ರಾಜಸ್ಥಾನ: ಮೈನಿಂಗ್ ಮಾಫಿಯಾ-ಬಿಜೆಪಿ ಸಂಸದೆ ಮೇಲೆ ದಾಳಿಗೆ ಯತ್ನ; ದೂರು ದಾಖಲು
ಸುಮಾರು 150ಕ್ಕೂ ಅಧಿಕ ಲಾರಿಗಳು ಗಣಿಗಾರಿಕೆಯಲ್ಲಿ ತೊಡಗಿದ್ದು, ನಾನು ಲಾರಿಗಳನ್ನು ನಿಲ್ಲಿಸಲು ಪ್ರಯತ್ನಿಸಿದ್ದೆ.
Team Udayavani, Aug 8, 2022, 11:57 AM IST
ನವದೆಹಲಿ: ರಾಜ್ಯದ ಮೈನಿಂಗ್ ಮಾಫಿಯಾ ತನ್ನ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿ, ಕೊಲ್ಲಲು ಯತ್ನಿಸಿರುವ ಘಟನೆ ನಡೆದಿರುವುದಾಗಿ ರಾಜಸ್ಥಾನದ ಭಾರತ್ ಪುರ್ ಬಿಜೆಪಿ ಸಂಸದೆ ರಂಜಿತಾ ಕೋಲಿ ಸೋಮವಾರ (ಆಗಸ್ಟ್ 08) ಆರೋಪಿಸಿದ್ದಾರೆ.
ಇದನ್ನೂ ಓದಿ:ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ
ಪೊಲೀಸರ ವಿರುದ್ಧ ಆಕ್ರೋಶ:
ಸುಮಾರು 150ಕ್ಕೂ ಅಧಿಕ ಲಾರಿಗಳು ಗಣಿಗಾರಿಕೆಯಲ್ಲಿ ತೊಡಗಿದ್ದು, ನಾನು ಲಾರಿಗಳನ್ನು ನಿಲ್ಲಿಸಲು ಪ್ರಯತ್ನಿಸಿದ್ದೆ. ಆದರೆ ಒಂದೆರಡು ಲಾರಿ ನಿಲ್ಲಿಸಿದ್ದು, ಉಳಿದ ಲಾರಿಗಳು ನಿಲ್ಲಿಸದೇ ಹೋಗಿದ್ದು, ಈ ಸಂದರ್ಭದಲ್ಲಿ ನನ್ನನ್ನು ಕೊಲ್ಲಲು ಯತ್ನಿಸಿರುವುದಾಗಿ ಸಂಸದೆ ರಂಜಿತಾ ಆರೋಪಿಸಿದ್ದಾರೆ. ಅಲ್ಲದೇ ಪೊಲೀಸರು ಶೀಘ್ರವಾಗಿ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ದೂರಿ ಸಂಸದೆ ಸ್ಥಳದಲ್ಲೇ ಧರಣಿ ನಡೆಸಿರುವ ಘಟನೆ ನಡೆದಿತ್ತು.
ಘಟನೆ ಬಗ್ಗೆ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಅಲೋಕ್ ರಂಜನ್ ಸಂಸದೆ ಬಳಿ ಬಂದು ದೂರು ನೀಡುವಂತೆ ಮನವಿ ಮಾಡಿಕೊಂಡಿದ್ದರು. ಸಮೀಪದ ಪೊಲೀಸ್ ಚೌಕಿಯಲ್ಲಿ ಸಮರ್ಪಕ ಪ್ರತಿಕ್ರಿಯೆ ದೊರೆಯದಿದ್ದ ಪರಿಣಾಮ ಸಂಸದೆ ಅಸಮಧಾನಗೊಂಡಿರುವುದಾಗಿ ಅಲೋಕ್ ತಿಳಿಸಿದ್ದು, ಇದೀಗ ದೂರು ದಾಖಲಿಸಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ವಿವರಿಸಿದ್ದಾರೆ.
ರಾಜಸ್ಥಾನದಲ್ಲಿ ಗಣಿ ಮಾಫಿಯಾದಿಂದಾಗಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಾಗಿ ಕೇಂದ್ರ ಸಚಿವ ಅರ್ಜುನ್ ಮೇಘವಾಲ್ ಆರೋಪಿಸಿದ್ದು, ನಮ್ಮ ಹಾಲಿ ಸಂಸದೆ ಮೇಲೆ ದಾಳಿ ನಡೆಸಲು ಯತ್ನಿಸಿರುವುದು ಗಂಭೀರವಾದ ವಿಷಯವಾಗಿದೆ ಎಂದು ಅರ್ಜುನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ