ದಾಳಿಗೆ ನೆರವಾಯ್ತು “ಏಕಾಂಗಿಯಾಗಿ ಓದುವ ಅಭ್ಯಾಸ’!

ಅದನ್ನೇ ಅಧ್ಯಯನ ನಡೆಸಿ, ದಾಳವನ್ನಾಗಿ ಮಾಡಿಕೊಂಡ ಸಿಐಎ

Team Udayavani, Aug 4, 2022, 6:45 AM IST

ದಾಳಿಗೆ ನೆರವಾಯ್ತು “ಏಕಾಂಗಿಯಾಗಿ ಓದುವ ಅಭ್ಯಾಸ’!

ನವದೆಹಲಿ/ವಾಷಿಂಗ್ಟನ್‌: ಅಮೆರಿಕ ರಹಸ್ಯವಾಗಿ ನಡೆಸಿದ ಕಾರ್ಯಾಚರಣೆಯಿಂದ ಅಲ್‌ಖೈದಾ ಮುಖ್ಯಸ್ಥ ಐಮನ್‌ ಅಲ್‌-ಜವಾಹಿರಿಯನ್ನು ಕೊಂದ ಕಥೆಯೇ ರೋಚಕವಾಗಿದೆ. ಕಾಬೂಲ್‌ನ ಜನನಿಬಿಡ ಸ್ಥಳದಲ್ಲಿ ಇರುವ ಮನೆಯ ಬಾಲ್ಕನಿಯಲ್ಲಿ ನಿಂತು ಏಕಾಂಗಿಯಾಗಿ ಓದುವ ಅಭ್ಯಾಸವೇ ಆತನ ಪ್ರಾಣಕ್ಕೆ ಕಂಟಕವಾಯಿತು ಎಂದು “ದ ನ್ಯೂಯಾರ್ಕ್‌ ಟೈಮ್ಸ್‌’ ವರದಿ ಮಾಡಿದೆ.

ದಶಕಗಳಿಂದ ಶೋಧ ಕಾರ್ಯ ನಡೆಸಿದರೂ ಜವಾಹಿರಿ ಇರುವು ಪತ್ತೆಯಾಗದೇ ಇದ್ದಾಗ ಕೊನೆಯಲ್ಲಿ ಆತ ಕಾಬೂಲ್‌ನಲ್ಲಿ ಇದ್ದಾನೆ ಎಂಬ ಅಂಶ ದೃಢಪಟ್ಟಿತ್ತು. ಇತರರಿಗೆ ಅಪಾಯ ಇಲ್ಲದೆ ಉಗ್ರನನ್ನು ಹೇಗೆ ಸಂಹಾರ ಮಾಡಬಹುದು ಎಂಬ ಬಗ್ಗೆ ಅಮೆರಿಕದ ಸೆಂಟ್ರಲ್‌ ಇಂಟೆಲಿಜೆನ್ಸ್‌ ಏಜೆನ್ಸಿ ತಲೆಕೆಡಿಸಿಕೊಂಡಿತ್ತು. ಈ ಸಂದರ್ಭದಲ್ಲಿ ಆತನ ಬಗ್ಗೆ ಅಧ್ಯಯನ ನಡೆಸಲು ನಿಯೋಜಿತನಾಗಿದ್ದ ಅಧಿಕಾರಿಯು, ಜವಾಹಿರಿಯ ಜೀವನ ಕ್ರಮವನ್ನು ಅಧ್ಯಯನ ನಡೆಸಿದ್ದರು.

ಪ್ರತಿ ದಿನ ಬೆಳಗ್ಗೆ ಮನೆಯ ಬಾಲ್ಕನಿಯಲ್ಲಿ ಏಕಾಂಗಿಯಾಗಿ ನಿಂತು ಓದುವುದನ್ನು ಆತ ರೂಢಿಸಿಕೊಂಡಿದ್ದ. ಹೀಗಾಗಿ, ಅದನ್ನೇ ಹಲವು ದಿನಗಳ ಕಾಲ ಅಧ್ಯಯನ ನಡೆಸಿದ ಬಳಿಕ ಜು.30ರಂದು ಸಮಯ ನೋಡಿ ನಿಖರ ದಾಳಿ ಮಾಡಿ ಸಾಯಿಸಲಾಯಿತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮುಂದಿನ ನಾಯಕ ಯಾರು?:
ಉಗ್ರ ಸಂಘಟನೆಯ ಮುಂದಿನ ನಾಯಕನಾಗಿ ಮೊಹಮ್ಮದ್‌ ಸಲಾಹ್ದಿನ್‌ ಝಿದಾನ್‌ ಎಂಬ ಈಜಿಪ್ಟ್ ಮೂಲದ ಉಗ್ರ ಆಯ್ಕೆಯಾಗುವುದು ಖಚಿತವಾಗಿದೆ. ಆದರೆ, ಆತನಿಂದ ಭಾರತಕ್ಕೆ ಯಾವ ರೀತಿಯಾಗಿ ಪ್ರತಿಕೂಲ ಪರಿಣಾಮ ಉಂಟಾಗಬಹುದು ಎಂಬ ಬಗ್ಗೆ ದೇಶದ ಗುಪ್ತಚರ ಸಂಸ್ಥೆಗಳು ಅಧ್ಯಯನ ನಡೆಸುತ್ತಿವೆ. ಜವಾಹಿರಿ ಸಾವಿನಿಂದ ಅಲ್‌-ಖೈದಾಕ್ಕೆ ಆಘಾತ ಉಂಟಾಗಿದೆ ಮತ್ತು ನೂತನ ನಾಯಕ ಉಗ್ರರನ್ನು ಜವಾಹಿರಿಯಂತೆ ಹಿಡಿದಿಟ್ಟುಕೊಳ್ಳಲು ಯಶಸ್ವಿಯಾಗಲಾರ ಎಂದೂ ಅಭಿಪ್ರಾಯಪಟ್ಟಿವೆ.

ಇದೇ ವೇಳೆ ಜವಾಹಿರಿ ಸಾವಿನ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಇರುವ ತನ್ನ ಪ್ರಜೆಗಳು ಎಚ್ಚರದಿಂದ ಇರಬೇಕು ಎಂದು ಅಮೆರಿಕ ಸರ್ಕಾರ ಸುತ್ತೋಲೆ ರವಾನಿಸಿದೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.