ಕೊಡಗಿನಲ್ಲಿ ಮಳೆಯ ಅಬ್ಬರ : ವಿವಿಧೆಡೆ ಹಾನಿ, ಇಂದು ಶಾಲೆಗಳಿಗೆ ರಜೆ
Team Udayavani, Aug 6, 2022, 7:29 AM IST
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದ್ದು, ಗ್ರಾಮೀಣ ಭಾಗ ಮತ್ತು ಬೆಟ್ಟ, ಗುಡ್ಡ ವ್ಯಾಪ್ತಿಯಲ್ಲಿ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತ ಕ್ರಮವಾಗಿ ಆ. 6ರಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಚೆಂಬು ವೃತ್ತದ ಊರುಬೈಲು, ಚೆಂಬು, ದಬ್ಬಡ್ಕ, ಮೇಲ್ ಚೆಂಬು ಮತ್ತು ಪೆರಾಜೆ ಗ್ರಾಮಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ದಬ್ಬಡ್ಕ ಭಾಗದಲ್ಲಿ ಜಲಸ್ಫೋಟದೊಂದಿಗೆ ಗುಡ್ಡ ಕುಸಿಯುತ್ತಲೇ ಇದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮನೆ ಮತ್ತು ರಸ್ತೆಗಳಿಗೆ ಹಾನಿಯಾಗಿದೆ. ಮದೆನಾಡು ಗ್ರಾ.ಪಂ. ವ್ಯಾಪ್ತಿಯ ಬೆಟ್ಟತ್ತೂರು ಭಾಗದಲ್ಲೂ ಬೃಹತ್ ಬರೆ ಕುಸಿದಿದ್ದು, ಮಣ್ಣು ತೆರವು ಸಂದರ್ಭ ಜೆಸಿಬಿ ಯಂತ್ರ ಮಗುಚಿದ ಘಟನೆಯೂ ನಡೆದಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಮಾರ್ಪಡ್ಕ ಸೇತುವೆ, ಆನೆಹಳ್ಳ ಸೇತುವೆ ಹಾಗೂ ದಬ್ಬಡ್ಕ ಸೇತುವೆಗಳು ಕೊಚ್ಚಿ ಹೋಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.
ಭೂಕುಸಿತದಿಂದ ಹಾನಿ
ಕೆದಮುಳ್ಳೂರು ಗ್ರಾ.ಪಂ. ವ್ಯಾಪ್ತಿಯ ತೋರ ಗ್ರಾಮದಲ್ಲಿ ಭೂಕುಸಿತದಿಂದ ಹಾನಿಯಾಗಿದೆ. ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, 34 ಮಂದಿ ಸ್ಥಳಾಂತರಗೊಂಡಿದ್ದಾರೆ. ಸಂತ್ರಸ್ತರಿಗೆ ಶಾಸಕ ಕೆ.ಜಿ. ಬೋಪಯ್ಯ ಪರಿಹಾರ ವಿತರಿಸಿದರು.
ತಡೆಗೋಡೆ ಕುಸಿತ
ಮಡಿಕೇರಿ ನಗರದಲ್ಲಿ ಎರಡು ಮನೆಗಳ ತಡೆಗೋಡೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ಮಣ್ಣು ಜರಿಯುತ್ತಲೇ ಇರುವುದರಿಂದ ಮನೆಗಳು ಬೀಳುವ ಹಂತದಲ್ಲಿವೆ. ತಿತಿಮತಿ ರಸ್ತೆಯಲ್ಲಿ ಬೃಹತ್ ಮರ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸೋಮವಾರಪೇಟೆ ರಸ್ತೆಯಲ್ಲೂ ಮರ ಬಿದ್ದು ವಾಹನ ಸಂಚಾರ ವ್ಯತ್ಯಯಗೊಂಡಿತ್ತು.
ಸಂಪಾಜೆಯಲ್ಲಿ ಮಳೆ ಕಡಿಮೆ
ಪ್ರವಾಹದಲ್ಲಿ ಮುಳುಗಿದ್ದ ಸಂಪಾಜೆ, ಕಲ್ಲುಗುಂಡಿ ಮತ್ತು ಕೊಯನಾಡು ಭಾಗದಲ್ಲಿ ಮಳೆಯ ರಭಸ ಕಡಿಮೆಯಾಗಿದೆ. ಕೊಯನಾಡು ಮತ್ತು ದೇವರಕೊಲ್ಲಿ ಬಳಿ ರಸ್ತೆಗೆ ಹಾನಿಯಾಗಿರುವುದರಿಂದ ಬಸ್, ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಬರೆ ಬಿದ್ದು ಹಾನಿ ಅಪಾಯದಂಚಿನಲ್ಲಿ ಮನೆ
ಚೆಟ್ಟಳ್ಳಿ : ಭಾರೀ ಮಳೆಗೆ ಬರೆ ಮತ್ತು ಮರ ಬಿದ್ದು ಮನೆಗೆ ಹಾನಿಯಾಗಿರುವ ಘಟನೆ ಚೆಟ್ಟಳ್ಳಿ ಗ್ರಾ.ಪಂ. ವ್ಯಾಪ್ತಿಯ ಪೊನ್ನತ್ ಮೊಟ್ಟೆಯಲ್ಲಿ ಸಂಭವಿಸಿದೆ.
ಅಜೀಜ್ ಅವರ ಮನೆಯ ಹಿಂಬದಿಯ ಬರೆ ಕುಸಿದ ಪರಿಣಾಮ ಬರೆಯಲ್ಲಿದ್ದ ಮರವೊಂದು ಮನೆ ಮೇಲೆ ಬಿದ್ದು ಹಾನಿಯಾಗಿದೆ. ಕಳೆದ ತಿಂಗಳು ಸುರಿದ ಮಳೆಗೆ ಮನೆಯ ಹಿಂಬದಿಯಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಈ ಕಾರಣದಿಂದ ಮನೆಯಲ್ಲಿದ್ದವರನ್ನು ಪೊನ್ನತ್ ಮೊಟ್ಟೆ ಶಾಲೆಯ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ