ಬೆಳೆನಷ್ಟ; ಪರಿಹಾರಕ್ಕೆ ಭಂಕಲಗಿ ಆಗ್ರಹ
Team Udayavani, Aug 10, 2022, 6:38 PM IST
ಚಿತ್ತಾಪುರ: ತಾಲೂಕಿನ ಕರದಾಳ ರಸ್ತೆಯಲ್ಲಿ ನಿರ್ಮಾಣವಾದ ಶ್ರೀ ಸಿಮೆಂಟ್ ಸೂಲಹಳ್ಳಿ ರೈಲ್ವೆ ಪ್ಲಾಂಟ್ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಹೊಲಗಳಿಗೆ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಹೀಗಾಗಿ ಕೂಡಲೇ ರೈತರಿಗೆ ಬೆಳೆ ಪರಿಹಾರ ನೀಡಬೇಕೆಂದು ಪುರಸಭೆ ವಿಪಕ್ಷ ನಾಯಕ ನಾಗರಾಜ ಭಂಕಲಗಿ ಆಗ್ರಹಿಸಿದರು.
ಕರದಾಳ ರಸ್ತೆಯಲ್ಲಿ ಕಾಮಗಾರಿ ನಡೆಯುವ ಸ್ಥಳಕ್ಕೆ ರೈತರೊಂದಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ಸಿಮೆಂಟ್ ಕಂಪನಿಯವರು ತಮ್ಮ ಅನುಕೂಲಕ್ಕೆ ತಕ್ಕಂತೆ ಸಿಸಿ ರಸ್ತೆ ನಿರ್ಮಿಸಿದ್ದಾರೆ. ಇಲ್ಲಿ ರೈತರ ಹಿತವನ್ನು ಸಂಪೂರ್ಣ ಕಡೆಗಣಿಸಿದ್ದಾರೆ. ಹೀಗಾಗಿ ಮೊದಲು ಬೆಳೆ ನಷ್ಟ ಪರಿಹಾರ ನೀಡಬೇಕು. ನಂತರವೇ ಸಿಸಿ ರಸ್ತೆ, ಚರಂಡಿ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿ ಮುಂದುವರಿಸಬೇಕೆಂದು ಒತ್ತಾಯಿಸಿದರು.
ರೈಲ್ವೆ ಪ್ಲಾಂಟ್ ನಡೆಯುವ ಸ್ಥಳದಲ್ಲಿದ್ದ ಮೂರು ಹಣದಿಗಳು(ಬಂಡಿ ದಾರಿ) ಈಗ ಅವೈಜ್ಞಾನಿಕ ರಸ್ತೆ ಮತ್ತು ರೈಲ್ವೆ ಪ್ಲಾಂಟ್ ನಿರ್ಮಾಣದಿಂದ ಬಂದ್ ಆಗಿದೆ. ಇದರಿಂದ ಹೊಲಗಳಿಗೆ ಅರ್ಧ ಕಿ.ಮೀ ಇದ್ದ ಅಂತರ 12 ಕಿ.ಮೀ. ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕಪಡಿಸಿದರು.
ಕಂದಾಯ ಅಧಿಕಾರಿಗಳು ಸಮಗ್ರ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ, ಸರಕಾರದ ಪರಿಹಾರ ಜತೆಗೆ ಸಿಮೆಂಟ್ ಕಂಪನಿ ವತಿಯಿಂದಲೂ ಪರಿಹಾರ ಕೊಡಿಸಬೇಕೆಂದು ಒತ್ತಾಯಿಸಿದರು.
ಒಂದು ವಾರದಲ್ಲಿ ಕಂಪನಿ ಅಧಿ ಕಾರಿಗಳು ಲಿಖೀತ ರೂಪದಲ್ಲಿ ಉತ್ತರ ನೀಡಬೇಕು. ಇಲ್ಲದಿದ್ದರೆ ರೈತರನ್ನು ಸಂಘಟಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಂದಾಯ ಅಧಿಕಾರಿಗಳಾದ ಮೈನೋದ್ದಿನ್, ಮದುಸೂಧನ ಘಾಳೆ, ಕೃಷಿ ಅಧಿಕಾರಿ ಬಸವರಾಜ ಬಂಗರಗಿ, ಪುರಸಭೆ ಸದಸ್ಯರಾದ ರಮೇಶ ಬೊಮ್ಮನಳ್ಳಿ, ಪ್ರಭು ಗಂಗಾಣಿ, ಶ್ರೀನಿವಾಸರೆಡ್ಡಿ ಪಾಲಪ್, ರೈತ ಮುಖಂಡರಾದ ರಾಜೇಶ ತುರೆ, ಸುವನರೆಡ್ಡಿ, ಸಿದ್ಧಣ್ಣ ಹೊತಿನಮಡಿ, ನಾಗರಾಜ ರೇಷ್ಮಿ, ಅನಿಲ ವಡ್ಡಡಗಿ, ಮಂಜುನಾಥಗೌಡ ಪಾಟೀಲ, ಮಲ್ಲಿಕಾರ್ಜುನ ಪೂಜಾರಿ, ಮೋಹನ ಮುಸ್ತಾಜಾರ್, ಬಸಣ್ಣ ತಳವಾರ, ಭೀಮರಾಯ ಹೊತಿನಮಡಿ, ಸತ್ತಾರಸೇಟ್ ಗೋಲಾ, ನರಸಪ್ಪ ಭೋವಿ, ಶರಣರೆಡ್ಡಿ ಪಾಲಪ್, ಮಲ್ಲಿಕಾರ್ಜುನ ಗಡೆಸೂರ, ವಿಕ್ರಮರೆಡ್ಡಿ ಗಡೆಸೂರ, ವಿಶ್ವರೆಡ್ಡಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ