃಶ್ಯ ಕಂಡು ಬಂದಿತು.
ವಾಹನಗಳು ಮುಳುಗಡೆ:
ವಿವೇಕಾನಂದನಗರ ಹಾಗೂ ಬೀಡಿ ಕಾರ್ಮಿಕರ ಕಾಲೋನಿಯ ನಿವಾಸಿಗಳ ಮನೆಮುಂದೆ ನಿಲ್ಲಿಸಿದ್ದ ಬೈಕ್, ಕಾರುಗಳು ನೀರಿನಿಂದ ಮುಳುಗಡೆಯಾಗಿವೆ. ಅಲ್ಲದೆ, ಮನೆಯಲ್ಲಿದ್ದ ವಸ್ತುಗಳು ನೀರಿನಿಂದ ಜಲಾವೃತ್ತಗೊಂಡು ಚೆಲ್ಲಾಪಿಲ್ಲಿಯಾಗಿವೆ. ಇದರಿಂದ ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ.
ಗಂಜಿ ಕೇಂದ್ರಕ್ಕೆ ರವಾನೆ :
ವಿವೇಕಾನಂದ ಬಡಾವಣೆ ಹಾಗೂ ಬೀಡಿ ಕಾರ್ಮಿಕರ ಕಾಲೋನಿ ಜಲಾವೃತಗೊಂಡ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕುಂಞ ಅಹಮದ್ ನೇತೃತ್ವದಲ್ಲಿ ನಗರಸಭೆ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನಿವಾಸಿಗಳನ್ನು ಬೋಟ್ ಮೂಲಕ ಗಂಜಿ ಕೇಂದ್ರ ಹಾಗೂ ಸುರಕ್ಷಿತ ಸ್ಥಳಗಳಿಗೆ ರವಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ