ಹಂದಿಜೋಗಿಗಳ ಜಾಗ ಕಬಳಿಸಲು ಹುನ್ನಾರ:  ಹೆಚ್.ವಿಶ್ವನಾಥ್ ಗಂಭೀರ ಆರೋಪ

ಭೂಗಳ್ಳರೊಂದಿಗೆ ಪುರಸಭಾ ಮುಖ್ಯಾಧಿಕಾರಿ ಎ.ಟಿ.ಪ್ರಸನ್ನ ಶಾಮೀಲಾಗಿದ್ದಾರೆ....

Team Udayavani, Aug 5, 2022, 7:24 PM IST

1-ssdasd

ಪಿರಿಯಾಪಟ್ಟಣ: ಪಟ್ಟಣದಲ್ಲಿ ವಾಸಿಸುತ್ತಿರುವ ಹಂದಿ ಜೋಗಿಗಳ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವಂತೆ ಅಧಿಕಾರಿಗಳು ಹತ್ತಾರು ಬಾರಿ ಪತ್ರ ಬರೆದರೂ ಇಲ್ಲಿನ ಪುರಸಭಾ ಮುಖ್ಯಾಧಿಕಾರಿ ಎ.ಟಿ.ಪ್ರಸನ್ನ ರವರು ಮೂಲಭೂತ ಸೌಲಭ್ಯ ಕಲ್ಪಿಸಿದೆ, ಕೊಳಗೇರಿ ಅಭಿವೃದ್ಧಿ ಮಂಡಳಿಗೂ ಸೌಲಭ್ಯ ಕಲ್ಪಿಸಲು ಅವಕಾಶ ನೀಡದೆ ಭೂಗಳ್ಳರೊಂದಿಗೆ ಸೇರಿ ಹಂದಿಜೋಗಿಗಳ ಜಾಗವನ್ನು ಕಬಳಿಸಲು ಹುನ್ನಾರ ನಡೆಸುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಹೆಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.

ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ಹೃದಯ ಭಾಗದಲ್ಲಿ ಕಳೆದ 70 ವರ್ಷಗಳಿಂದ 38 ಹಂದಿಜೋಗಿ ಕುಟುಂಬಗಳು ವಾಸಿಸುತ್ತಿದ್ದು, 2001 ರಲ್ಲಿ ಅಂದಿನ ಮೈಸೂರು ಜಿಲ್ಲಾಧಿಕಾರಿಗಳು ಈ ಜನರು ವಾಸಿಸುತ್ತಿರುವ ಈ ಪ್ರದೇಶಕ್ಕೆ ಭೇಟಿ ನೀಡಿ, ಈ ಪ್ರದೇಶವನ್ನು ಘೋಷಿತ ಕೊಳಚೆ ಪ್ರದೇಶ ಎಂದು ಘೋಷಿಸಿ 38 ಕುಟುಂಬಗಳಿಗೆ ಪುರಸಭೆ ವತಿಯಿಂದ ಹಕ್ಕುಪತ್ರ ನೀಡುವ ಮೂಲಕ ಈ ಸ್ಥಳವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಅಭಿವೃದ್ಧಿ ಪಡಿಸಿ, ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತರು ಮತ್ತು ತಾಂತ್ರಿಕ ನಿರ್ದೇಶಕರಿಗೆ ಆದೇಶಿಸಿದ್ದಾರೆ. ಆದರೆ ಇಲ್ಲಿನ ಪುರಸಭಾ ಅಧಿಕಾರಿಗಳು 2001 ರಿಂದ ಇಂದಿನವರೆಗೂ ತಾವೂ ಮೂಲಭೂತ ಸೌಲಭ್ಯವನ್ನು ಕಲ್ಪಿಸದೆ ಇತ್ತ ಕೊಳಗೇರಿ ಅಭಿವೃದ್ಧಿ ಮಂಡಳಿಗೂ ಅಭಿವೃದ್ಧಿ ಪಡಿಸಲು ಅವಕಾಶ ನೀಡದೆ ಭೂಗಳ್ಳರೊಂದಿಗೆ ಸೇರಿ ಜಾಗವನ್ನು ಕಬಳಿಸಲು ಸಂಚು ರೂಪಿಸಿ ಈ ಜನರನ್ನು ವಕ್ಕಲೆಬ್ಬಿಸಲು ಹೊರಟಿದ್ದಾರೆ ಇದಕ್ಕೆ ಅವಕಾಶ ಕೊಡುವುದಿಲ್ಲಎಂದರು.

ಯಾವುದೇ ಒಬ್ಬ ವ್ಯಕ್ತಿ ಸಸತ 12 ವರ್ಷಗಳ ಕಾಲ ಒಂದು ಸ್ಥಳದಲ್ಲಿ ವಾಸವಿದ್ದರೆ ಆ ಜಾಗದ ಮಾಲೀಕತ್ವಕ್ಕೆ ಆತ ಅರ್ಹರಾಗಿರುತ್ತಾನೆ. ಹಂದಿಜೋಗಿ ಕುಟುಂಬಗಳ ವಿರುದ್ಧ ಯಾರೇ ಇದ್ದರೂ ಅಂತಹವರ ವಿರುದ್ಧ ಕಾನೂನು ರೀತಿ ಹೋರಾಟ ನಡೆಸಿ ಹಂದಿ ಇವರಿಗೆ ನ್ಯಾಯ ದೊರಕಿಸಿಕೊಡುತ್ತೇನೆ ಎಂದರು.

ಹಂದಿಜೋಗಿಗಳು ವಾಸಿಸುತ್ತಿರುವ 1.7 ಗುಂಟೆ ಜಾಗದಲ್ಲಿ 38 ಕುಟುಂಬಗಳಿಗೆ ಪುರಸಭಾ ವತಿಯಿಂದ ಹಕ್ಕುಪತ್ರ ನೀಡಿದ್ದರೂ 2008 ರಲ್ಲಿ ಸತ್ತಿರುವ ಅಪರಿಚಿತ ವ್ಯಕ್ತಿಯ ಹೆಸರಿನಲ್ಲಿ ಅಕ್ರಮ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಅಲ್ಲದೆ, ಮತ್ತೊಂದು ಸುಳ್ಳು ದಾಖಲೆ ಸೃಷ್ಟಿಸಿ ಅಪರಿಚಿತ ವ್ಯಕ್ತಿಯ ಹೆಂಡತಿ ನಾನೇ ಎಂದು ಒಬ್ಬ ಮಹಿಳೆಯನ್ನು ಕರೆತಂದು ಈ ಜಾಗವನ್ನು ಕಬಳಿಸಲು ಸ್ಥಳೀಯ ಕೆಲ ಪ್ರಭಾವಿ ವ್ಯಕ್ತಿಗಳ ಸಹಕಾರ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅದನ್ನು ಬಹಿರಂಗಪಡಿಸಲಾಗುವುದು, ಈ ಜಾಗ ಸರ್ಕಾರದ ಆಸ್ತಿ ಎಂಬುದಕ್ಕೆ ಹಂದಿಜೋಗಿ ಕುಟುಂಬಗಳ ಬಳಿ ಸೂಕ್ತ ದಾಖಲಾತಿಗಳಿದ್ದು ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಇಲ್ಲಿನ ಸಮಸ್ಯೆಗಳ ಬಗ್ಗೆ ವಿವರಣೆ ನೀಡಿದ್ದು, ಶೀಘ್ರದಲ್ಲೇ ಸ್ಥಳಕ್ಕಾಗಮಿಸಿ ಅಭಿವೃದ್ಧಿಗೆ ಒತ್ತು ನೀಡಿ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವುದಾಗಿ ತಿಳಿಸಿದ್ದಾರೆ, ಪುರಸಭೆ ಮುಖ್ಯಾಧಿಕಾರಿ ಎ.ಟಿ.ಪ್ರಸನ್ನ ರಾಜಕೀಯ ಪ್ರೇರಿತವಾಗಿ ಈ ಸ್ಥಳ ಖಾಸಗಿ ವ್ಯಕ್ತಿಗೆ ಸೇರಿದ್ದು ಅಲ್ಲಿನ ನಿವಾಸಿಗಳಿಂದ ಖಾಸಗಿ ವ್ಯಕ್ತಿಯೊಬ್ಬರು ಲಕ್ಷಾಂತರ ರೂ ಹಣ ವಸೂಲಿ ಮಾಡಿ ನಿಮ್ಮ ಪರ ಹೋರಾಟ ಮಾಡುತ್ತೇನೆ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ, ಅಲ್ಲಿನ ನಿವಾಸಿಗಳ ಬಳಿ ಅಷ್ಟೊಂದು ಹಣ ಹೊಂದಿಸಿಕೊಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಯುವ ಮುಖಂಡ ನೇರಳೆಕುಪ್ಪೆ ನವೀನ್ ಮಾತನಾಡಿ ಹಂದಿಜೋಗಿ ಕಾಲೊನಿ ನಿವಾಸಿಗಳಿಗೆ ಮೂಲ ಸೌಕರ್ಯ ನೀಡುವ ತನಕ ನಮ್ಮ ಹೋರಾಟ ನಿಲ್ಲುವುದಿಲ್ಲ, ಅವರು ವಾಸಿಸುತ್ತಿರುವ ಸ್ಥಳ ಸರ್ಕಾರದ ಆಸ್ತಿ ಎಂಬುದಕ್ಕೆ ನಮ್ಮ ಬಳಿ ದಾಖಲೆಗಳಿವೆ ಖಾಸಗಿ ವ್ಯಕ್ತಿಗಳು ಕಬಳಿಸಲು ಬಿಡುವುದಿಲ್ಲ ಭೂಗಳ್ಳರಿಗೆ ಎಷ್ಟೇ ರಾಜಕೀಯ ಪ್ರಭಾವವಿದ್ದರೂ, ಯಾವುದೇ ಬೆದರಿಕೆ ಒಡ್ಡಿದರೂ ನಾವು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.