ಮೇಕೆದಾಟು ಅನುಷ್ಠಾನಕ್ಕೆ ಸರ್ಕಾರ ಬದ್ಧ
Team Udayavani, Aug 8, 2022, 3:32 PM IST
ಹನೂರು: ಬೆಂಗಳೂರು ಭಾಗದ ಕುಡಿಯುವ ನೀರಿನ ಸಮಸ್ಯೆ ಮತ್ತು ವಿದ್ಯುತ್ ಸಮಸ್ಯೆಯನ್ನು ನಿವಾರಿಸಲು ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದರು.
ತಾಲೂಕಿನ ಮೇಕೆದಾಟು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ್ದ ಅರಣ್ಯ ಸಚಿವರು ಮಲೆ ಮಹದೇಶ್ವರ ವನ್ಯಜೀವಿ ವಲಯ ಮತ್ತು ಮೇಕೆದಾಟು ಪ್ರದೇಶವನ್ನು ವೀಕ್ಷಿಸಿದ ಬಳಿಕ ಮಾತನಾಡಿ, ಮೇಕೆದಾಟು ಯೋಜನೆ ಯಿಂದ ತ.ನಾಡಿಗೆ ಯಾವುದೇ ಸಮಸ್ಯೆಯಿಲ್ಲ. ಏನೇ ಆದರೂ ಅವರಿಗೆ ನಿಗದಿಯಾಗಿರುವಂತಹ ನೀರನ್ನು ನೀಡಲಾಗುತ್ತದೆ. ಆದರೂ ತಮಿಳುನಾಡು ಸರ್ಕಾರ ಏಕೆ ತಗಾದೆ ತೆಗೆದಿದೆಯೋ ಗೊತ್ತಿಲ್ಲ. ಬೆಂಗಳೂರು ಮತ್ತು ಸುತ್ತಮುತ್ತಲ ಭಾಗಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮತ್ತು ವಿದ್ಯುತ್ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಎಷ್ಟೇ ಅಡೆತಡೆಗಳು ಬಂದರೂ ಎಲ್ಲವನ್ನು ದಾಟಿಯೋ ಜನೆ ಅನುಷ್ಠಾನಗಳಿಸಲಾಗುವುದು ಎಂದು ತಿಳಿಸಿದರು.
ಹುಲಿ ಸಂರಕ್ಷಿತಾರಣ್ಯ ಪ್ರದೇಶ ಘೋಷಣೆ: ಮಹ ದೇಶ್ವರ ವನ್ಯಜೀವಿ ವಲಯವನ್ನು ಹುಲಿ ಸಂರಕ್ಷಿತಾರಣ್ಯ ಪ್ರದೇಶ ಎಂದು ಘೋಷಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಮತ್ತ ರಾಜ್ಯ ಸರ್ಕಾರಗಳು ಚಿಂತನೆ ನಡೆಸುತ್ತಿದ್ದು ಘೋ ಷಣೆ ಮಾಡಲು ತೀರ್ಮಾನ ಗಳಾಗುತ್ತಿವೆ ಎಂದು ಸ್ಪಷ್ಟಪ ಡಿಸಿದರು.
ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಘೋಷಣೆ ಮಾಡುವುದಿಲ್ಲ ಎನ್ನುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಸಚಿವ ಸೋಮಣ್ಣ ಅವರು ಓರ್ವ ಸಚಿವರು, ನಾನೂ ಕೂಡ ಓರ್ವ ಸಚಿವ. ಈ ಭಾಗದ ಜನರ ಸಂಕಷ್ಟವನ್ನು ಅರಿತು ಆ ರೀತಿ ಹೇಳಿರಬಹುದು. ಈ ಬಗ್ಗೆ ಸಿಎಂ ಈ ಭಾಗದ ಸ್ಥಳೀಯ ಜನಪ್ರತಿ ನಿಧಿಗಳು ಮತ್ತು ಸಾರ್ವಜನಿಕರ ಜೊತೆ ಸಾಧಕ- ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಅರಣ್ಯ ಇಲಾಖೆಯ ಸಿಸಿಎಫ್ ಉಪೇಂದ್ರ ಪ್ರತಾಪ್, ಡಿಎಫ್ಒಗಳಾದ ಏಡುಕುಂಡಲು, ನಂದೀಶ್, ಎಸಿಎಫ್ ಭಾಗ್ಯಲಕ್ಷ್ಮೀ, ಎಸಿಎಫ್ ಅಂಕರಾಜು, ಆರ್ಎಫ್ಒಗಳಾದ ಶಶಿಕುಮಾರ್, ಸೈಯದ್ ನದಾಫ್ ಮುಖಂಡರಾಧ ಪ್ರೀತನ್ನಾಗಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
Kodaikanal – Ooty ಪ್ರವಾಸಕ್ಕೆ ಇ-ಪಾಸ್ ಕಡ್ಡಾಯ: ಹೈಕೋರ್ಟ್
Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
Fazal ur Rehman; ಭಾರತ ಸೂಪರ್ಪವರ್, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್