ಕರಾವಳಿಯಲ್ಲಿ ದಿನವಿಡೀ ಉತ್ತಮ ಮಳೆ : ಇನ್ನೆರಡು ದಿನ ಭಾರೀ ಮಳೆ ಸುರಿಯುವ ನಿರೀಕ್ಷೆ


Team Udayavani, Aug 6, 2022, 7:50 AM IST

ಕರಾವಳಿಯಲ್ಲಿ ದಿನವಿಡೀ ಉತ್ತಮ ಮಳೆ : ಇನ್ನೆರಡು ದಿನ ಭಾರೀ ಮಳೆ ಸುರಿಯುವ ನಿರೀಕ್ಷೆ

ಮಂಗಳೂರು/ಉಡುಪಿ : ಕರಾವಳಿಯಲ್ಲಿ ಮುಂಗಾರು ಬಿರುಸು ಪಡೆದಿದ್ದು, ಶುಕ್ರವಾರ ದಿನವಿಡೀ ಉತ್ತಮ ಮಳೆಯಾಗಿದೆ.

ಮಂಗಳೂರು ನಗರದಲ್ಲಿ ಶುಕ್ರವಾರ ಮುಂಜಾನೆಯಿಂದ ಜಿಟಿ ಜಿಟಿ ಮಳೆ ಆರಂಭಗೊಂಡಿದ್ದು, ಮಧ್ಯಾಹ್ನ ವೇಳೆ ತುಸು ಬಿಡುವು ನೀಡಿತ್ತು. ಸಂಜೆ ಮತ್ತು ರಾತ್ರಿ ಬಿರುಸು ಜೋರಾಗಿತ್ತು. ಶೀತಗಾಳಿಯೂ ಇತ್ತು. ಪುತ್ತೂರು, ಉಪ್ಪಿ ನಂಗಡಿ, ಕಡಬ, ಸುಬ್ರಹ್ಮಣ್ಯ, ಸುಳ್ಯ, ಜಾಲೂÕರು, ಕಲ್ಮಕಾರು, ಬೆಳ್ತಂಗಡಿ, ಧರ್ಮಸ್ಥಳ, ನಾರಾವಿ, ಮಡಂ ತ್ಯಾರು, ಬಂಟ್ವಾಳ, ಕನ್ಯಾನ, ಸುರತ್ಕಲ್‌, ಉಳ್ಳಾಲ, ಮೂಡುಬಿದಿರೆ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ.

ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ಕೆಲವು ದಿನಗಳಿಗೆ ಹೋಲಿಸಿದರೆ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿದೆ.

ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಬ್ರಹ್ಮಾವರ, ಉಡುಪಿ ನಗರ ಸುತ್ತಮುತ್ತ, ಮಲ್ಪೆ, ಮಣಿಪಾಲ, ಪೆರ್ಡೂರು, ಹಿರಿಯಡಕ, ಕಾಪು, ಪಡುಬಿದ್ರಿ, ಅಜೆಕಾರು, ಹೆಬ್ರಿ ಭಾಗದಲ್ಲಿ ನಿರಂತರ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೆರೆ ಆವರಿಸಿದೆ. ಉಡುಪಿ ನಗರದ ಮುಖ್ಯ ರಸ್ತೆಗಳಲ್ಲಿ ಮಳೆ ನೀರು ಹರಿಯುವ ಚರಂಡಿಗಳು ತುಂಬಿ ಹರಿಯುತ್ತಿದ್ದು, ರಸ್ತೆ ಮೇಲೆ ಅಗಾದ ಪ್ರಮಾಣದಲ್ಲಿ ಮಳೆ ನೀರು ನಿಂತು, ವಾಹನ ಸವಾರರು ಪರದಾಡುವಂತಾಯಿತು.

ಇದನ್ನೂ ಓದಿ : ಕುಂಬಳೆ : ಪ್ರವಾಹದಲ್ಲಿ ಕೊಚ್ಚಿ ಹೋದ ನಿವೃತ್ತ ಶಿಕ್ಷಕಿಯ ಮೃತದೇಹ ಪತ್ತೆ

ಭಾರೀ ಮಳೆ ನಿರೀಕ್ಷೆ
ಕರಾವಳಿಯಲ್ಲಿ ಮಳೆ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದ್ದು, ಆ. 5ರಂದು ಬೆಳಗ್ಗೆ 8.30ರ ವರೆಗೆ ರೆಡ್‌ ಅಲರ್ಟ್‌ ಇದ್ದು, ಬಳಿಕ ಆ. 7ರ ಬೆಳಗ್ಗೆ 8.30ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗಾಳಿ, ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ.

ಮನೆಯಂಗಳದಲ್ಲಿ ಬಿರುಕು

ಸುಬ್ರಹ್ಮಣ್ಯ: ಪ್ರಕೃತಿ ವಿಕೋಪಕ್ಕೆ ನಲುಗಿರುವ ಕೊಲ್ಲಮೊಗ್ರುವಿನಲ್ಲಿ ದಿನಕ್ಕೊಂದು ಆತಂಕಕಾರಿ ಬೆಳವಣಿಗೆ ಕಂಡುಬರುತ್ತಿದೆ. ಇದೀಗ ಗ್ರಾಮದ ಬಳ್ಳಡ್ಕ ಪದ್ಮಯ್ಯ ಗೌಡ ಅವರ ಮನೆಯ ಅಂಗಳದಲ್ಲಿ ಬಿರುಕು ಕಾಣಿಸಿಕೊಂಡಿದೆ. ಬಿರುಕು ಸುಮಾರು ದೂರದ ವರೆಗೆ ವ್ಯಾಪಿಸಿದ್ದು, ಅದಕ್ಕೆ ನೀರು ನುಗ್ಗದಂತೆ ಟಾರ್ಪಲ್‌ ಹಾಕಲಾಗಿದೆ ಎಂದು ಮನೆಯವರು ತಿಳಿಸಿದ್ದಾರೆ. ಕೊಲ್ಲಮೊಗ್ರು, ಕಲ್ಮಕಾರಿನಲ್ಲಿ ಮಳೆ ಶುಕ್ರವಾರವೂ ಮುಂದುವರಿದಿದೆ. ತೋಡು, ಹೊಳೆಗಳು ತುಂಬಿ ಹರಿಯುತ್ತಿವೆ.

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.