ಮಮತಾ ನಿಮ್ಮನ್ನೂ ನಡುನೀರಲ್ಲೇ ಕೈಬಿಡುತ್ತಾರೆ: ಟಿಎಂಸಿ ಶಾಸಕರಿಗೆ ಬಿಜೆಪಿ ಎಚ್ಚರಿಕೆ
ಇದು ಇತರ ಸಚಿವರು, ಶಾಸಕರು, ಟಿಎಂಸಿ ಕಾರ್ಯಕರ್ತರಿಗೂ ಅನ್ವಯವಾಗಲಿದೆ
Team Udayavani, Aug 12, 2022, 10:28 AM IST
ಕೋಲ್ಕತಾ: ಒಂದು ವೇಳೆ ನೀವೂ ಕೂಡಾ ಯಾವುದೇ ರೀತಿಯಲ್ಲೂ ಸಿಕ್ಕಿಹಾಕಿಕೊಂಡರು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುನೀರಿನಲ್ಲೇ ಕೈಬಿಡುತ್ತಾರೆ…ಇದು ತೃಣಮೂಲ ಕಾಂಗ್ರೆಸ್ ಶಾಸಕರು ಮತ್ತು ಕಚೇರಿ ಸಿಬ್ಬಂದಿಗಳಿಗೆ ಭಾರತೀಯ ಜನತಾ ಪಕ್ಷ ನೀಡಿರುವ ಎಚ್ಚರಿಕೆಯಾಗಿದೆ!
ಇದನ್ನೂ ಓದಿ:ಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಮತ್ತೊಬ್ಬ ವಲಸೆ ಕಾರ್ಮಿಕ ಸಾವು
ಭ್ರಷ್ಟಾಚಾರ ಹಾಗೂ ಇತರ ಪ್ರಕರಣಗಳಲ್ಲಿ ಈಗಾಗಲೇ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಟಿಎಂಸಿ ಮುಖಂಡರಾದ ಪಾರ್ಥ ಚಟರ್ಜಿ ಹಾಗೂ ಅನುಬ್ರತಾ ಮೊಂಡಲ್ ಅವರನ್ನು ಬಂಧಿಸಿದ ನಂತರ ಪಶ್ಚಿಮಬಂಗಾಳದ ಬಿಜೆಪಿ ಮಾಧ್ಯಮ ಸೆಲ್ ನ ಅಮಿತ್ ಮಾಳ್ವಿಯಾ ಈ ಎಚ್ಚರಿಕೆಯನ್ನು ನೀಡಿದ್ದಾರೆ.
ಬಂಧಿತ ಪಾರ್ಥ ಮತ್ತು ಅನುಬ್ರತಾ ಮೊಂಡಲ್ ಅವರಿಗೆ ತುರ್ತು ಅಗತ್ಯವಿರುವ ಸಂದರ್ಭದಲ್ಲಿಯೂ ಮೊಬೈಲ್ ಕರೆಯನ್ನೂ ಕೂಡಾ ಮಮತಾ ಬ್ಯಾನರ್ಜಿ ಸ್ವೀಕರಿಸುತ್ತಿಲ್ಲ. ತಮಗೆ ತೊಂದರೆಯಾಗುತ್ತಿದೆ ಅಂತ ತಿಳಿದಾಗ ಮಮತಾ ಇದೇ ರೀತಿ ಕೈಬಿಡುತ್ತಾರೆ. ಇದು ಇತರ ಸಚಿವರು, ಶಾಸಕರು, ಟಿಎಂಸಿ ಕಾರ್ಯಕರ್ತರಿಗೂ ಅನ್ವಯವಾಗಲಿದೆ ಎಂದು ಮಾಳ್ವಿಯಾ ಆರೋಪಿಸಿದ್ದಾರೆ.
ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅನುಬ್ರತಾ ಮೊಂಡಲ್ ನಂತಹ ಹಲವಾರು ಕ್ರಿಮಿನಲ್ ಗಳನ್ನು ಪೋಷಿಸಿರುವುದಾಗಿ ಮಾಳ್ವಿಯಾ ದೂರಿದ್ದಾರೆ. ಮಮತಾ ಬ್ಯಾನರ್ಜಿ ತನ್ನ ಕಣ್ಗಾವಲಿನಲ್ಲಿ ಅಪರಾಧ ಮತ್ತು ಸುಲಿಗೆ ಮಾಡುವ ಗುಂಪಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!