ಬ್ಲ್ಯಾಕ್ ಮ್ಯಾಜಿಕ್ ನಿಂದ ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ
Team Udayavani, Aug 10, 2022, 7:41 PM IST
ಪಾಣಿಪತ್: ಬೆಲೆ ಏರಿಕೆ ವಿರೋಧಿಸಿ ಆಗಸ್ಟ್ 5 ರಂದು ಕಪ್ಪು ಬಟ್ಟೆ ಧರಿಸಿರುವ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವಾಗ್ದಾಳಿ ನಡೆಸಿದ್ದು, “ಬ್ಲ್ಯಾಕ್ ಮ್ಯಾಜಿಕ್” ಅನ್ನು ನಂಬುವವರು ಮತ್ತೆ ಎಂದಿಗೂ ಜನರ ವಿಶ್ವಾಸವನ್ನು ಗಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
900 ಕೋಟಿ ಮೌಲ್ಯದ ಎಥೆನಾಲ್ ಸ್ಥಾವರವನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ, ಕೆಲವು ವಿರೋಧ ಪಕ್ಷಗಳು ಕ್ಷುಲ್ಲಕ ರಾಜಕೀಯದಲ್ಲಿ ತೊಡಗಿವೆ ಎಂದು ವಾಗ್ದಾಳಿ ನಡೆಸಿ, ಇಂತಹ ವಿಷಯಗಳು ಹೊಸ ತಂತ್ರಜ್ಞಾನದ ಹೂಡಿಕೆಗೆ ಅಡ್ಡಿಯಾಗುವುದರಿಂದ ರಾಷ್ಟ್ರಕ್ಕೆ ಅಪಚಾರ ಮಾಡುತ್ತವೆ ಎಂದರು.
“ಆಗಸ್ಟ್ 5 ರಂದು, ಕೆಲವರು ‘ಬ್ಲಾಕ್ ಮ್ಯಾಜಿಕ್’ ಅನ್ನು ಹೇಗೆ ಹರಡಲು ಪ್ರಯತ್ನಿಸಿದರು ಎಂಬುದನ್ನು ನಾವು ನೋಡಿದ್ದೇವೆ. ಈ ಜನರು ಕಪ್ಪು ಬಟ್ಟೆಗಳನ್ನು ಧರಿಸುವುದರಿಂದ ತಮ್ಮ ಹತಾಶೆಯನ್ನು ಕೊನೆಗೊಳಿಸಬಹುದು ಎಂದು ಭಾವಿಸುತ್ತಾರೆ. ಆದರೆ ವಾಮಾಚಾರ, ಮಾಟಮಂತ್ರ, ಮೂಢನಂಬಿಕೆಗಳಲ್ಲಿ ತೊಡಗುವುದರಿಂದ ಮತ್ತೆ ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ ಎಂಬುದು ಅವರಿಗೆ ಗೊತ್ತಿಲ್ಲ ಎಂದರು.
ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಆಗಸ್ಟ್ 5 ರಂದು ಸಂಸತ್ತಿನಲ್ಲಿ ಮತ್ತು ಹೊರಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ