ಕೊಡಗಿನ ಗಡಿ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತ


Team Udayavani, Aug 5, 2022, 6:31 AM IST

ಕೊಡಗಿನ ಗಡಿ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತ

ಮಡಿಕೇರಿ: ಮಹಾಮಳೆ ಮತ್ತು ಗುಡ್ಡ ಪ್ರದೇಶಗಳಲ್ಲಿ ಉಂಟಾಗುತ್ತಿರುವ ಜಲಸ್ಫೋಟದಿಂದ ಕೊಡಗಿನ ಗಡಿ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸಂಪಾಜೆ ಹಾಗೂ ಕಲ್ಲುಗುಂಡಿ ಭಾಗದಲ್ಲಿ ಪಯಸ್ವಿನಿ ನದಿ ರಾಷ್ಟ್ರೀಯ ಹೆದ್ದಾರಿಯನ್ನು ಆವರಿಸಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ನಿರಂತರ ಮಳೆೆಯ ರಭಸಕ್ಕೆ ಭಾಗಮಂಡಲ-ಕರಿಕೆ ರಸ್ತೆಯಲ್ಲಿ ಭಾರೀ ಗುಡ್ಡ ಕುಸಿತ ಉಂಟಾಗಿದೆ. ಚೆಂಬು ಗ್ರಾಮ ವ್ಯಾಪ್ತಿಯಲ್ಲಿ ಜಲಸ್ಫೋಟದಿಂದ ಮನೆಗಳಿಗೆ ಹಾನಿಯಾಗಿದೆ. 24 ಗಂಟೆಗಳಲ್ಲಿ ಎಂಟು ಇಂಚಿಗೂ ಅಧಿಕ ಮಳೆಯಾಗಿದೆ. ಬೆಟ್ಟ ಪ್ರದೇಶದಲ್ಲಿ ಜಲಸ್ಫೋಟದಿಂದ ಕೆಸರು ಮಿಶ್ರಿತ ನೀರು ಗ್ರಾಮದ ಬಾಲಕೃಷ್ಣ ಅವರ ಮನೆಗೆ ನುಗ್ಗಿ ಸಾಕಷ್ಟು ಹಾನಿಯಾಗಿದೆ. ಸುತ್ತಮುತ್ತಲ ತೋಟ ಗಳಿಗೂ ಮಣ್ಣು ನುಗ್ಗಿದೆ. ಕೊಟ್ಟಿಗೆಯೊಂದು ನೆಲಸಮ ವಾಗಿದೆ. ಕೆಲವು ಕುಟುಂಬಗಳು ರಾತ್ರಿಯೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಂಡಿವೆ.

ವಿವಿಧೆಡೆ ಬರೆ ಕುಸಿತ: ಸಂಪಾಜೆಯ ಕಲ್ಲಳ್ಳದ ಗಣಪತಿ ಅವರ ಮನೆ ಬಳಿ ಮತ್ತು ಮದೆ ಗ್ರಾ.ಪಂ. ವ್ಯಾಪ್ತಿಯ ಬೆಟ್ಟತ್ತೂರು ಗ್ರಾಮದ ಬಲೆಕಂಡಿ ರಸ್ತೆ ಯಲ್ಲಿ ಭಾರೀ ಪ್ರಮಾಣದಲ್ಲಿ ಬರೆ ಕುಸಿದಿದೆ. ಕರಿಕೆ ರಸ್ತೆಯ ಕೊಟ್ಟಮಲೆ, ಬಾಚಿಮಲೆ ವ್ಯಾಪ್ತಿಯಲ್ಲಿ ಭೂ ಕುಸಿತದಿಂದ ಭಾಗಮಂಡಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಮಣ್ಣು, ಮರದ ರಾಶಿ ಬಿದ್ದಿದೆ. ತೆರವು ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ.

ದ.ಕ. ಜಿಲ್ಲೆಯ ಸುಳ್ಯ ತಾಲೂಕಿಗೆ ಹೊಂದಿ ಕೊಂಡಿರುವ ಚೆಂಬು ಗ್ರಾಮದ ಊರುಬೈಲಿನಿಂದ ಸಂಪಾಜೆಗೆ ಸಂಪರ್ಕ ಕಲ್ಪಿಸುವ ಸೇತುವೆಯ ಪಾರ್ಶ್ವ ಕೊಚ್ಚಿ ಹೋಗಿದೆ. ಪಯಸ್ವಿನಿ ನದಿಯ ಪ್ರವಾಹದಿಂದ ಮಡಿಕೇರಿ-ಮಂಗಳೂರು ರಸ್ತೆಯ ಕೊಯನಾಡಿನ ಸೇತುವೆಯ ಒಂದು ಪಾರ್ಶ್ವಕ್ಕೆ ಹಾನಿಯಾಗಿದ್ದು, ತಾತ್ಕಾಲಿಕ ದುರಸ್ತಿ ಕೈಗೊಳ್ಳಲಾಗುತ್ತಿದೆ.

 ಮಡಿಕೇರಿ-ಮಂಗಳೂರು:ಲಾರಿಗಳ ಸಂಚಾರ ನಿಷೇಧ :

ಮಡಿಕೇರಿ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ದೇವರಕೊಲ್ಲಿಯಲ್ಲಿ ರಸ್ತೆಯಲ್ಲಿ ಬೃಹತ್‌ ಬಿರುಕುಗಳು ಮೂಡಿವೆ ಮತ್ತು ಕೊಯನಾಡು ಸೇತುವೆ ಸಮೀಪ ರಸ್ತೆ ಕುಸಿದಿದೆ. ಈ ಕಾರಣದಿಂದ ಮುಂಜಾಗ್ರತ ಕ್ರಮವಾಗಿ ಸರಕು ಸಾಗಾಣಿಕೆ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಸಂಪಾಜೆ, ಕಲ್ಲುಗುಂಡಿ ರಸ್ತೆ ಯಲ್ಲಿ ಮಡಿಕೇರಿ, ಮೈಸೂರು, ಚಾಮರಾಜನಗರ ಕಡೆಗೆ ತೆರಳಬೇಕಿದ್ದ ಪೆಟ್ರೋಲಿಯಂ, ಬುಲೆಟ್‌ ಟ್ಯಾಂಕರ್‌, ಪಶು ಆಹಾರ ಸಾಗಾಟ ಸೇರಿದಂತೆ ಇನ್ನಿತರ ಸರಕು ಸಾಗಿಸುವ ನೂರಾರು ಲಾರಿಗಳು ಸಾಲುಗಟ್ಟಿ ನಿಂತಿವೆ. ಏಕಾಏಕಿ ಸಂಪಾಜೆ ಚೆಕ್‌ ಪೋಸ್ಟ್‌ನಲ್ಲಿ ಲಾರಿಗಳನ್ನು ತಡೆಹಿಡಿದಿರುವುದರಿಂದ ನಮಗೆ ತೊಂದರೆಯಾಗಿದೆ ಎಂದು ಕೊಡಗು ಜಿಲ್ಲಾಡಳಿತದ ವಿರುದ್ಧ ಲಾರಿ ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಣಿ ಚೆಕ್‌ ಪೋಸ್ಟ್‌ನಲ್ಲಿಯೇ ಸಂಪಾಜೆ-ಮಡಿಕೇರಿ ರಸ್ತೆ ಬಂದ್‌ ಎಂದು ಮಾಹಿತಿ ನೀಡಿದ್ದರೆ ಈ ರಸ್ತೆಯಲ್ಲಿ ಬರುತ್ತಿರಲಿಲ್ಲ. ಮಾಣಿ- ಶಿರಾಡಿ ಘಾಟಿ ಮಾರ್ಗವಾಗಿ ನಿಗದಿತ ಸ್ಥಳಕ್ಕೆ ತಲುಪಲು ಸಾಧ್ಯವಾಗುತ್ತಿತ್ತು. ಡೀಸೆಲ್‌ಗೆ 97 ರೂ. ನೀಡಿ ಈಗಾಗಲೇ 100 ಕಿ.ಮೀ. ಕ್ರಮಿಸಿ ಸಂಪಾಜೆಗೆ ಬಂದಿದ್ದೇವೆ. ಈಗ ದಾರಿಯಲ್ಲಿ ತಡೆದು ಪರ್ಯಾಯ ರಸ್ತೆಯಲ್ಲಿ ಮರಳುವಂತೆ ತಾಕೀತು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.