ಮಧ್ಯರಾತ್ರಿ ಕಾಂಗ್ರೆಸ್ ನಾಯಕರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ
Team Udayavani, Aug 3, 2022, 7:52 AM IST
ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 75ನೇ ವಸಂತಕ್ಕೆ ಕಾಲಿಟ್ಟಿದ್ದು ಆ ಹಿನ್ನೆಲೆಯಲ್ಲಿ ಮಧ್ಯರಾತ್ರಿ 12 ಗಂಟೆಗೆ ಸರಿಯಾಗಿ ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಕೇಕ್ ಕತ್ತರಿಸುವ ಮೂಲಕ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ಹುಟ್ಟುಹಬ್ಬ ಆಚರಿಸಿಕೊಂಡರು.
ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆ.ಜೆ. ಜಾರ್ಜ್ ಮತ್ತು ಆರ್.ವಿ. ದೇಶಪಾಂಡೆ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಸಿದ್ದು ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗಿಯಾದರು.
75ನೇ ವಸಂತದ ಸಂಭ್ರಮಾಚರಣೆಗೆ ದಾವಣಗೆರೆಯಲ್ಲಿ ಇಂದು ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಜನರು ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ದಾವಣಗೆರೆಯಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ.
ಇದನ್ನೂ ಓದಿ : ಮತ್ತೆ ಯುದ್ಧ ಭೀತಿ; ಅಮೆರಿಕ-ಚೀನ ನಡುವೆ ತೀವ್ರಗೊಂಡ ಸಂಘರ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.