ದಾವಣಗೆರೆ: ಸಂಚಾರದ ಒತ್ತಡದಲ್ಲಿ ಸಿಲುಕಿದ ರಾಹುಲ್ ಗಾಂಧಿ
Team Udayavani, Aug 3, 2022, 2:21 PM IST
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಮಧ್ಯಾಹ್ನ 2.30ರ ಒಳಗಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೆಂಗಳೂರಿಗೆ ವಾಪಾಸ್ಸಾಗಿ, ದೆಹಲಿಗೆ ತೆರಳಬೇಕಾಗಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೂಡ ಸಂಚಾರದ ಒತ್ತಡದಲ್ಲಿ ಸಿಲುಕಿದ್ದಾರೆ.
ಕೇವಲ ರಾಹುಲ್ ಗಾಂಧಿ ಮಾತ್ರವಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಕೂಡ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದಾರೆ. ಕಾರ್ಯಕ್ರಮದ ಸ್ಥಳದಿಂದ ಸುಮಾರು 20 ಕಿ.ಮೀ. ದೂರದಲ್ಲಿ ವಾಹನಗಳ ಸಂಚಾರದ ಒತ್ತಡದಿಂದಾಗಿ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ್ದರು, ಕೈ ನಾಯಕರೂ ಸಹ ಟ್ರಾಫಿಕ್ ಜಾಮ್ ಬಿಸಿ ಅನುಭವಿಸಿದ್ದಾರೆ.
ಕಾರ್ಯಕ್ರಮದ ಸ್ಥಳಕ್ಕೆ ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ಆಗಮಿಸಿದ ರಾಹುಲ್ ಗಾಂಧಿ ಇತರರು ದಾವಣಗೆರೆಗಿಂತ ಮುಂಚೆಯೇ ಇರುವ ಆವರಗೆರೆಯ ರಾಷ್ಟ್ರೀಯ ಹೆದ್ದಾರಿಯಿಂದಲೂ ಟ್ರಾಫಿಕ್ ಜಾಮ್ ಆಗಿದೆ. ಕೇವಲ ವಾಹನಗಳು ಮಾತ್ರವಲ್ಲದೇ ಸಮಾರಂಭಕ್ಕೆ ಜನರು ರಸ್ತೆ ಮೂಲಕವೇ ಸಾಗುತ್ತಿರುವ ಕಾರಣ ಭದ್ರತೆ, ಝೀರೋ ಟ್ರಾಫಿಕ್ನಲ್ಲಿ ಸಾಗಬೇಕಾಗಿದ್ದ ಕೈ ವರಿಷ್ಠರು ಟ್ರಾಫಿಕ್ನಲ್ಲಿ ಸಿಲುಕಿದ್ದಾರೆ.
ಕಾರಣ ಅವರು ಕಾರ್ಯಕ್ರಮಕ್ಕೆ ಬರುವುದು ತಡವಾಗಲಿದೆ. ಅಲ್ಲದೇ ಕಾರ್ಯಕ್ರಮ ಮುಗಿಸಿಕೊಂಡು ಹೋಗುವುದು ನಿಗಧಿತ ಅವಧಿಯಲ್ಲಿ ನವದೆಹಲಿಗೆ ತೆರಳುವುದು ಅಸಾಧ್ಯ ಎನ್ನಲಾಗುತ್ತಿದೆ. ಈ ಮಧ್ಯೆ ದಾವಣಗೆರೆಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯವರನ್ನು ಬೇರೊಂದು ಮಾರ್ಗದ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಕರೆತರಲು ಪ್ರಯತ್ನ ಮಾಡುತ್ತಿದ್ದಾರೆ.
ಪೊಲೀಸರ ಹರಸಾಹಸ
ರಾಹುಲ್ ಗಾಂಧಿ ಅವರು ಸಂಚಾರದ ಒತ್ತಡದಿಂದಾಗಿ ಕಾರ್ಯಕ್ರಮದ ಸ್ಥಳಕ್ಕೆ ತಡವಾಗಿ ಆಗಮಿಸಿದರೂ ಸಹ ವೇದಿಕೆ ಬಳಿ ಸಾಗಲು ಹರಸಾಹಸ ಪಡಬೇಕಾಯಿತು. ಪೊಲೀಸರು ದಾರಿ ಮಾಡಿಕೊಡಲು ಪ್ರಯತ್ನ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್