ಶಿರಸಿ ಪ್ರಾದೇಶಿಕ ಉಪ ವಿಜ್ಞಾನ ಕೇಂದ್ರ ನಾಡಿಗೇ ಮಾದರಿಯಾಗಬೇಕು: ಸ್ಪೀಕರ್ ಕಾಗೇರಿ
Team Udayavani, Aug 10, 2022, 9:23 PM IST
ಶಿರಸಿ: ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ ಜಿಲ್ಲೆಯಲ್ಲೆ ಮೊದಲ ಬಾರಿಗೆ ತೆರೆದುಕೊಳ್ಳಲಿರುವ ಪ್ರಾದೇಶಿಕ ಉಪ ವಿಜ್ಞಾನ ಕೇಂದ್ರದವನ್ನು ನಾಡಿಗೇ ಮಾದರಿಯಾಗಿ ಸ್ಥಾಪನೆ ಮಾಡುವ ಕುರಿತು ಇಲಾಖೆಯ ಸಚಿವರು, ಉನ್ನತ ಅಧಿಕಾರಿಗಳ ಜೊತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದರು.
ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಅಶ್ವತ್ಥ ನಾರಾಯಣ ಹಾಗೂ ಇತರ ಅಧಿಕಾರಿಗಳ ಜೊತೆ ಕಾಗೇರಿ ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಈಗಾಗಲೇ ಇರುವ ವಿಜ್ಞಾನ ಕೇಂದ್ರದ ಮಾದರಿಯ ಜೊತೆ ಇನ್ನೂ ಹೈಟೆಕ್ ಆಗಿ ನಡೆಸುವ ಬಗ್ಗೆ ಚರ್ಚೆ ನಡೆಸಿದರು. ಕೇಂದ್ರಕ್ಕೆ ಬರಲಿರುವ ತಾಂತ್ರಿಕ ಉಪಕರಣಗಳನ್ನು ಇನ್ನಷ್ಟು ಆಧುನಿಕಗೊಳಿಸುವ ಕುರಿತೂ ಗಮನಿಸುವಂತೆ ಸ್ಪೀಕರ್ ಸೂಚಿಸಿದರು.
ಉದ್ದೇಶಿತ ವಿಜ್ಞಾನ ಕೇಂದ್ರಕ್ಕೆ ಈಗಾಗಲೇ ಬಜೆಟ್ ಅನುಮೋದನೆ ನೀಡಿದ್ದು, ೭ ಕೋ.ರೂ. ಮೊತ್ತದಲ್ಲಿ ಇದು ನಿರ್ಮಾಣ ಆಗಬೇಕಿದೆ. ತಾಲೂಕಿನ ಇಸಳೂರಿನಲ್ಲಿ ಸ್ಥಳ ಕೂಡ ಅಂತಿಮಗೊಳಿಸಲಾಗಿದೆ. ಸ್ಪೀಕರ್ ಕಾಗೇರಿ ಅವರು ನಡೆಸಿದ ಮಹತ್ವದ ಸಭೆ ಈ ಕೇಂದ್ರದ ಆರಂಭಕ್ಕೂ ಮೊದಲು ವಿಜ್ಞಾನ ವಿದ್ಯಾರ್ಥಿಗಳಲ್ಲಿ ಹೊಸ ನಿರೀಕ್ಷೆ ನಿರ್ಮಾಣ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!