ಆ.15ರ ವರೆಗೆ ರಜೆ ಇಲ್ಲದೆ ಅಂಚೆ ಕಚೇರಿಗಳಿಗೆ ಕೆಲಸ: ತ್ರಿವರ್ಣ ಧ್ವಜ ಹಾರಿಸಲು ಸಾಥ್
Team Udayavani, Aug 8, 2022, 7:20 AM IST
ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ಕಳೆದಿರುವ ಈ ಶುಭ ಸಂದರ್ಭದಲ್ಲಿ ಕೇಂದ್ರ ಸರ್ಕಾರವು “ಹರ್ ಘರ್ ತಿರಂಗಾ’ ಅಭಿಯಾನವನ್ನು ಹಮ್ಮಿಕೊಂಡಿದೆ. ದೇಶದ ಎಲ್ಲ ಮನೆ, ಕಟ್ಟಡಗಳ ಮೇಲೆ ತ್ರಿವರ್ಣ ಹಾರಿಸುವ ಉದ್ದೇಶ ಹೊಂದಿರುವ ಕೇಂದ್ರಕ್ಕೆ ಅಂಚೆ ಕಚೇರಿಗಳೂ ಸಾಥ್ ಕೊಟ್ಟಿದ್ದು, ತ್ರಿವರ್ಣ ಧ್ವಜಗಳನ್ನು ಮಾರಾಟ ಮಾಡಲಾರಂಭಿಸಿವೆ.
ಅದೇ ಹಿನ್ನೆಲೆ, ಆ.15ರವರೆಗೆ ಸರ್ಕಾರಿ ರಜೆ ಇದ್ದರೂ ಬಾಗಿಲು ಮುಚ್ಚದಿರಲು ಅಂಚೆ ಕಚೇರಿಗಳು ನಿರ್ಧರಿಸಿವೆ.
ಸರ್ಕಾರಿ ರಜಾ ದಿನಗಳಾಗಿರುವ ಆ.9 ಮತ್ತು ಆ.14ರಂದು ಅಂಚೆ ಕಚೇರಿಗಳ ಕನಿಷ್ಠ ಒಂದು ಕೌಂಟರ್ ಅಲ್ಲಾದರೂ ತ್ರಿವರ್ಣ ಧ್ವಜ ಮಾರಾಟ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಮೂರು ಗಾತ್ರದ ಧ್ವಜಗಳನ್ನು 25 ರೂ., 18 ರೂ. ಮತ್ತು 9 ರೂ.ಗೆ ಮಾರಾಟ ಮಾಡಲಾಗುತ್ತಿದೆ.
ಕೈದಿಗಳ ಬಿಡುಗಡೆ:
ಬಿಹಾರ, ಮಹಾರಾಷ್ಟ್ರ ಸರ್ಕಾರಗಳು ಸನ್ನಡತೆಯಿಂದ ನಡೆದುಕೊಂಡ ಕೈದಿಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿವೆ. ಕೇಂದ್ರ ಸರ್ಕಾರ ಇತ್ತೀಚೆಗೆ ಹೊರಡಿಸಿದ ಮಾರ್ಗಸೂಚಿಗೆ ಅನ್ವಯವಾಗಿ ಈ ಕ್ರಮ ನಡೆಯಲಿದೆ.
ಯೋಧರ ರ್ಯಾಲಿ:
ಹರ್ ಘರ್ ತಿರಂಗಾ ಬಗ್ಗೆ ಜಾಗೃತಿ ಮೂಡಿಸಲು ಅಸ್ಸಾಂನಲ್ಲಿ ಭಾನುವಾರ ಕೇಂದ್ರೀಯ ಮೀಸಲು ಪಡೆಯ ಯೋಧರು ಮೆರವಣಿಗೆ ನಡೆಸಿದರು. 150ಕ್ಕೂ ಅಧಿಕ ಯೋಧರು ತ್ರಿವರ್ಣ ಧ್ವಜವನ್ನು ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ