ಅತಿವೃಷ್ಟಿ ಹಾನಿ ವರದಿ ನಿಖರವಾಗಿರಲಿ

ಪುನರ್‌ ಪರಿಶೀಲಿಸಿ ವಾಸ್ತವ ವರದಿ ಸಲ್ಲಿಸಿ: ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

Team Udayavani, Aug 7, 2022, 4:44 PM IST

18

ಹಾವೇರಿ: ಅತಿವೃಷ್ಟಿಯಿಂದಾದ ಹಾನಿಯ ವರದಿ ಅತ್ಯಂತ ನಿಖರವಾಗಿರಲಿ. ಜಿಲ್ಲೆಯಲ್ಲಿ ಬೆಳೆ ಹಾನಿ ವರದಿ ಉತ್ಪ್ರೇಕ್ಷೆಯಿಂದ ಕೂಡಿದ್ದು, ಪುನರ್‌ ಪರಿಶೀಲನೆ ನಡೆಸಿ ವಾಸ್ತವಾಂಶಗಳ ಆಧಾರದ ಮೇಲೆ ವರದಿ ಸಲ್ಲಿಸಬೇಕೆಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಅತಿವೃಷ್ಟಿ ಬಾಧಿತ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಡಳಿತದ ಅಧಿ ಕಾರಿಗಳೊಂದಿಗೆ ಶನಿವಾರ ಸಂಜೆ ಬೆಂಗಳೂರಿನಿಂದ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿಗಳು, ಮನೆ ಹಾನಿ, ಬೆಳೆ ಹಾನಿ, ಮೂಲ ಸೌಕರ್ಯಗಳ ಹಾನಿ, ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತಂತೆ ಮಾಹಿತಿ ಪಡೆದುಕೊಂಡರು.

ಮನೆ ಹಾನಿ ಸಂತ್ರಸ್ತರಿಗೆ ಕೂಡಲೇ ಪರಿಹಾರ ವಿತರಿಸಬೇಕು. ಹಾನಿಗೊಳಾದ ಅಂಗನವಾಡಿ, ಶಾಲೆ, ರಸ್ತೆ, ಸೇತುವೆ ಸೇರಿದಂತೆ ಮೂಲಭೂತ ಸೌಕರ್ಯಗಳ ದುರಸ್ತಿಗೆ ಕೂಡಲೇ ಕ್ರಮ ವಹಿಸಿ, ಶಾಶ್ವತ ಕಾಮಗಾರಿಗಳಿಗೆ ಅಂದಾಜು ವೆಚ್ಚದ ಪಟ್ಟಿ ತಯಾರಿಸಿ ಸರ್ಕಾರಕ್ಕೆ ಕಳುಹಿಸಿಕೊಡಬೇಕು. ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಹಾಗೂ ಕಂಬಗಳ ಹಾನಿ ಕುರಿತಂತೆ ಸರ್ವೇ ನಡೆಸಿ, ಪುನರ್‌ ಸ್ಥಾಪನೆಗೆ ತ್ವರಿತ ಕ್ರಮ ವಹಿಸಬೇಕು. ವಿದ್ಯುತ್‌ ಕಡಿತದಿಂದ ಯಾವುದೇ ಹಳ್ಳಿಗಳು ತೊಂದರೆಗೊಳಗಾಗಬಾರದು. ಹೆಸ್ಕಾಂ ಅಧಿಕಾರಿಗಳು ಈ ನಿಟ್ಟಿನಲ್ಲಿ ಆದ್ಯತೆ ಮೇಲೆ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಸೇತುವೆ, ರಸ್ತೆ, ಕಟ್ಟಡಗಳಿಗೆ ತೀವ್ರ ಹಾನಿ ಉಂಟಾದಲ್ಲಿ ಪುನರ್‌ ನಿರ್ಮಾಣಕ್ಕೆ ಅಂದಾಜು ವೆಚ್ಚದೊಂದಿಗೆ ಕ್ರಿಯಾಯೋಜನೆ ತಯಾರಿಸಿ ಸಲ್ಲಿಸಬೇಕು. ಅತಿವೃಷ್ಟಿ ಪರಿಹಾರ, ದುರಸ್ತಿಗೆ ಯಾವುದೇ ಅನುದಾನದ ಕೊರತೆ ಇರುವುದಿಲ್ಲ. ಎನ್‌ಡಿಆರ್‌ಎಫ್‌ ಮತ್ತು ಎಸ್‌ ಡಿಆರ್‌ಎಫ್‌ ಮಾರ್ಗಸೂಚಿಯಂತೆ ತ್ವರಿತವಾಗಿ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಅತಿವೃಷ್ಟಿ ಹಾನಿ ಕುರಿತಂತೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ ಜಿಲ್ಲಾ ಧಿಕಾರಿ ಸಂಜಯ ಶೆಟ್ಟೆಣ್ಣವರ, ನದಿಯ ಪ್ರವಾಹ ಅಪಾಯದ ಮಟ್ಟ ಮೀರಿಲ್ಲ. ಅಗತ್ಯಬಿದ್ದಲ್ಲಿ ಕಾಳಜಿ ಕೇಂದ್ರ ತೆರೆಯಲು ಕ್ರಮ ವಹಿಸಲಾಗಿದೆ. 1,402 ಮನೆಗಳಿಗೆ ಹಾನಿಯಾಗಿದ್ದು, ಈ ಪೈಕಿ 26 ಮನೆಗಳಿಗೆ ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿದೆ. 538 ಮನೆಗಳ ವಿವರವನ್ನು ಆರ್‌ ಜಿಎಸ್‌ ಪೋರ್ಟಲ್‌ನಲ್ಲಿ ದಾಖಲಿಸಲಾಗಿದೆ. 3.89 ಕೋಟಿ ರೂ. ಪರಿಹಾರ ನೀಡಲಾಗಿದೆ. 9,372 ಹೆಕ್ಟೇರ್‌ ಬೆಳೆ ಹಾನಿ, 724 ಹೆಕ್ಟೇರ್‌ ತೋಟಗಾರಿಕೆ ಬೆಳೆಗಳು ಹಾನಿಯಾಗಿರುವ ಕುರಿತಂತೆ ವರದಿ ನೀಡಿದ್ದಾರೆ. ಆದರೆ, ಕೃಷಿ ಇಲಾಖೆ 27 ಸಾವಿರ ಹೆಕ್ಟೇರ್‌ ಹಾನಿಯಾಗಿರುವ ಕುರಿತಂತೆ ಇಂದು ವರದಿ ನೀಡಿದೆ. ಈ ವರದಿಯನ್ನು ಪುನರ್‌ ಪರಿಶೀಲನೆ ಮಾಡಲು ಕೃಷಿ ಇಲಾಖೆಗೆ ತಿಳಿಸಿರುವುದಾಗಿ ಮಾಹಿತಿ ನೀಡಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್‌ ರೋಷನ್‌ ಮಾತನಾಡಿ, 1,361 ಕಿ.ಮೀ. ಗ್ರಾಮೀಣ ರಸ್ತೆ, 971 ಪ್ರಾಥಮಿಕ ಶಾಲೆ, 38 ಅಂಗನವಾಡಿಗಳಿಗೆ ಹಾನಿಯಾಗಿರುವ ಕುರಿತು ವರದಿ ಸಲ್ಲಿಸಲಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳು ಎನ್‌ ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ ಅನುದಾನ ಬಿಡುಗಡೆಗೊಳಿಸಿದ್ದು, ದುರಸ್ತಿ ಕಾರ್ಯ ಆರಂಭಿಸಲಾಗಿದೆ. ನದಿ ಪಾತ್ರದ ಪ್ರವಾಹದ ಬಗ್ಗೆ ನಿಗಾ ವಹಿಸಲು ಈಗಾಗಲೇ ತಂಡಗಳನ್ನು ರಚಿಸಲಾಗಿದೆ. ತಗ್ಗು ಪ್ರದೇಶದ ಜನ ವಸತಿಗಳ ಸಂಪರ್ಕದಲ್ಲಿದ್ದು, ಕಾಲಕಾಲಕ್ಕೆ ಮಾಹಿತಿ ನೀಡಲಾಗುತ್ತದೆ. ಅಗತ್ಯ ಬಿದ್ದರೆ ಸ್ಥಳಾಂತರಿಸುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.

ಕೃಷಿ ಬೆಳೆ ಹಾನಿ ಕುರಿತು ಮಾಹಿತಿ ನೀಡಿದ ಕೃಷಿ ಜಂಟಿ ನಿರ್ದೇಶಕ ಮಂಜುನಾಥ್‌, ಪ್ರಾಥಮಿಕ ಸರ್ವೇಯಲ್ಲಿ 9,372 ಹೆಕ್ಟೇರ್‌ ಹಾನಿ ನಮೂದಿಸಲಾಗಿತ್ತು. ಬೆಳೆಯಲ್ಲಿ ನೀರು ನಿಂತು ಫಸಲು ಹಳದಿ ರೂಪಕ್ಕೆ ತಿರುಗಿದ ಪರಿಣಾಮ ಹಾನಿ ಪ್ರಮಾಣ ಹೆಚ್ಚಾಗಿದೆ. 27 ಸಾವಿರ ಹೆಕ್ಟೇರ್‌ ಹಾನಿಯಾಗಿರುವ ಕುರಿತು ವರದಿ ಸಲ್ಲಿಕೆಯಾಗಿದೆ. ಮರು ಜಂಟಿ ಸಮೀಕ್ಷೆ ಕೈಗೊಂಡು ನಿಖರ ವರದಿ ಸಲ್ಲಿಸಲಾಗುವುದು ಎಂದರು.

ಕಾರ್ಮಿಕ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಅರಬೈಲ್‌ ಶಿವರಾಂ ಹೆಬ್ಟಾರ್‌ ಅವರು ಸ್ವಕ್ಷೇತ್ರದಿಂದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ, ಹಾವೇರಿ ಜಿಲ್ಲೆಯ ಬೆಳೆ ಹಾನಿ ಸೇರಿದಂತೆ ಜಿಲ್ಲೆಯ ಮಳೆ ಮತ್ತು ಹಾನಿಯ ಸ್ಥಿತಿಗತಿ ಕುರಿತು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆರಂಭದಲ್ಲಿ ವಿಡಿಯೋ ಸಂವಾದಲ್ಲಿ ಭಾಗವಹಿಸಿ, ಮುಖ್ಯಮಂತ್ರಿಗಳಿಗೆ ಉತ್ತರ ಕನ್ನಡ ಜಿಲ್ಲೆಯ ಹಾನಿಯ ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ಅಪರ ಜಿಲ್ಲಾಧಿಕಾರಿ ಡಾ|ಎನ್‌.ತಿಪ್ಪೇಸ್ವಾಮಿ, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಬೆಳೆ ಹಾನಿಯ ನಿಖರ ವರದಿ ನೀಡಿ

ಹಾವೇರಿ ಜಿಲ್ಲೆಯಲ್ಲಿ 27 ಸಾವಿರ ಹೆಕ್ಟೇರ್‌ ಬೆಳೆ ಹಾನಿಯಾಗಿರುವುದು ವಾಸ್ತವಾಂಶಗಳನ್ನು ಒಳಗೊಂಡಿಲ್ಲ ಅನಿಸುತ್ತದೆ. ಈ ಕುರಿತು ಪುನರ್‌ ಪರಿಶೀಲನೆ ನಡೆಸಬೇಕು. ಹಾನಿಯ ಪ್ಲಾಟ್‌ ಗಳಿಗೆ ಭೇಟಿ ನೀಡಿ ವಾಸ್ತವತೆಯನ್ನು ಪರಿಶೀಲಿಸಿ ಮೂರ್‍ನಾಲ್ಕು ದಿನ ತಡವಾದರೂ ನಿಖರ ವರದಿ ನೀಡಬೇಕೆಂದು ಕೃಷಿ ಇಲಾಖಾ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದರು.

ಮೂಲ ಸೌಕರ್ಯ ಕಲ್ಪಿಸಿ: ತಗ್ಗು ಪ್ರದೇಶದ ಜನರನ್ನು ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಿಸಬೇಕು. ವರದಾ, ಕುಮದ್ವತಿ ಸೇರಿದಂತೆ ನದಿಗಳ ಏರಿಳಿತದ ಬಗ್ಗೆ ಗಮನ ಹರಿಸಬೇಕು. ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾದರೆ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಗಮನ ಹರಿಸಿ, ಅತಿವೃಷ್ಟಿಯಿಂದ ತೊಂದರೆಗೊಳಗಾದ ಜನರಿಗೆ ಕಾಳಜಿ ಕೇಂದ್ರಗಳನ್ನು ತೆರೆಯಬೇಕು. ಉತ್ತಮ ಗುಣಮಟ್ಟದ ಆಹಾರದ ಜೊತೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಕಾಳಜಿ ಕೇಂದ್ರಕ್ಕೆ ಬರಲು ಒಪ್ಪದೇ ಸಂಬಂಧಿಕರ ಮನೆಗೆ ತೆರಳುವ ಸಂತ್ರಸ್ತರ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಅವರಿಗೆ ಡ್ರೈರೇಷನ್‌ ನೀಡಲು ಕ್ರಮ ವಹಿಸಬೇಕು. –ಬಸವರಾಜ ಬೊಮ್ಮಾಯಿ, ಸಿಎಂ

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.