ಕಾಂಗ್ರೆಸ್ ಸರ್ಕಾರದ ಕಾನೂನು ವ್ಯವಸ್ಥೆ ಒಮ್ಮೆ ನೆನಪಿಸಿಕೊಳ್ಳಲಿ: ‘ಕೈ’ಗೆ ಆರಗ ತಿರುಗೇಟು


Team Udayavani, Aug 13, 2022, 12:53 PM IST

ಕಾಂಗ್ರೆಸ್ ಸರ್ಕಾರದ ಕಾನೂನು ವ್ಯವಸ್ಥೆ ಒಮ್ಮೆ ನೆನಪಿಸಿಕೊಳ್ಳಲಿ: ‘ಕೈ’ಗೆ ಆರಗ ತಿರುಗೇಟು

ರಾಯಚೂರು: ಸಿದ್ಧರಾಮಯ್ಯನವರ ಕಾಲದಲ್ಲಿ ಕಾಲದಲ್ಲಿ‌ 34 ಕೊಲೆಗಳಾಯ್ತು. ಉದ್ದೇಶಿತ, ಧಾರ್ಮಿಕ, ಮತೀಯ ಕೊಲೆಗಳಾದವು. ಹೀಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ‌ ಸರ್ಕಾರ ಎರಡನ್ನೂ ನೀವು ಹೋಲಿಕೆ ಮಾಡಿ ನೋಡಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.

ಮಂತ್ರಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ಅವರು ಟಿಪ್ಪು ಜಯಂತಿಯನ್ನು ಉದ್ದೇಶಪೂರ್ವಕವಾಗಿ ಮಾಡಿಸಿ ರಾಜ್ಯದಲ್ಲಿ ರಕ್ತ ಹರಿಸಿದರು.  ಎರಡು ಜನ ಗೃಹ ಸಚಿವರುಗಳು‌ ಡಮ್ಮಿಯಾಗಿದ್ದರು. ಕೆಂಪಯ್ಯನವರ ಕೈಗೆ ಜುಟ್ಟು ಜನಿವಾರ ಕೊಟ್ಟಿದ್ದರು. ಪೊಲೀಸರು ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ರಸ್ತೆಗೆ‌ ಇಳಿಯುವ ಹಾಗಾಯಿತು. ರೌಡಿಯನ್ನು ಹಿಡಿಯುವಂತ ಒಬ್ಬ ಡಿವೈಎಸ್ಪಿ ಕೊಲೆಯಾಯ್ತು. ಇವೆಲ್ಲ ಅವರ ಆಡಳಿತಾವಧಿಯಲ್ಲಿ ಆಗಿದ್ದು ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಡಾ. ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಹೇಗಾಯ್ತೆಂದು ಗೊತ್ತಿದೆ. ಆ ವೇಳೆ‌ ಫೈರಿಂಗ್ ಆಗಿ ಎಂಟು ಜನರ ಸಾವಾಯಿತು. ಅವರ‌ ಮಗ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾವು ಎಷ್ಟು ಶಾಂತಿಯುತವಾಗಿ ಮಾಡಿದೆವು ಎಂಬುದನ್ನು ತಿಳಿಯಲಿ. ನಾನು, ಮುಖ್ಯಮಂತ್ರಿ, ‌ಹಾಗೂ‌‌ ಕೆಲ‌ ಕ್ಯಾಬಿನೆಟ್ ಸಚಿವರು ಪಾರ್ಥಿವ ಶರೀರ ಪಕ್ಕದಲ್ಲೇ ಕೂತಿದ್ದೆವು. 25 ಲಕ್ಷ ಜನ ಬಂದರೂ ಎಲ್ಲವನ್ನು ನಿಭಾಯಿಸಲಾಯಿತು. ಹುಬ್ಬಳಿ ಗಲಭೆಯನ್ನು, ಕೇವಲ ಮೂರು ಗಂಟೆಯಲ್ಲಿ ನಮ್ಮ ಪೋಲೀಸರು ತಹಬದಿಗೆ ತಂದಿದ್ದಾರೆ.  ಇಲ್ಲಾಂದ್ರೆ ಹುಬ್ಬಳ್ಳಿ ಹತ್ತಿ ಉರಿಯುತ್ತಿತ್ತು. ಶಿವಮೊಗ್ಗ ಕೊಲೆ ಆರೋಪಿಗಳನ್ನು 48  ಗಂಟೆಯಲ್ಲೇ ಹಿಡಿದೆವು. ಮೈಸೂರು ರೇಪ್‌ ಕೇಸ್ ಇರಬಹುದು, ಚಂದ್ರು‌ ಬೆಂಗಳೂರು ಕೊಲೆ ಕೇಸ್‌‌ ಇರಬಹುದು, ಕೇವಲ ಕೆಲವೇ ಗಂಟೆನಲ್ಲಿ ನಮ್ಮ ಪೊಲೀಸರು ಬೇಧಿಸಿದ್ದಾರೆ. ಇವೆಲ್ಲವೂ ಗೃಹ ಇಲಾಖೆಯನ್ನು ನಾವು ನಿಭಾಯಿಸಿರುವ ರೀತಿ‌ಯಾಗಿದೆ ಎಂದು ಟಾಂಗ್ ಕೊಟ್ಟರು.

ನಮ್ಮ ಪೊಲೀಸರು ರಾತ್ರಿ ಹಗಲು ಕಣ್ಣಲ್ಲಿ ಕಣ್ಣಿಟ್ಟು ಚೆನ್ನಾಗಿ ಕಾರ್ಯ ನಿರ್ವಹಿಸಿದಾರೆ. ನನಗೆ ಹೆಮ್ಮೆಯಿದೆ. ಮೊನ್ನೆ‌ ಮಂಗಳೂರಿನಲ್ಲಿ ನಡೆದ‌ ಕೊಲೆ‌ ಪ್ರಕರಣದ ಆರೋಪಿಗಳನ್ನು ಬಿಡಲಿಲ್ಲ. ಕೊಂಚ ವಿಳಂಬ ಮಾಡಿದರೂ ಕೆಲ ಮತಾಂಧ ಶಕ್ತಿಗಳು, ಆರೋಪಿಗಳು ತಪ್ಪಿಸಿಕೊಳ್ಳುವಂತೆ ಮಾಡುತ್ತಿದ್ದರು ಎಂದರು.

ಇದನ್ನೂ ಓದಿ:ಜಮ್ಮು-ಕಾಶ್ಮೀರ ಸರ್ಕಾರದಿಂದ ಹಿಜ್ಬುಲ್ ಮುಖ್ಯಸ್ಥ ಸೈಯದ್ ಪುತ್ರ ಸೇರಿದಂತೆ 4 ಉದ್ಯೋಗಿಗಳ ವಜಾ

ಹರ್ ಘರ್ ತಿರಂಗಾ ಕಾರ್ಯಕ್ರಮವು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿರುವ ಹಿರಿಯರ ನೆನಪು ಮಾಡಿಕೊಳ್ಳುವಂತದ್ದು. ಆದರೆ, ಎಲ್ಲದರ ಬಗ್ಗೆ ನಿಕೃಷ್ಟವಾಗಿ ಮಾತನಾಡುವುದು ಸಿದ್ದರಾಮಯ್ಯನವರ  ಚಾಳಿ. ಕಾಂಗ್ರೆಸ್ ನವರು ಧರ್ಮದ ಆಧಾರದ ಮೇಲೆ ದೇಶ ಒಡೆದಿದ್ದಾರೆ. ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ನವರಿಗೆ ನಾಡಿನ ಪ್ರಜ್ಞೆ, ರಾಷ್ಟ್ರೀಯ ಪ್ರಜ್ಞೆಯಿಲ್ಲ. ಆರ್ ಎಸ್ ಎಸ್ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಿಂದ ಪಾಠ ಕಲಿಯುವಂಥದ್ದೇನೂ ಇಲ್ಲ. ನಮಗೆಲ್ಲ ಆರ್ ಎಸ್ ಎಸ್ ಶಾಖೆಯಲ್ಲೇ ಸಂಸ್ಕಾರ ತುಂಬಿ ದೇಶ ಸೇವೆಗೆ ಬಿಟ್ಟಿದ್ದಾರೆ ಎಂದರು.

ಸರ್ಕಾರದಲ್ಲಿ ಉದ್ಯೋಗ ಮಾಡಬೇಕಾದರೆ ಮಂಚ ಏರಬೇಕು ಎನ್ನುವ ಪ್ರಿಯಾಂಕ ಖರ್ಗೆ ಈಗ ಪ್ರಚಾರ ಖರ್ಗೆಯಾಗಿದ್ದಾರೆ. ಪ್ರಚಾರಕ್ಕೆ ಏನೇನೊ ಮಾತನಾಡುತ್ತಾರೆ. ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಪಿಎಸ್ ಐ ಹಗರಣದಲ್ಲಿ ತಮಗೆ ಏನೋ ಗೊತ್ತಿದೆ ಎಂದು ಹೇಳಿ ದಾಖಲಾತಿ ಕೇಳಿದರೆ ಓಡಿ ಹೋದರು ಎಂದು ಲೇವಡಿ ಮಾಡಿದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.