ವ್ಯಾಪಕ ವಿರೋಧ: ವಕ್ಫ್ ಸಲಹಾ ಸಮಿತಿಗೆ ಜಮಾಲ್ ಆಜಾದ್ ನೇಮಕ ಆದೇಶಕ್ಕೆ ಸರಕಾರ ತಡೆ
ಪರೇಶ್ ಮೇಸ್ತ ಕೊಲೆ ಆರೋಪ ಹೊತ್ತಿದ್ದ ಅಣ್ಣಿಗೇರಿ
Team Udayavani, Aug 12, 2022, 5:13 PM IST
ಹೊನ್ನಾವರ : ಉತ್ತರಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ ಜಮಾಲ್ ಆಜಾದ್ ಸಯ್ಯದ್ ಅಣ್ಣಿಗೇರಿ ನೇಮಕ ಆದೇಶಕ್ಕೆ ಸರಕಾರ ತಡೆ ಹಿಡಿದಿದೆ.
ಪರೇಶ್ ಮೇಸ್ತಾ ಕೊಲೆ ಆರೋಪ ಹೊತ್ತಿದ್ದ ಅಣ್ಣಿಗೇರಿ ವಿರುದ್ಧ ಭಾರಿ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಆದೇಶವನ್ನು ಸರಕಾರ ತತ್ ಕ್ಷಣ ತಡೆ ಹಿಡಿದಿದೆ.
ಬಿಜೆಪಿ ಕಾರ್ಯಕರ್ತರು ಸೇರಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಆಜಾದ್ ನೇಮಕಕ್ಕೆ ವ್ಯಾಪಕ ವಿರೋಧ ವ್ಯಕ್ತ ಪಡಿಸಿದ್ದರು.
ಸಿದ್ದರಾಮಯ್ಯ ಆಕ್ರೋಶ
ಪರೇಶ್ ಮೇಸ್ತ ಕೊಲೆಯ ಆರೋಪಿಯನ್ನು ವಕ್ಫ್ ಬೋರ್ಡ್ ಉಪಾಧ್ಯಕ್ಷನನ್ನಾಗಿ ಮಾಡ ಹೊರಟಿರುವುದು ಅಕ್ಷಮ್ಯ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚುನಾವಣೆಗಳು ಹತ್ತಿರ ಬಂದಾಗಲೆಲ್ಲ ಇದ್ದಕ್ಕಿದ್ದಂತೆ ಅಮಾಯಕರ ಕೊಲೆಗಳು ನಡೆಯುತ್ತವೆ. ಬಿಜೆಪಿ ಸರ್ಕಾರಗಳು ಬಿಕ್ಕಟ್ಟಿಗೆ ಸಿಲುಕಿಕೊಂಡಾಗಲೆಲ್ಲ ಅಹಿತಕರ ಘಟನೆಗಳು ನಡೆಯುತ್ತವೆ. ಸಂಘ ಪರಿವಾರದ ಮಾಜಿ ಮುಖಂಡರಾಗಿದ್ದ ಮಹೇಂದ್ರಕುಮಾರ್ ಅವರು ಬಿಜೆಪಿಯ ಕುರಿತು,ಸಂಘ ಪರಿವಾರದ ಕುರಿತು ಹಲವಾರು ಭಯಾನಕ ಸಂಗತಿಗಳನ್ನು ಸಮಾಜದ ಮುಂದೆ ಇಟ್ಟಿದ್ದರು. ನಾಡಿನ ಜನರು ಈ ಕುರಿತು ಗಂಭೀರವಾಗಿ ಚಿಂತಿಸಬೇಕಾಗಿದೆ. ಇತ್ತೀಚೆಗೆ ಕೊಲೆಗಳ ಹಿಂದಿನ ರಹಸ್ಯಗಳು ಒಂದೊಂದಾಗಿ ಹೊರಗೆ ಬರುತ್ತಿವೆ. ಹೊನ್ನಾವರದಲ್ಲಿ 2017ರಲ್ಲಿ ನಡೆದಿದ್ದ ಪರೇಶ್ ಮೇಸ್ತ ಕೊಲೆಯ ಪ್ರಮುಖ ಮತ್ತು ಮೊದಲ ಆರೋಪಿ ಆಜಾದ್ ಅಣ್ಣಿಗೇರಿಯನ್ನು ರಾಜ್ಯ ಸರ್ಕಾರ ವಕ್ಫ್ ಬೋರ್ಡ್ ಉಪಾಧ್ಯಕ್ಷನನ್ನಾಗಿ ನೇಮಕ ಮಾಡಿರುವುದು ಗಂಭೀರವಾದ ಅನುಮಾನಗಳನ್ನು ಸೃಷ್ಟಿಸಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ