ಕೃಷ್ಣಾ ನದಿಗೆ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
Team Udayavani, Aug 5, 2022, 4:55 PM IST
ನಾರಾಯಣಪುರ: ಬಸವಸಾಗರಕ್ಕೆ ಒಳಹರಿವು ತಗ್ಗಿದ್ದರಿಂದ ಜಲಾಶಯದ ಎಲ್ಲ ಕ್ರಸ್ಟ್ಗೇಟ್ ಗಳನ್ನು ಬಂದ್ ಮಾಡಲಾಗಿದೆ. ಸದ್ಯ ಜಲಾಶಯಕ್ಕೆ ಹೊಂದಿಕೊಂಡಿರುವ ಮುರುಡೇಶ್ವರ ಜಲವಿದ್ಯುತ್ ಸ್ಥಾವರ ಮೂಲಕ 6 ಸಾವಿರ ಕ್ಯುಸೆಕ್ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.
ಗುರುವಾರ ಬೆಳಗ್ಗೆ ಆಲಮಟ್ಟಿ ಶಾಸ್ತ್ರೀ ಸಾಗರದಿಂದ ಬಸವಸಾಗರಕ್ಕೆ ಒಳಹರಿವು 35 ಸಾವಿರ ಕ್ಯೂಸೆಕ್ ನಷ್ಟಿತ್ತು. ಆಗ ಕೃಷ್ಣಾ ನದಿಗೆ 34 ಸಾವಿರ ಕ್ಯೂಸೆಕ್ನಷ್ಟು ನೀರನ್ನು ಹರಿಸಲಾಗಿತ್ತು. ಸಂಜೆ ವೇಳೆಗೆ ಒಳಹರಿವು 6 ಸಾವಿರಕ್ಕೆ ಇಳಿಕೆಯಾಗಿದ್ದರಿಂದ ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಜಲಾಶಯದ ಅಧಿಕಾರಿಗಳ ಮಾಹಿತಿಯಂತೆ 492.25 ಮೀಟರ್ ಗರಿಷ್ಟ ಮಟ್ಟದಲ್ಲಿ 491.81 ಮೀಟರ್ ಇದೆ. 33.31 ಟಿಎಂಸಿ ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯದಲ್ಲಿ 31.27 ಟಿಎಂಸಿ ಅಡಿ ನೀರು ಇದೆ. ಒಳಹರಿವು 6 ಸಾವಿರ ಕ್ಯೂಸೆಕ್ ಇದೆ. ಹೊರಹರಿವು 6 ಸಾವಿರ ಕ್ಯೂಸೆಕ್ ಇದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !