200ಕ್ಕೂ ಹೆಚ್ಚು ಕಲ್ಲು ಗಣಿಗಳಲ್ಲಿ ನೀರು ಜಮೆ


Team Udayavani, Aug 4, 2022, 3:47 PM IST

4stone

ವಾಡಿ: ಪಟ್ಟಣದಲ್ಲಿ ಕಳೆದ ಎರಡು ದಿನಗಳಿಂದ ಮತ್ತೆ ಅಬ್ಬರಿಸಲು ಆರಂಭಿಸಿರುವ ಮುಂಗಾರು ಮಳೆ ಆರ್ಭಟದಿಂದ ಈ ಭಾಗದ ಕಲ್ಲು ಗಣಿ ಸೇರಿದಂತೆ ಓಣಿ, ಕೇರಿಗಳು ಜಲಾವೃತವಾಗಿವೆ.

ಸತತ ಮಳೆಯಿಂದ ಗಣಿ ಕಾರ್ಮಿಕರ ದಿನಗೂಲಿಗೆ ಪೆಟ್ಟು ಬಿದ್ದರೆ, ಮನೆಗೆ ನೀರು ನುಗ್ಗಿದ ಬಡಾವಣೆಗಳ ಜನರ ಬದುಕು ದುಸ್ತರವಾಗಿದೆ. ಮಳೆ ಹೊಡೆತಕ್ಕೆ ತೊಗರಿ ಫಸಲು ನಾಟಿಯಾಗದೇ ಕೊಳೆತು ಹೋಗಿದ್ದು, ಮರು ಬಿತ್ತನೆಗೂ ರೈತರು ಸಿದ್ಧರಾಗಿದ್ದಾರೆ. ತುಸು ಭರವಸೆ ನೀಡಿದ್ದ ಹೆಸರು ಮಳೆಗೆ ಕೊಚ್ಚಿಕೊಂಡು ಹೋಗುತ್ತಿದೆ. ಬಿಡುವಿಲ್ಲದೇ ಔಷಧ ಸಿಂಪಡಣೆಯಲ್ಲಿ ತೊಡಗಿರುವ ಕೃಷಿಕರು ಬೆಳೆ ರಕ್ಷಣೆಗೆ ಪರದಾಡುತ್ತಿದ್ದಾರೆ.

ದುರಂತ ಎಂದರೆ ಈಗ ಮತ್ತೆ ಸತತವಾಗಿ ಮಳೆ ಆಗುತ್ತಿರುವುದರಿಂದ ಹೊಲಗಳಲ್ಲಿ ನೀರು ಶೇಖರಣೆಯಾಗಿ ಬೆಳೆಗೆ ಧಕ್ಕೆಯಾಗುತ್ತಿದೆ. ಕಾರ್ಮೋಡದ ಒಡಲಿನಿಂದ ಸುರಿಯುತ್ತಿರುವ ಮಳೆಗೆ ಈ ಭಾಗದ ಸುಮಾರು 200ಕ್ಕೂ ಹೆಚ್ಚು ಕಲ್ಲು ಗಣಿಗಳಲ್ಲಿ ಭಾರಿ ಪ್ರಮಾಣದ ನೀರು ಜಮಾವಣೆಯಾಗಿದ್ದು, ಮಿನಿ ಜಲಪಾತಗಳೇ ಸೃಷ್ಟಿಯಾಗಿವೆ. ಹಾಸುಗಲ್ಲುಗಳ ಸಾಗಾಣಿಕೆ ಸಂಪೂರ್ಣ ಸ್ಥಗಿತವಾಗಿದೆ.

ಮುಂಬೈ, ಪುಣೆ, ಸೂರತ್‌, ಸಾಂಗ್ಲಿ, ಸೊಲ್ಲಾಪುರ ಸೇರಿದಂತೆ ವಿವಿಧ ರಾಜ್ಯಗಳಿಗೆ ರಫ್ತು ಆಗುತ್ತಿದ್ದ ಹಾಸುಗಲ್ಲಿನ ಪರ್ಷಿ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಗಣಿಗಾರಿಕೆ ಸ್ಥಗಿತವಾಗಿದ್ದರಿಂದ ಅಂದಾಜು ಎರಡು ಸಾವಿರ ಗಣಿ ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದೆ.

ಭಾರತ ಕ್ವಾರಿ ಜಲಾವೃತ: ವಾಡಿ ಪುರಸಭೆ ವ್ಯಾಪ್ತಿಯ ವಾರ್ಡ್‌ 23 ಮತ್ತು ರಾವೂರ ಗ್ರಾಮದ ನಡುವಿನ ಭಾರತ ಕ್ವಾರಿ ಗಣಿ ಉದ್ಯಮದ ಪರಿಸದಲ್ಲಿರುವ ಭಾರತ ಕ್ವಾರಿ ಬಡಾವಣೆಗೆ ಕಲ್ಲು ಗಣಿಗಳಿಂದ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದು, ಇಡೀ ಬಡಾವಣೆ ಜನರು ಜಲ ಸಂಕಟ ಅನುಭವಿಸುತ್ತಿದ್ದಾರೆ. ಮಳೆಯಿಂದ ಗಣಿಗಳು ಭರ್ತಿಯಾಗಿ ನೀರು ಬಡಾವಣೆಗೆ ನುಗ್ಗುತ್ತಿದೆ. ಇದರಿಂದ ಬಡ ಕೂಲಿ ಕಾರ್ಮಿಕರ ಕುಟುಂಬಗಳು ತೀವ್ರ ತೊಂದರೆ ಅನುಭವಿಸುತ್ತಿರುವುದು ಕಂಡು ಬಂದಿದೆ. ಯಾವೊಬ್ಬ ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳು ನಮ್ಮ ಕಷ್ಟ ಕೇಳಲು ಓಣಿಗೆ ಬಂದಿಲ್ಲ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.