ಜೀವ ಉಳಿಸಲು ಬೇಕಾಗಿದೆ ಅಂಗಾಂಗ !


Team Udayavani, Aug 13, 2022, 10:00 AM IST

ಜೀವ ಉಳಿಸಲು ಬೇಕಾಗಿದೆ ಅಂಗಾಂಗ !

ಮಂಗಳೂರು : ಮರಣ ಹೊಂದಿದ ಬಳಿಕವೂ ಜೀವನ ಸಾರ್ಥಕತೆ ಪಡೆಯುವ ನಿಟ್ಟಿನಲ್ಲಿ ನಡೆಸುವ ಅಂಗಾಂಗ ದಾನ ಪ್ರಕ್ರಿಯೆಗೆ ಕರಾವಳಿ ಭಾಗದಲ್ಲಿ ಮತ್ತಷ್ಟು ಜಾಗೃತಿ ಮೂಡಬೇಕಿದೆ.

ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ 2015 ರಿಂದ 2022ರ ಅಂತ್ಯದವರೆಗೆ ಒಟ್ಟು 33 ಮಂದಿ ಅಂಗಾಂಗ ದಾನ ಮಾಡಿದ್ದಾರೆ. ಈ ವರ್ಷ ಜನವರಿ ತಿಂಗಳಿನಿಂದ ಈವರೆಗೆ ಒಟ್ಟು 6 ಮಂದಿ ಅಂಗಾಂಗ ದಾನ ನಡೆಸಿದ್ದಾರೆ. ಉಭಯ ಜಿಲ್ಲೆಗಳ ಆಸ್ಪತ್ರೆಗಳ ಪೈಕಿ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿರುವ ಕೆಎಂಸಿ, ಫಾದರ್‌ ಮುಲ್ಲರ್‌, ದೇರಳಕಟ್ಟೆ ಮತ್ತು ಕೊಡಿಯಾಲ್‌ಬೈಲ್‌ನಲ್ಲಿರುವ ಯೆನಪೋಯ, ಯುನಿಟಿ, ಎ.ಜೆ., ಕೆ.ಎಸ್‌. ಹೆಗ್ಡೆ, ಇಂಡಿಯಾನ ಮತ್ತು ಕೆಎಂಸಿ ಮೆಡಿಕಲ್‌ ಕಾಲೇಜ್‌ ಮಣಿಪಾಲ ಅಂಗಾಂಗ ದಾನ ಕಸಿ ನಡೆಸಲು ನೋಂದಣಿ ಮಾಡಿಕೊಂಡಿದೆ.

ಉಭಯ ಜಿಲ್ಲೆಗಳಲ್ಲಿ ಸದ್ಯ 13 ಮಂದಿ ಲಿವರ್‌ ಮತ್ತು 518 ಮಂದಿ ಕಿಡ್ನಿ ಅಂಗಾಂಗದ ನಿರೀಕ್ಷೆಯಲ್ಲಿದ್ದಾರೆ. ರಾಜ್ಯದಲ್ಲಿ ಸದ್ಯ 11,695 ಮಂದಿ ಅಂಗಾಂಗ ದಾನ ಮಾಡುವ ಪ್ರತಿಜ್ಞೆ ಸ್ವೀಕರಿಸಿದ್ದಾರೆ. ಉಭಯ ಜಿಲ್ಲೆಗಳಲ್ಲಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಹೆಚ್ಚಿನ ರೋಗಿಗಳಿದ್ದು, ದಾನ ಮಾಡಿದವರಲ್ಲಿ ಹೆಚ್ಚಿನ ಸಂಖ್ಯೆಯ ಕಿಡ್ನಿಯ ಕಸಿ ಚಿಕಿತ್ಸೆ ಇಲ್ಲೇ ನಡೆಯುತ್ತದೆ.
ಅಂಗಾಂಗ ದಾನದ ಬಗ್ಗೆ ಕರಾವಳಿ ಜಿಲ್ಲೆಗಳಲ್ಲಿ ಈ ಹಿಂದೆ ಅಷ್ಟೊಂದು ಜಾಗೃತಿ ಇರಲಿಲ್ಲ. ಆದರೆ ಇದೀಗ ಈ ಎಲ್ಲ ಚಟುವಟಿಕೆಗಳ ನಿರ್ವಹಣೆಗೆ ವೆನಾÉಕ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಜೀವಸಾರ್ಥಕತೆ ಸೊಸೈಟಿಯನ್ನು (ಎಸ್‌ಒಟಿಟಿಒ) ಆರಂಭಿಸಲಾಗಿದೆ. ಇಬ್ಬರು ಜಿಲ್ಲಾ ಸಂಯೋಜಕರು ಕಾರ್ಯನಿರ್ವಹಿಸುತ್ತಾರೆ. ಮಾನವ ಅಂಗಾಂಗಗಳ ಕಸಿ ಕಾಯ್ದೆಯ ಸಮರ್ಪಕ ಅನುಷ್ಠಾನದ ನಿಟ್ಟಿನಲ್ಲಿ ಇದು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಅಂಗಾಂಗ ದಾನದ ಮೂಲಕ ಒಬ್ಬ ವ್ಯಕ್ತಿಯು ಸುಮಾರು 8 ರಿಂದ 10 ಮಂದಿಯ ಜೀವ ಉಳಿಸಲು ಸಾಧ್ಯವಿದೆ.

ಪ್ರತೀ ವರ್ಷ ಆ.13ಕ್ಕೆ ವಿಶ್ವ ಅಂಗಾಂಗ ದಾನ ದಿನಾಚರಣೆ ಆಚರಿಸಲಾಗುತ್ತಿದೆ. ಅಂಗಾಂಗ ದಾನದ ಬಗ್ಗೆ ಹೆಚ್ಚಿನ ಮಂದಿಗೆ ಜಾಗೃತಿಯ ಕೊರತೆ ಇದೆ. ಅಂಗಾಂಗ ದಾನ ಮಾಡಲು ಯಾರೂ ಕೂಡ ನೋಂದಣಿ ಮಾಡಿಕೊಳ್ಳಬಹುದು. ಮೃತಪಟ್ಟು ಮೆದುಳು ನಿಷ್ಕ್ರಿàಯ ವಾದ ಬಳಿಕ ಸೀಮಿತ ಗಂಟೆಗಳ ಒಳಗೆ ಅಂಗಾಂಗ ದಾನ ಪ್ರಕ್ರಿಯೆ ನಡೆಯುತ್ತದೆ. ಇದೊಂದು ಶ್ರೇಷ್ಠ ಪ್ರಕ್ರಿಯೆಯಾಗಿದ್ದು, ಆರೋಗ್ಯವಂತ ಅಂಗಗಳನ್ನು ತೆಗೆದು ಅಗತ್ಯವಿದ್ದವರಿಗೆ ನೀಡಲಾಗುತ್ತದೆ.
– ಡಾ| ಕಿಶೋರ್‌ ಕುಮಾರ್‌, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.