ಗುರುಪುರ ಹೋಬಳಿಯಲ್ಲಿ26 ಗ್ರಾಮಗಳಿಗೆ ಕೇವಲ ಆರು ಗ್ರಾಮಕರಣಿಕರು


Team Udayavani, Aug 4, 2022, 2:23 PM IST

5

ಕೈಕಂಬ: ಗುರುಪುರ ಹೋಬಳಿ ವ್ಯಾಪ್ತಿಯಲ್ಲಿ 26 ಗ್ರಾಮಗಳಿದ್ದು, ಪ್ರಸ್ತುತ 6 ಗ್ರಾಮಗಳಲ್ಲಿ ಮಾತ್ರ ಗ್ರಾಮ ಕರಣಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರಾಮಸ್ಥರಿಗೆ ತಮ್ಮ ಗ್ರಾಮದ ಗ್ರಾಮ ಕರಣಿಕರು ಕಾಣಸಿಗದೆ ಅಲೆದಾಡುವಂತಾಗಿದೆ. ಸರಕಾರಿ ಯೋಜನೆಗಳು ಜನರಿಗೆ ಮುಟ್ಟದ ಪರಿಸ್ಥಿತಿಗೆ ನಿರ್ಮಾಣವಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯ ಕುಡುಪು, ಪಚ್ಚನಾಡಿ, ತಿರುವೈಲು ಮತ್ತು ಇದರ ಜತೆ 23 ಗ್ರಾಮಗಳಾದ ಅಡ್ಯಾರು, ಅರ್ಕುಳ, ನೀರುಮಾರ್ಗ, ಅಡೂxರು, ಮೂಳೂರು, ಬೊಂಡಂತಿಲ, ಮಲ್ಲೂರು, ಉಳಾಯಿಬೆಟ್ಟು, ಬಡಗ ಎಡಪದವು, ಮೂಡುಪೆರಾರ,ಪಡುಪೆರಾರ, ತೆಂಕುಳಿಪಾಡಿ, ಬಡಗುಳಿಪಾಡಿ, ಮೊಗರು, ಅದ್ಯಪಾಡಿ, ಕೊಳಂಬೆ, ಕಂದಾವರ, ಕೊಂಪದವು, ಮುಚ್ಚಾರು, ತೆಂಕ ಎಡಪದವು, ಕಿಲೆಂಜಾರು, ಕೊಳವೂರು, ಮುತ್ತೂರು ಗುರುಪುರ ಹೋಬಳಿ ವ್ಯಾಪ್ತಿಗೆ ಬರುತ್ತವೆ.

ಒಂದು ಗ್ರಾಮಕರಣಿಕರಿಗೆ 3ರಿಂದ 5 ಗ್ರಾಮಗಳು ಇಲ್ಲಿ ಒಬ್ಬ ಗ್ರಾಮಕರಣಿಕರಿಗೆ ತಲಾ 3 ರಿಂದ 5 ಗ್ರಾಮಗಳಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ಎರಡು ದಿನಕ್ಕೆ ಒಂದು ಗ್ರಾಮಗಳಿಗೆ ಹೋದರೂ ಎಲ್ಲ ಗ್ರಾಮಗಳಲ್ಲಿ ಕಾರ್ಯನಿರ್ವಹಿಸಲು ಕಷ್ಟ ಪಡುವಂತಾಗಿದೆ. ಜಾತಿ, ಆದಾಯ, ಪಿಂಚಣಿ, ಪ್ರಕೃತಿ ವಿಕೋಪ, ರೇಶನ್‌ ಕಾರ್ಡ್‌ ಸ್ಥಳ ಪರಿಶೀಲನೆ, ನೋಟಿಸ್‌ ಜಾರಿ, ತಾಲೂಕು ಕಚೇರಿಯಲ್ಲಿ ಸಭೆಗಳು ಹೀಗೆ ಎಲ್ಲದಕ್ಕೂ ಗ್ರಾಮಕರಣಿಕರ ಸಹಿ ಅಗತ್ಯವಾಗಿದೆ. ಆದರೆ ಅವರಿಗಾಗಿ ಹುಡುಕಾಟ ಮಾಡಬೇಕಾದ ಪರಿಸ್ಥಿತಿ ಗ್ರಾಮಸ್ಥರದ್ದು.

ಜನರಿಗೆ ತಲುಪದ ಯೋಜನೆಗಳು

ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರೆ ಅದಕ್ಕೆ ಗ್ರಾಮ ಕರಣಿಕರು ಹಾಗೂ ಕಂದಾಯ ಇಲಾಖೆ ಶಿಫಾರಸು ಅಗತ್ಯ. ಸರಕಾರದ ಯೋಜನೆಗಳು ಜನರಿಗೆ ತಲುಪಲು ಗ್ರಾಮ ಕರಣಿಕರ ಕೊರತೆಯಿಂದ ಸಾಧ್ಯವಾಗುತ್ತಿಲ್ಲ. ಸರಕಾರ ಹಲವಾರು ಯೋಜನೆಗಳು ತರುವ ಜತೆಗೆ ಗ್ರಾಮಕರಣಿಕರನ್ನು ಪ್ರತೀ ಗ್ರಾಮಗಳಲ್ಲಿ ನೇಮಿಸುವುದು ಅಗತ್ಯ.

ಹಲವಾರು ಗ್ರಾಮ ಸಭೆಗಳಲ್ಲಿ ಖಾಯಂ ಗ್ರಾಮಕರಣಿಕರ ನೇಮಕಾತಿಯ ಬಗ್ಗೆ ಒತ್ತಾಯಗಳು ಬಂದಿದೆ. ನಿರ್ಣಯಗಳು ಕೂಡ ಆಗಿದೆ. ಎಲ್ಲದಕ್ಕೂ ಗ್ರಾಮ ಕರಣಿಕರೇ ಅಗತ್ಯ ವಾಗಿರುವುದರಿಂದ ಗ್ರಾಮ ಗ್ರಾಮಗಳಿಗೆ ಗ್ರಾಮಕರಣಿಕರ ನೇಮಕಾತಿಯಾಗಬೇಕು.

ಯೋಜನೆಗಳು ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿರಬಾರದು. ಅವುಗಳನ್ನು ಅನುಷ್ಟಾನಕ್ಕೆ ತರುವಲ್ಲಿ ಗ್ರಾಮಕ ರಣಿಕರು ಗ್ರಾಮಸ್ಥರಿಗೆ ಸುಲಭವಾಗಿ ಸಿಗಬೇಕು. ಈಗಿನ ಪರಿಸ್ಥಿತಿಯಲ್ಲಿ ಗ್ರಾಮ ಕರಣಿಕರನ್ನು ಹುಡುಕಿ ಅಥವಾ ಪೋನ್‌ ಮಾಡಿ ಕೇಳಿ ಬೇರೆ ಗ್ರಾಮಗಳಿಗೆ ಹೋಗಿ ಅಲ್ಲಿ ಅವರ ಸಹಿ ಹಾಕಿಸಿಕೊಳ್ಳಬೇಕಾಗಿದೆ.

ಗುರುಪುರ ನಾಡಕಚೇರಿ: ಏಕೈಕ ಡಾಟಾ ಆಪರೇಟರ್‌

ನಾಡಕಚೇರಿಯಲ್ಲಿಯೂ ಇಂತಹದ್ದೇ ಸನ್ನಿವೇಶ. ಉಪತಹಶೀಲ್ದಾರ್‌, ಕಂದಾಯ ನಿರೀಕ್ಷಕರು, ಒಬ್ಬರು ಡಾಟಾ ಆಪರೇಟರ್‌, ದಿನಕೂಲಿ ನೌಕರ ಕಾರ್ಯನಿರ್ವಹಿಸುತ್ತಿದ್ದಾರೆ. ಇಲಾಖೆಗಳ ಮಾತೃ ಇಲಾಖೆಯಾದ ಕಂದಾಯ ಇಲಾಖೆ ಮಹತ್ವದ್ದಾಗಿದ್ದು, ಇಲ್ಲಿ ಯಾವುದೇ ಕೊರತೆ ಕಂಡು ಬಂದಲ್ಲಿ ಸಮಸ್ಯೆ ಎದುರಿಸುವುದು ಜನರು. ಈ ಬಗ್ಗೆ ಗಮನ ನೀಡಬೇಕಾಗಿದೆ. ಗುರುಪುರ ನಾಡ ಕಚೇರಿಯಲ್ಲಿ ಈಗ ಒಬ್ಬರೇ ಡಾಟಾ ಆಪರೇಟರ್‌ ಕಾರ್ಯನಿರ್ವಹಿಸುತ್ತಿದ್ದಾರೆ. ದಿನೇ ದಿನೆ ಜನರ ಉದ್ದದ ಸಾಲು ಇಲ್ಲಿ ಕಾಣಸಿಗುತ್ತದೆ. ಇನ್ನೊಬ್ಬರು ದಿನಗೂಲಿ ನೌಕರ ಕಾರ್ಯನಿರ್ವಹಿಸುತ್ತಿದ್ದು ಇಲ್ಲಿಯೂ ಇನ್ನೊಬ್ಬರ ಅಗತ್ಯವಿದೆ. ದ್ವಿತೀಯ ಸಹಾಯಕ ಹುದ್ದೆ ನೇಮಕಾತಿಯಾಗದೇ ಹಲವಾರು ವರ್ಷಗಳಾಗಿವೆ.

ಸಚಿವರಿಗೆ ಮನವಿ: ಪ್ರತಿಯೊಂದು ಗ್ರಾಮ ಪಂಚಾಯತ್‌ಗೆ ಗ್ರಾಮ ಕರಣಿಕರ ನೇಮಿಸಬೇಕೆಂದು ಕಂದಾಯ ಸಚಿವ ಅಶೋಕ್‌ ಅವರಿಗೆ ಈಗಾಗಲೇ ಮನವಿ ಮಾಡಿದ್ದೇನೆ. ಜಿಲ್ಲೆಯಲ್ಲಿಯೇ ಇರುವಗ್ರಾಮ ಕರಣಿಕರ ಕೊರತೆಯ ಬಗ್ಗೆಯೂ ಅವರ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಅಧಿಕಾರ ಕೊಟ್ಟು ಗ್ರಾಮಕರಣಿಕರನ್ನು ನೇಮಿಸಬೇಕೆಂದು ಮನವಿಯನ್ನು ಮಾಡಿದ್ದೇನೆ.ಗುರುಪುರ ನಾಡಕಚೇರಿಯಲ್ಲಿ ಡಾಟಾ ಆಪರೇಟರ್‌ ಸಿಬಂದಿ ಕೊರತೆಯ ಬಗ್ಗೆ ಹಾಗೂ ನೇಮಕಕ್ಕೂ ಮನವಿ ಮಾಡಲಾಗಿದೆ. – ಡಾ| ಭರತ್‌ ಶೆಟ್ಟಿ ವೈ., ಶಾಸಕ

-ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

6-sslc

Rank: ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.