ಭಾರತ-ವೆಸ್ಟ್‌ ಇಂಡೀಸ್‌ ಟಿ20: ಅಮೆರಿಕದಲ್ಲಿ ವೀಕೆಂಡ್‌ ರಂಜನೆ


Team Udayavani, Aug 6, 2022, 7:45 AM IST

ಭಾರತ-ವೆಸ್ಟ್‌ ಇಂಡೀಸ್‌ ಟಿ20: ಅಮೆರಿಕದಲ್ಲಿ ವೀಕೆಂಡ್‌ ರಂಜನೆ

ಫ್ಲೋರಿಡಾ: ಕೆರಿಬಿಯನ್‌ ದ್ವೀಪದಲ್ಲಿ 3 ಟಿ20 ಪಂದ್ಯಗಳನ್ನು ಪೂರೈಸಿದ ಭಾರತ-ವೆಸ್ಟ್‌ ಇಂಡೀಸ್‌ ತಂಡಗಳೀಗ ಅಮೆರಿಕದ ಫ್ಲೋರಿಡಾಕ್ಕೆ ಆಗಮಿಸಿವೆ.

ಶನಿವಾರ ಮತ್ತು ರವಿವಾರ ಇಲ್ಲಿ ಕೊನೆಯ 2 ಪಂದ್ಯಗಳನ್ನು ಆಡಲಾಗುವುದು. ಇದು ಅಮೆರಿಕದ ಕ್ರಿಕೆಟ್‌ ಪ್ರೇಮಿಗಳಿಗೆ ವೀಕೆಂಡ್‌ ರಂಜನೆಯಾದರೆ, ಭಾರತಕ್ಕೆ ಏಷ್ಯಾ ಕಪ್‌ ತಂಡದ ಆಯ್ಕೆಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ.

ವೆಸ್ಟ್‌ ಇಂಡೀಸ್‌ನಲ್ಲಿ ಆಡಲಾದ 3 ಪಂದ್ಯಗಳಲ್ಲಿ ಭಾರತ 2-1 ಮುನ್ನಡೆ ಸಾಧಿಸಿದ್ದು, ಇನ್ನೊಂದನ್ನು ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ವಿಂಡೀಸ್‌ ಮುಂದೆ ಎರಡನ್ನೂ ಗೆಲ್ಲುವ ಒತ್ತಡವಿದೆ.

ಬ್ಯಾಟಿಂಗ್‌ ಪೈಪೋಟಿ
ವಿರಾಟ್‌ ಕೊಹ್ಲಿ, ಕೆ.ಎಲ್‌. ರಾಹುಲ್‌ ಅವರ ಅನುಪಸ್ಥಿತಿಯ ಹೊರತಾಗಿಯೂ ಭಾರದ ಸದೃಢ ಬ್ಯಾಟಿಂಗ್‌ ಸರದಿಯನ್ನು ಹೊಂದಿದೆ. ಆದರೂ ಇಲ್ಲಿ ಆರೋಗ್ಯಕರ ಪೈಪೋಟಿ ಇರುವುದನ್ನು ಮರೆಯು ವಂತಿಲ್ಲ. ಶ್ರೇಯಸ್‌ ಆಯ್ಯರ್‌ ಮತ್ತು ದೀಪಕ್‌ ಹೂಡಾ ನಡುವೆ ಮಧ್ಯಮ ಕ್ರಮಾಂಕಕ್ಕೆ ಸ್ಪರ್ಧೆ ಏರ್ಪಟ್ಟಿದೆ. ಈಗಿನ ಲೆಕ್ಕಾಚಾರದ ಪ್ರಕಾರ ಇವರಲ್ಲೊಬ್ಬರಿಗಷ್ಟೇ ಏಷ್ಯಾ ಕಪ್‌ ತಂಡದಲ್ಲಿ ಸ್ಥಾನ ಸಿಗಲು ಸಾಧ್ಯ.

ಶ್ರೇಯಸ್‌ ಅಯ್ಯರ್‌ ಚುಟುಕು ಕ್ರಿಕೆಟ್‌ನಲ್ಲಿ ನಿರೀಕ್ಷಿತ ಯಶಸ್ಸು ಸಂಪಾದಿಸುವಲ್ಲಿ ವಿಫ‌ಲರಾಗಿದ್ದಾರೆ. 3 ಪಂದ್ಯಗಳಲ್ಲಿ ಗಳಿಸಿದ್ದು 0, 10 ಮತ್ತು 24 ರನ್‌ ಮಾತ್ರ. ಕಳೆದ ಎರಡೂವರೆ ತಿಂಗಳಲ್ಲಿ ಅಯ್ಯರ್‌ಗೆ 9 ಪಂದ್ಯಗಳನ್ನು ಆಡುವ ಅವಕಾಶ ಸಿಕ್ಕಿದೆ. ಕೆಲವೊಮ್ಮೆ 10 ಓವರ್‌ ಒಳಗೆ ಕ್ರೀಸ್‌ ಇಳಿದರೂ ಒಂದೂ ಅರ್ಧ ಶತಕ ಹೊಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ಫ್ಲೋರಿಡಾ ಪಂದ್ಯಗಳಲ್ಲಿ ಅಯ್ಯರ್‌ ಒಮ್ಮೆಲೇ ರನ್‌ ಮಳೆ ಸುರಿಸಲಿದ್ದಾರೆಂದು ಭಾವಿಸುವುದರಲ್ಲಿ ಅರ್ಥವಿಲ್ಲ.

ಆದರೆ ದೀಪಕ್‌ ಹೂಡಾ ಸಿಕ್ಕಿದ ಆವಕಾಶವನ್ನು ಎರಡೂ ಕೈಗಳಲ್ಲಿ ಬಾಚಿಕೊಳ್ಳುತ್ತಿದ್ದಾರೆ. ಬಿಗ್‌ ಹಿಟ್ಟಿಂಗ್‌ ಬ್ಯಾಟಿಂಗ್‌ ಮೂಲಕ ತಂಡದ ಮೊತ್ತವನ್ನು ಏರಿಸುವಲ್ಲಿ ಉಪಯುಕ್ತ ನೆರವು ನೀಡುತ್ತಿದ್ದಾರೆ. ಮ್ಯಾಚ್‌ ವಿನ್ನರ್‌ ಕೂಡ ಆಗಿದ್ದಾರೆ. ಆಫ್ಬ್ರೇಕ್‌ ಬೌಲಿಂಗ್‌ ಕೂಡ ಮಾಡಬಲ್ಲರು. 3ನೇ ಮುಖಾಮುಖೀಯಲ್ಲಿ ಬೌಲಿಂಗ್‌ ಆರಂಭಿಸಿದ್ದೇ ಹೂಡಾ. ನೀಡಿದ್ದು ಒಂದು ರನ್‌ ಮಾತ್ರ.

ರೋಹಿತ್‌ ಶರ್ಮ ಫಿಟ್‌
3ನೇ ಪಂದ್ಯದ ವೇಳೆ ಸೊಂಟದ ನೋವಿನಿಂದಾಗಿ ಕ್ರೀಸ್‌ ತ್ಯಜಿಸಿದ್ದ ನಾಯಕ ರೋಹಿತ್‌ ಶರ್ಮ ಈಗ ಫಿಟ್‌ ಆಗಿದ್ದು, ಆಡುವ ಎಲ್ಲ ಸಾಧ್ಯತೆ ಇದೆ. ಇವರೊಂದಿಗೆ ಕಳೆದ ಪಂದ್ಯದ ಹೀರೋ ಸೂರ್ಯಕುಮಾರ್‌ ಯಾದವ್‌ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ. ಈ ಅವಕಾಶವನ್ನು ಸೂರ್ಯ ಚೆನ್ನಾಗಿಯೇ ಬಳಸಿಕೊಂಡಿದ್ದಾರೆ. ಒಮ್ಮೆ ಕ್ರೀಸ್‌ ಆಕ್ರಮಿಸಿಕೊಂಡರೆಂದರೆ ಇವರನ್ನು ತಡೆಯುವುದು ಬಹಳ ಕಷ್ಟ. ಉಳಿ ದಂತೆ ಪಂತ್‌, ಪಾಂಡ್ಯ, ದಿನೇಶ್‌ ಕಾರ್ತಿಕ್‌ ಮಧ್ಯಮ ಕ್ರಮಾಂಕದಲ್ಲಿ ಮುಂದುವರಿಯುವ ಎಲ್ಲ ಸಾಧ್ಯತೆ ಇದೆ. ಸಂಜು ಸ್ಯಾಮ್ಸನ್‌ ಕೂಡ ರೇಸ್‌ನಲ್ಲಿದ್ದಾರೆ.

ಆವೇಶ್‌ ಖಾನ್‌ ವೈಫ‌ಲ್ಯ
ಬೌಲಿಂಗ್‌ ವಿಭಾಗದಲ್ಲಿ ಆವೇಶ್‌ ಖಾನ್‌ ಸಿಕ್ಕಾಪಟ್ಟೆ ದುಬಾರಿ ಆಗುತ್ತಿದ್ದಾರೆ. ಬಸೆಟರ್‌ನಲ್ಲಿ ಇವರ 3 ಓವರ್‌ಗಳಲ್ಲಿ ಬರೋಬ್ಬರಿ 47 ರನ್‌ ಸೋರಿ ಹೋಗಿತ್ತು. ಗಾಯಾಳು ಹರ್ಷಲ್‌ ಪಟೇಲ್‌ ಇನ್ನೂ ಚೇತರಿಸದ ಕಾರಣ ಆಯ್ಕೆ ತುಸು ಜಟಿಲವಾಗಿದೆ. ಇಲ್ಲವೇ ಹೆಚ್ಚುವರಿ ಸ್ಪಿನ್ನರ್‌ಗೆ ಅವಕಾಶ ನೀಡಬೇಕಾಗುತ್ತದೆ.

ಸ್ಥಳ: ಫೋರ್ಟ್‌ ಲಾಡರ್‌ಹಿಲ್‌
ಆರಂಭ: ರಾತ್ರಿ 8.00
ಪ್ರಸಾರ: ಡಿಡಿ ಸ್ಪೋರ್ಟ್ಸ್

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.