ಟಿ20 ರ್‍ಯಾಂಕಿಂಗ್‌: ದ್ವಿತೀಯ ಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್‌


Team Udayavani, Aug 10, 2022, 11:19 PM IST

ಟಿ20 ರ್‍ಯಾಂಕಿಂಗ್‌: ದ್ವಿತೀಯ ಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್‌

ದುಬಾೖ: ನೂತನ ಐಸಿಸಿ ಟಿ20 ಬ್ಯಾಟಿಂಗ್‌ನಲ್ಲಿ ಪಾಕಿಸ್ಥಾನದ ಬಾಬರ್‌ ಆಜಂ ಮತ್ತು ಭಾರತದ ಸೂರ್ಯಕುಮಾರ್‌ ಯಾದವ್‌ ಮೊದಲೆರಡು ಸ್ಥಾನಗಳನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪಾಕ್‌ ನಾಯಕ ಬಾಬರ್‌ ಆಜಂ 818 ಅಂಕ ಹೊಂದಿದ್ದಾರೆ. ಅವರು ಎಪ್ರಿಲ್‌ನಲ್ಲಿ ಕೊನೆಯ ಟಿ20 ಪಂದ್ಯ ಆಡಿದ್ದರು. ಇತ್ತೀಚೆಗೆ ವೆಸ್ಟ್‌ ಇಂಡೀಸ್‌ ಎದುರಿನ 5 ಪಂದ್ಯಗಳ ಸರಣಿಯಲ್ಲಿ 11 ಅಂಕ ಕಳೆದುಕೊಂಡ ಹೊರತಾಗಿಯೂ ಸೂರ್ಯಕುಮಾರ್‌ ಯಾದವ್‌ ದ್ವಿತೀಯ ಸ್ಥಾನವನ್ನು ಉಳಿಸಿ  ಕೊಂಡರು. ಅವರು 805 ಅಂಕ ಹೊಂದಿದ್ದಾರೆ. ಅಂತಿಮ ಟಿ20 ಪಂದ್ಯದಲ್ಲಿ ವಿಶ್ರಾಂತಿ ನೀಡಿದ್ದರಿಂದ ಸೂರ್ಯಕುಮಾರ್‌ ಮುನ್ನಡೆಗೆ ಅಡ್ಡಿ ಯಾಯಿತು.

ಬಾಬರ್‌ ಆಜಂ ಮತ್ತು ಸೂರ್ಯಕುಮಾರ್‌ ಯಾದವ್‌ ಮುಂಬರುವ ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾ ವಳಿಯಲ್ಲಿ ಪರಸ್ಪರ ಮುಖಾ ಮುಖೀ ಆಗಲಿದ್ದು, ಆಗ ರ್‍ಯಾಂಕಿಂಗ್‌ ರೇಸ್‌ ಹೆಚ್ಚು ಕುತೂಹಲಕರ ವಾಗಿರಲಿದೆ. ಭಾರತ-ಪಾಕಿಸ್ಥಾನ ಆ. 28ರಂದು ಎದುರಾಗಲಿವೆ.

ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ ಭಾರತದ ಇಬ್ಬರು ಆಟಗಾರರೆಂದರೆ ಶ್ರೇಯಸ್‌ ಅಯ್ಯರ್‌ ಮತ್ತು ರಿಷಭ್‌ ಪಂತ್‌. ಅಂತಿಮ ಪಂದ್ಯದಲ್ಲಿ ಅರ್ಧ ಶತಕ ಬಾರಿಸಿದ ಶ್ರೇಯಸ್‌ ಅಯ್ಯರ್‌ 6 ಸ್ಥಾನಗಳ ಪ್ರಗತಿ ಸಾಧಿಸಿ 19ನೇ ಸ್ಥಾನ ತಲುಪಿದ್ದಾರೆ. ಹಾಗೆಯೇ ಸರಣಿಯಲ್ಲಿ 115 ರನ್‌ ಹೊಡೆದ ಪಂತ್‌ 7 ಸ್ಥಾನ ಮೇಲೇರಿದ್ದಾರೆ. ಅವರಿಗೀಗ 59ನೇ ಸ್ಥಾನ.

ಬೌಲಿಂಗ್‌ ವಿಭಾಗದಲ್ಲಿ ಭುವನೇಶ್ವರ್‌ ಒಂದು ಸ್ಥಾನ ಕೆಳಕ್ಕೆ ಜಾರಿದ್ದು, 9ಕ್ಕೆ ಬಂದು ನಿಂತಿದ್ದಾರೆ. 8 ವಿಕೆಟ್‌ ಉಡಾಯಿಸಿದ ರವಿ ಬಿಷ್ಣೋಯಿ ಅವರದು 50 ಸ್ಥಾನಗಳ ಭರ್ಜರಿ ನೆಗೆತ.

ಟಾಪ್‌-10 ಟಿ20 ಬ್ಯಾಟರ್
1. ಬಾಬರ್‌ ಆಜಂ (ಪಾ) 818
2. ಸೂರ್ಯಕುಮಮಾರ್‌ (ಭಾ) 805
3. ಮೊಹಮ್ಮದ್‌ ರಿಜ್ವಾನ್‌ (ಪಾ) 794
4. ಐಡನ್‌ ಮಾರ್ಕ್‌ರಮ್‌ (ದ.ಆ.) 792
5. ಡೇವಿಡ್‌ ಮಲಾನ್‌ (ಇಂ) 731
6. ಆರನ್‌ ಫಿಂಚ್‌ (ಆ) 716
7. ಪಥುಮ್‌ ನಿಸ್ಸಂಕ (ಶ್ರೀ) 661
8. ಡೇವನ್‌ ಕಾನ್ವೆ (ನ್ಯೂ) 655
9. ನಿಕೋಲಸ್‌ ಪೂರಣ್‌ (ವೆ) 644
10. ಮಾರ್ಟಿನ್‌ ಗಪ್ಟಿಲ್‌ (ನ್ಯೂ) 638

 

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.