ಭಟ್ಕಳ : ಗುಡ್ಡ ಕುಸಿದು ನಾಲ್ಕು ಜೀವ ಬಲಿ ಪಡೆದ ಮುಟ್ಟಳ್ಳಿಯಲ್ಲಿ ಮತ್ತೆ ಗುಡ್ಡ ಕುಸಿತ
Team Udayavani, Aug 6, 2022, 10:32 AM IST
ಭಟ್ಕಳ : ತಾಲೂಕಿನಲ್ಲಿ ಆ. 2ರಂದು ಸುರಿದ ಭಾರೀ ಮಳೆಯಿಂದ ಮುಟ್ಟಳ್ಳಿಯಲ್ಲಿ ಗುಡ್ಡ ಕುಸಿತ ಉಂಟಾಗಿ ನಾಲ್ವರು ಸಾವನ್ನಪಿದ್ದ ಸುದ್ದಿ ಮರೆಯುವ ಮುನ್ನವೇ ಮತ್ತೆ ಅದೇ ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ ಜನರು ಇನ್ನಷ್ಟು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ ಆ. 2 ರಂದು ಬೆಳಗಿನ ಜಾವ ಗುಡ್ಡ ಕುಸಿದು ಕೆಳಕ್ಕೆ ಜಾರಿದ್ದು ದೊಡ್ಡ ದೊಡ್ಡ ಭಾಗವೇ ಸಡಿಲಗೊಂಡಿತ್ತು. ಕಳೆದ 2-3 ದಿನಗಳಿಂದ ಸ್ವಲ್ಪ ಸ್ವಲ್ಪವೇ ಜಾರುತ್ತಿದ್ದ ಗುಡ್ಡದ ಭಾಗ ಮತ್ತೆ ಜಾರಿ ಕೆಳಕ್ಕೆ ಬಂದಿದ್ದು ಅಕ್ಕಪಕ್ಕದ ಮನೆಯವರೂ ಕೂಡಾ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈಗಾಗಲೇ ಅಕ್ಕಪಕ್ಕದ ಆರು ಮನೆಯವರಿಗೆ ನೋಟೀಸು ನೀಡಿ ಮನೆಯನ್ನು ಖಾಲಿ ಮಾಡಲು ಸೂಚನೆ ನೀಡಲಾಗಿತ್ತಾದರೂ ಇದುವರೆಗೂ ಯಾವುದೇ ಮನೆಯವರು ಮನೆ ಖಾಲಿ ಮಾಡಿಲ್ಲ.
ಗುಡ್ಡ ಕುಸಿತದ ಮೇಲ್ಬಾಗದಲ್ಲಿ ಸಂಪರ್ಕ ರಸ್ತೆ ಇದ್ದು ಇನ್ನೂ ಸ್ವಲ್ಪ ಗುಡ್ಡದ ಭಾಗ ಕುಸಿದರೆ ಹತ್ತಿರದಲ್ಲಿಯೇ ಇರುವ ರಸ್ತೆ ಸಂಪರ್ಕವೂ ಕೂಡಾ ಕಡಿತಗೊಳ್ಳುವ ಆತಂಕ ನಿರ್ಮಾಣಗೊಂಡಿದೆ.
ಇದನ್ನೂ ಓದಿ : ಚೀಟಿಂಗ್.. ಕಾಮನ್ವೆಲ್ತ್ ಗೇಮ್ಸ್ ಹಾಕಿ ಸೆಮಿ ಫೈನಲ್ ನಲ್ಲಿ ಮೋಸದಾಟ: ಭಾರತಕ್ಕೆ ಸೋಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು