ಜಿಎಸ್‌ಟಿ ಹೊರೆ: ರೈತ ಉತ್ಪಾದಕ ಸಂಘಗಳಿಗೆ ಬರೆ

ಸ್ವಂತ ಬ್ರ್ಯಾಂಡ್‌ ಮೂಲಕ ನೇರ ಮಾರುಕಟ್ಟೆಗೆ ಲಗ್ಗೆ ಇಡುತ್ತಿರುವ ರೈತರ ಆದಾಯಕ್ಕೆ ಕತ್ತರಿ

Team Udayavani, Aug 8, 2022, 6:55 AM IST

ಜಿಎಸ್‌ಟಿ ಹೊರೆ: ರೈತ ಉತ್ಪಾದಕ ಸಂಘಗಳಿಗೆ ಬರೆ

ಬೆಂಗಳೂರು: ಕೇಂದ್ರ ವಿಧಿಸಿದ ಹೊಸ ತೆರಿಗೆ ಹೊರೆಯು ಸ್ವಂತ ಬ್ರ್ಯಾಂಡ್‌ ಮೂಲಕ ನೇರ ಮಾರುಕಟ್ಟೆಗೆ ಲಗ್ಗೆ ಇಡುತ್ತಿರುವ ಸಾವಿರಾರು ರೈತರ ಆದಾಯಕ್ಕೆ ಕತ್ತರಿ ಹಾಕುತ್ತಿದೆ.

25 ಕೆ.ಜಿ. ಒಳಗಿನ ಬೆಲ್ಲ ಸಹಿತ ಬ್ರ್ಯಾಂಡಿಂಗ್‌ ಮಾಡಿದ ಯಾವುದೇ ಆಹಾರ ಧಾನ್ಯಗಳಿಗೆ ಶೇ.5 ತೆರಿಗೆ ವಿಧಿಸಲು ಸರಕು ಸೇವಾ ತೆರಿಗೆ (ಜಿಎಸ್‌ಟಿ)ಯ ಮಂಡಳಿಯಲ್ಲಿ ತೀರ್ಮಾನ ಕೈಗೊಂಡಿದ್ದು, ಜುಲೈ 17ರಿಂದ ಜಾರಿಯಾಗಿದೆ. ಆದರೆ, ರೈತ ಉತ್ಪಾದಕ ಸಂಘ (ಎಫ್ ಪಿಒ)ಗಳು ಅಥವಾ ರೈತರ ಸಹಕಾರ ಸಂಘಗಳು ಅಥವಾ ವೈಯಕ್ತಿಕವಾಗಿ ರೈತರು ಮಧ್ಯವರ್ತಿಗಳ ಹಾವಳಿ ತಪ್ಪಿಸಿಕೊಳ್ಳಲು ನೇರ ಮಾರುಕಟ್ಟೆ ಪ್ರವೇಶಿಸುತ್ತಿದ್ದಾರೆ. ಅವರಲ್ಲಿ ಬಹುತೇಕರು ಸ್ವಂತ ಬ್ರ್ಯಾಂಡ್‌ಗಳನ್ನು ಮಾಡಿಕೊಂಡು ಗ್ರಾಹಕರನ್ನು ತಲುಪುತ್ತಿದ್ದಾರೆ. ಅವರೆಲ್ಲರೂ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ತಮ್ಮ ಉತ್ಪನ್ನಗಳನ್ನು ಬ್ರ್ಯಾಂಡಿಂಗ್‌ ಮಾಡಿ ಮಾರಾಟ ಮಾಡುತ್ತಿರುವ ಎಫ್ಪಿಒಗಳು 25ಕ್ಕೂ ಅಧಿಕ ಇವೆ. ಒಂದೊಂದು ಎಫ್ ಪಿಒನಲ್ಲಿ ಕನಿಷ್ಠ 600ರಿಂದ ಸಾವಿರದಷ್ಟು ರೈತರಿದ್ದಾರೆ. ಜೋಳ, ರಾಗಿ, ಸಜ್ಜೆ, ಕಡಲೆ ಹೀಗೆ ಹತ್ತಾರು ಪ್ರಕಾರದ ಆಹಾರಧಾನ್ಯಗಳ ಮಾರಾಟ ಮಾಡುತ್ತಿದ್ದಾರೆ

ಮೋರ್‌, ಡಿ-ಮಾರ್ಟ್‌, ಬಿಗ್‌ ಬಾಸ್ಕೆಟ್‌ ಮುಂತಾದ ಪ್ರಮುಖ ಕಂಪೆನಿಗಳೊಂದಿಗೆ ಅನೇಕ ಎಫ್ಪಿಒಗಳು ಒಪ್ಪಂದ ಮಾಡಿಕೊಂಡಿವೆ. ರಾಜ್ಯದಲ್ಲಿ ಅಧಿಕೃತವಾಗಿಯೇ ಸುಮಾರು 1,092 ಎಫ್ಪಿಒಗಳು ನೋಂದಣಿಯಾಗಿವೆ. ಈ ಪೈಕಿ ಸಿರಿಧಾನ್ಯಗಳು ಸೇರಿ ವಿವಿಧ ಪ್ರಕಾರದ ಧಾನ್ಯಗಳಿಗೆ ಸಂಬಂಧಿಸಿದ ರೈತರ ಸಂಘಗಳೇ 500ಕ್ಕೂ ಅಧಿಕ ಇವೆ ಎಂದು ಎಫ್ ಪಿಒ ನೋಡಲ್‌ ಏಜೆನ್ಸಿ ಯಾದ ಜಲಾನಯನ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸುತ್ತಾರೆ.

ಆಹಾರಧಾನ್ಯಗಳಿಗೆ ಸಂಬಂಧಿಸಿದ ಎಫ್ ಪಿಒಗಳು ಸಗಟು ರೂಪದಲ್ಲಿ ವಿವಿಧ ಕಂಪೆನಿಗಳಿಗೆ ನೇರವಾಗಿ ಮಾರಾಟ ಮಾಡುತ್ತವೆ. ಅಲ್ಲದೆ, ತಾವೇ ಪ್ಯಾಕ್‌ ಮಾಡಿ ದೊಡ್ಡ ಮಾಲ್‌ಗ‌ಳು, ಮಳಿಗೆಗಳಿಗೆ ಪೂರೈಸುವುದರ ಜತೆಗೆ ಹಲವು ಕಂಪೆನಿಗಳು ರಫ್ತು ಕೂಡ ಮಾಡುತ್ತವೆ. ಅಮೃತ ಯೋಜನೆ ಅಡಿ ಯಲ್ಲೇ ರಾಜ್ಯದಲ್ಲಿ 75 ಎಫ್ ಪಿಒಗಳು ವಾರ್ಷಿಕ 1 ಕೋಟಿ ರೂ. ವಹಿವಾಟು ಮಾಡುತ್ತವೆ’ ಎಂದು ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಡಾ| ಎಂ.ವಿ. ವೆಂಕಟೇಶ್‌ ತಿಳಿಸುತ್ತಾರೆ.

ಲಾಭಾಂಶ ಖೋತಾ
ನಮ್ಮ ಎಫ್ ಪಿಒದಲ್ಲಿ 3 ಸಾವಿರಕ್ಕೂ ಅಧಿಕ ರೈತರು ಸದಸ್ಯರಿದ್ದಾರೆ. ಅವರಿಂದ ಖರೀದಿಸಿದ ಉತ್ಪನ್ನಗಳನ್ನು ಪ್ಯಾಕ್‌ ಮಾಡಿ ರಾಜ್ಯದ ವಿವಿಧೆಡೆ ಸರಬರಾಜು ಮಾಡಲಾಗುತ್ತದೆ. ವಾರ್ಷಿಕ 50 ಲಕ್ಷ ರೂ. ವಹಿವಾಟು ಆಗುತ್ತದೆ. ಬಂದ ಲಾಭಾಂಶದಲ್ಲಿ ಎಲ್ಲರಿಗೂ ಸಮಾನ ಹಂಚಿಕೆ ಆಗುತ್ತಿದೆ. ಈಗ ಪ್ರತಿ ಪ್ಯಾಕೆಟ್‌ ಮೇಲೆ ಶೇ.5ರಷ್ಟು ತೆರಿಗೆ ವಿಧಿಸಿದ್ದರಿಂದ ತುಸು ಸಗಟು ರೂಪದ ಪ್ಯಾಕೆಟ್‌ಗಳಿಗೂ ಹೊರೆ ಬೀಳುತ್ತಿದೆ. ಇದರಿಂದ ಲಾಭ ಕಡಿಮೆ ಆಗುತ್ತಿದೆ. ಈಗ 25 ಕೆ.ಜಿ. ಪ್ಯಾಕೆಟ್‌ ಅನ್ನು 26 ಕೆ.ಜಿ.ಗೆ ಹೆಚ್ಚಿಸಿ ನೀಡುತ್ತಿದ್ದೇವೆ’ ಎಂದು ದಾವಣಗೆರೆ- ಚಿತ್ರದುರ್ಗ ಜಿಲ್ಲೆಗಳ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಟಿ. ಕೃಪ ತಿಳಿಸುತ್ತಾರೆ.

ಸರಕಾರ ಒಂದೆಡೆ ಎಫ್ ಪಿಒಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಹಾಗೂ ನೇರ ಮಾರುಕಟ್ಟೆಗೆ ಹಲವು ಯೋಜನೆಗಳನ್ನೂ ಪರಿಚಯಿಸುತ್ತಿರುವುದಾಗಿ ಹೇಳುತ್ತದೆ. ಮತ್ತೂಂದೆಡೆ ತೆರಿಗೆ ಮೂಲಕ ಅದೇ ಎಫ್ ಪಿಒಗಳ ಮೇಲೆ ಬರೆ ಎಳೆಯುತ್ತಿರುವುದು ಸರಿಯಲ್ಲ ಎಂದು ಅವರು ಹೇಳುತ್ತಾರೆ.

– ವಿಜಯಕುಮಾರ ಚಂದರಗಿ

 

ಟಾಪ್ ನ್ಯೂಸ್

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.