ಕಲಬುರಗಿ ನಗರದಲ್ಲಿ ಬಿರುಸಿನ ಮಳೆ: ಹಾನಿ ಪ್ರದೇಶಕ್ಕೆ ಡಿ.ಸಿ. ಹಠಾತ್ ಭೇಟಿ
Team Udayavani, Aug 4, 2022, 7:38 PM IST
ಕಲಬುರಗಿ: ನಗರದಲ್ಲಿ ಗುರುವಾರ ಮಧ್ಯಾಹ್ನ ಬಿರುಸಿನ ಮಳೆಯಾದ ಕಾರಣ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರಿಂದ ಡಿ.ಸಿ. ಯಶವಂತ ವಿ. ಗುರುಕರ್ ಅವರು ನಗರದ ತಾರಪೈಲ್ ಪ್ರದೇಶಕ್ಕೆ ಹಠಾತ್ ಭೇಟಿ ನೀಡಿ ಹಾನಿ ಪ್ರದೇಶವನ್ನು ಪರಿಶೀಲಿಸಿದರು.
ಮಹಾನಗರ ಪಾಲಿಕೆಯ ಆಯುಕ್ತ ಭುವನೇಶ ಪಾಟೀಲ ದೇವಿದಾಸ್ ಸೇರಿದಂತೆ ಪಾಲಿಕೆ ವಲಯದ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಮಳೆ ನೀರು ನುಗ್ಗಿರುವ ಮನೆಗಳನ್ನು ವೀಕ್ಷಿಸಿದರು.
ಪರಿಷ್ಕೃತ ಪರಿಹಾರ ಮಾರ್ಗಸೂಚಿಯಂತೆ ಮಳೆ ನೀರಿನಿಂದ ಬಟ್ಟೆ-ಪಾತ್ರೆ ಹಾನಿಯಾಗಿದ್ದನ್ನು ಸ್ಥಳ ಪರಿಶೀಲಿಸಿ, ಜಿಯೋ ಫೋಟೊ ಪಡೆದು ಎರಡು ದಿನದನಲ್ಲಿಯೇ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಯಶವಂತ ವಿ. ಗುರುಕರ್ ಸೂಚಿಸಿದರು.
ಪಾಲಿಕೆಯ ಕಾರ್ಯನಿರ್ವಾಹಕ ಅಭಿಯಂತ ಆರ್.ಪಿ.ಜಾಧವ ಸೇರಿದಂತೆ ವಲಯದ ಆಯುಕ್ತರು, ಸಿಬಂದಿಗಳು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್