ಪ್ರವೀಣ್ ಹತ್ಯೆ: ಪ್ರಮುಖ ಮೂವರು ಆರೋಪಿಗಳಿಗಾಗಿ ಕಾರ್ಯಾಚರಣೆ; ಎಡಿಜಿಪಿ ಅಲೋಕ್ ಕುಮಾರ್
ಪ್ರತ್ಯಕ್ಷ-ಪರೋಕ್ಷವಾಗಿ ಸಹಕರಿಸಿದವರ ಮೇಲೂ ಕಾನೂನು ಕ್ರಮ
Team Udayavani, Aug 10, 2022, 2:38 PM IST
ಮಂಗಳೂರು: ಬಿಜೆಪಿ ಯುವಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 7 ಜನರನ್ನು ಬಂಧಿಸಲಾಗಿದೆ. ಇನ್ನುಳಿದ ಮೂವರು ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಲು ಬೇರೆ ಬೇರೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಬುಧವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಾರಿಯಾದ ಮೂವರು ಆರೋಪಿಗಳ ಫೋಟೋ , ಮನೆ ವಿಳಾಸ, ಮನೆಯವರ ಬಗ್ಗೆ ತಿಳಿದಿದೆ. ಆದರೆ ಆರೋಪಿಗಳನ್ನು ಕೆಲವರು ಸೇರಿ ಬಚ್ಚಿಟ್ಟಿದ್ದಾರೆ. ಅವರನ್ನು ಯಾವ ರೀತಿ ಪತ್ತೆ ಹಚ್ಚಬೇಕು ಎಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ ಎಂದರು.
ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನೆ ನೀಡಿದವರು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದವರ ಮೇಲೂ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾರೆಲ್ಲಾ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅವರೆಲ್ಲರ ಮೇಲೆ ಕರ್ನಾಟಕ ಪೊಲೀಸ್ ಹಾಗೂ ಎನ್ಐಎ ಮೂಲಕ ಕ್ರಮ ಜರುಗಿಸುತ್ತೇವೆ. ಪರಾರಿಯಾದ ಆರೋಪಿಗಳನ್ನು ಪತ್ತೆಹಚ್ಚಲು ಕೋರ್ಟ್ ಮುಖಾಂತರ ವಾರೆಂಟ್ ಪಡೆದು ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ದಾಖಲೆಗಳ ಆಧಾರದ ಮೇಲೆ ಸಾಕ್ಷಿ ಸಂಗ್ರಹಿಸಿ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳುತ್ತೇವೆ. ಪಿಎಫ್ಐ ಜತೆ ಶಂಕಿತ ನಂಟು ಕಂಡು ಬಂದಿದೆ. ತನಿಖೆ ನಂತರ ಯಾರಿಗೆಲ್ಲಾ ಪಿಎಫ್ಐ ಜತೆ ನಂಟು ಇದೆ ಎನ್ನುವುದನ್ನು ಹೇಳಬಹುದು. ಬಾಯಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ ಎಂದರು.
ಇದನ್ನೂ ಓದಿ:ರಾಜ್ಯದಲ್ಲಿ ಮತ್ತೊಂದು ಅಕ್ರಮ ಬಯಲಿಗೆ: ಪರೀಕ್ಷೆ ವೇಳೆ ಸ್ಮಾರ್ಟ್ ವಾಚ್ ಬಳಸಿದ್ದವ ಸೆರೆ
ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸೆಕ್ಷನ್ 144 ಜಾರಿ ಮಾಡಲಾಗಿದೆ. ಅದರ ಕುರಿತಾಗಿಯೂ ಸಭೆ ನಡೆಸಲಿದ್ದೇವೆ. ಮುಂದೆಯೂ ಕಾನೂನು ಸುವ್ಯವಸ್ಥೆ ಉತ್ತಮ ರೀತಿಯಲ್ಲಿ ಇರಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ