ಕೊರಟಗೆರೆ: ಅನಧಿಕೃತ ನಾಡ ಬಂದೂಕು ಹೊಂದಿದ್ದ ಇಬ್ಬರ ಬಂಧನ
Team Udayavani, Aug 4, 2022, 7:16 PM IST
ಕೊರಟಗೆರೆ: ಲೈಸೆನ್ಸ್ ಇಲ್ಲದೆ ನಾಡ ಬಂದೂಕು ಹೊಂದಿದ್ದ ಇಬ್ಬರನ್ನು ಕೊರಟಗೆರೆ ಪೋಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬೆಂಡೋಣೆ ಗ್ರಾಮದ ಮಂಜೇಶ್ ಬಿ.ಎಸ್(22) ಮತ್ತು ನರಸಿಂಹಮೂರ್ತಿ(40) ಎನ್ನುವವರಾಗಿದ್ದಾರೆ. ಬಂಧಿತರಿಂದ ಎರಡು ನಾಡ ಬಂದೂಕು ಮತ್ತು 15 ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಡೋಣೆ ಗ್ರಾಮದ ಮಂಜೇಶ್ ಮನೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಬಂದೂಕು ಮತ್ತು ಸಿಡಿ ಮದ್ದುಗಳನ್ನು ಹೊಂದಿರುವ ಬಗ್ಗೆ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ.
ಸಿಪಿಐ ಸಿದ್ದರಾಮೇಶ್ವರ ಪಿಎಸ್ಐ ನಾಗರಾಜು.ಬಿ ಮತ್ತು ಸಿಬ್ಬಂದಿಗಳಾದ ಧರ್ಮ ಪಾಲನಾಯಕ್, ಮೋಹನ್, ನಜರುಲ್ಲಾ, ದಯಾನಂದ್, ಗಂಗಾಧರಪ್ಪ, ನರಸಿಂಹಮುರ್ತಿ, ಸೈಯದ್, ದೊಡ್ಡಲಿಂಗಯ್ಯ ದಾಳಿನಡೆಸಿ ಆರೋಪಿಗಳನ್ನು ಬಂಧಿಸಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ