ಬಿಹಾರ: ಅಗ್ನಿಪಥ್ ವಿರುದ್ಧ ಪ್ರತಿಭಟನೆ, ಹಿಂಸಾಚಾರ-ಬಂಧಿತ ಮಾವೋವಾದಿ ಮುಖಂಡ ಹೇಳಿದ್ದೇನು?
ತೆಲಂಗಾಣ ಪೊಲೀಸ್ ಇಲಾಖೆಯ ಗುಪ್ತಚರ ವಿಭಾಗ ನೀಡಿರುವ ಮಾಹಿತಿ ಮೇರೆಗೆ ಮಾವೋವಾದಿ ಮುಖಂಡ ಸೆರೆ
Team Udayavani, Aug 6, 2022, 12:22 PM IST
ಪಾಟ್ನಾ: ದೇಶಾದ್ಯಂತ ತೀವ್ರ ವಿವಾದ ಹಾಗೂ ಪ್ರತಿಭಟನೆಗೆ ಕಾರಣವಾಗಿದ್ದ ಅಗ್ನಿಪಥ್ ಯೋಜನೆಯ ವಿರುದ್ಧದ ಪ್ರತಿಭಟನೆಯಲ್ಲಿ ಮಾವೋವಾದಿಗಳು ಶಾಮೀಲಾಗಿದ್ದರು ಎಂಬ ವಿಷಯವನ್ನು ಬಿಹಾರ ಪೊಲೀಸರು ಬಹಿರಂಗಗೊಳಿಸಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣ ಕಂಡುಬಂದಿಲ್ಲ: ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ
ಮಾವೋವಾದಿ ಉನ್ನತ ಮುಖಂಡನ ಬಂಧನದ ನಂತರ ಈ ವಿಷಯ ಬೆಳಕಿಗೆ ಬಂದಿರುವುದಾಗಿ ಬಿಹಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ ನಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಬಿಹಾರದ ಲಖಿಸರಾಯ್ ನಲ್ಲಿ ರೈಲಿಗೆ ಬೆಂಕಿ ಹಚ್ಚಿರುವ ಘಟನೆಯಲ್ಲಿ ಮಾವೋವಾದಿಗಳು ಮತ್ತು ಬೆಂಬಲಿಗರು ಪ್ರಮುಖ ಪಾತ್ರ ವಹಿಸಿರುವುದಾಗಿ ತನಿಖೆಯ ವೇಳೆ ಮಾವೋವಾದಿ ಮುಖಂಡ ಬಾಯ್ಬಿಟ್ಟಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.
ಪ್ರತಿಭಟನೆ ವೇಳೆ ರೈಲ್ವೆ ಆಸ್ತಿಗಳನ್ನು ಧ್ವಂಸಗೊಳಿಸಲು ಮತ್ತು ರೈಲಿಗೆ ಬೆಂಕಿ ಹಚ್ಚಲು ಮಾವೋವಾದಿ ಗುಂಪು ಪ್ರಚೋದನೆ ನೀಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ಪಂಕಜ್ ಕುಮಾರ್ ತಿಳಿಸಿದ್ದಾರೆ.
ಯಾರೀತ ಮಾವೋವಾದಿ ಮುಖಂಡ ಮನಶ್ಯಾಮ್:
ತೆಲಂಗಾಣ ಪೊಲೀಸ್ ಇಲಾಖೆಯ ಗುಪ್ತಚರ ವಿಭಾಗ ನೀಡಿರುವ ಮಾಹಿತಿ ಮೇರೆಗೆ ಮಾವೋವಾದಿ ಮುಖಂಡ ಮನಶ್ಯಾಮ್ ದಾಸ್ ನನ್ನು ಲಖಿಸರಾಯ್ ನಲ್ಲಿ ಬಿಹಾರ ಪೊಲೀಸರು ಬಂಧಿಸಿದ್ದರು. ಈತ ಕೆಲವು ವರ್ಷಗಳ ಹಿಂದೆ ಇಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ತನ್ನ ಕಾರ್ಯ ಚಟುವಟಿಕೆ ನಡೆಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮನಶ್ಯಾಮ್ ಬಿಹಾರ, ಜಾರ್ಖಂಡ್, ಪಶ್ಚಿಮಬಂಗಾಳ ಮತ್ತು ತೆಲಂಗಾಣದ ನಕ್ಸಲೈಟ್ ಸಂಘಟನೆಯ ಉನ್ನತ ಮುಖಂಡರ ಜೊತೆ ನೇರ ಸಂಪರ್ಕದಲ್ಲಿದ್ದು, ಈ ಮೂಲಕ ಲಖಿಸರಾಯ್ ನಗರದಲ್ಲಿದ್ದುಕೊಂಡು ಮನಶ್ಯಾಮ್ ಮಾವೋವಾದಿಗಳಿಗೆ ನೆರವು ನೀಡುತ್ತಿದ್ದ ಎಂದು ಪೊಲೀಸರು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು