567 ಕಾಲುಸಂಕಗಳಿಗೆ ಬೇಕಿದೆ ಶೀಘ್ರ ಕಾಯಕಲ್ಪ; 5 ಸಾವಿರ ಮಕ್ಕಳು ನಿತ್ಯ ಜೀವಭಯದಲ್ಲಿ ಸಂಚಾರ

ಸುಮಾರು 8 ಸಾವಿರಕ್ಕೂ ಅಧಿಕ ಕುಟುಂಬ

Team Udayavani, Aug 14, 2022, 7:05 AM IST

567 ಕಾಲುಸಂಕಗಳಿಗೆ ಬೇಕಿದೆ ಶೀಘ್ರ ಕಾಯಕಲ್ಪ; 5 ಸಾವಿರ ಮಕ್ಕಳು ನಿತ್ಯ ಜೀವಭಯದಲ್ಲಿ ಸಂಚಾರ

ಉಡುಪಿ: ಸುಮಾರು 8 ಸಾವಿರಕ್ಕೂ ಅಧಿಕ ಕುಟುಂಬ, ಐದು ಸಾವಿರಕ್ಕೂ ಅಧಿಕ ಮಕ್ಕಳು ನಿತ್ಯವೂ ದುಃಸ್ಥಿತಿಯಲ್ಲಿರುವ ಕಾಲು ಸಂಕಗಳ ಮೂಲಕ ಜೀವ ಭಯದಲ್ಲಿ ಓಡಾಡುವ ಪರಿಸ್ಥಿತಿ ಉಡುಪಿ ಜಿಲ್ಲೆಯಲ್ಲಿದೆ.
ಮಳೆಗಾಲದಲ್ಲಿ ಕಾಲು ಸಂಕಗಳು ಅಪಾಯಕಾರಿ. ಅದರಲ್ಲೂ ಮರದ ದಿಮ್ಮಿಗಳಿಂದ ಮಾಡಿದ ಕಾಲುಸಂಕ ದಲ್ಲಿ ಸಂಚಾರ ಇನ್ನಷ್ಟು ಕಷ್ಟ. ಜಿಲ್ಲೆಯ 567 ಕಡೆ ಕಾಲುಸಂಕಗಳನ್ನು ತುರ್ತಾಗಿ ಸರಿಪಡಿಸಬೇಕಿದೆ.

ಕೆಲವು ಹೆಚ್ಚು ಅಪಾಯಕಾರಿಯಾಗಿವೆ. ಇನ್ನು ಕೆಲವೆಡೆ ಸೂಕ್ತ ತಳಪಾಯ ಇಲ್ಲದೇ ಅಪಾಯವನ್ನು ಆಹ್ವಾನಿಸುತ್ತಿವೆ. ಜಿಲ್ಲೆಯ 155 ಗ್ರಾ.ಪಂ.ಗಳಲ್ಲಿ 103 ಗ್ರಾ.ಪಂ.ಗಳಿಗೆ ಸುಸ ಜ್ಜಿತ ಕಾಲುಸಂಕ ತುರ್ತಾಗಿ ಆಗಬೇಕಿದೆ. ಉಳಿದೆಡೆ ಪರಿಸ್ಥಿತಿ ಸಮಾಧಾನಕರ. ಉಡುಪಿ ತಾಲೂಕಿನ 638 ಕುಟುಂಬಗಳ ಸದ ಸ್ಯರು ಮತ್ತು 292 ಮಕ್ಕಳು, ಕಾಪು ತಾಲೂಕಿನ 700 ಕುಟುಂಬದ ಸದಸ್ಯರು, 383 ಮಕ್ಕಳು, ಕಾರ್ಕಳ ತಾಲೂಕಿನ 2,998 ಮಂದಿ, 2,015 ಮಕ್ಕಳು, ಕುಂದಾಪುರ ತಾಲೂಕಿನ 1,392 ಮಂದಿ, 847 ಮಕ್ಕಳು, ಬ್ರಹ್ಮಾವರ ತಾಲೂಕಿನ 462 ಮಂದಿ, 329 ಮಕ್ಕಳು, ಬೈಂದೂರು ತಾಲೂಕಿನ 1,648 ಮಂದಿ, 983 ಮಕ್ಕಳು, ಹೆಬ್ರಿ ತಾಲೂಕಿನ 382 ಮಂದಿ, 259 ಮಕ್ಕಳು ಸೇರಿ ದಂತೆ ಒಟ್ಟು 8,220 ಕುಟುಂಬದ ಸದ ಸ್ಯರು ಮತ್ತು 5,108 ಮಕ್ಕಳು ನಿತ್ಯವೂ ಭಯದಲ್ಲಿ ಅಪಾಯಕಾರಿ ಕಾಲು ಸಂಕ ವನ್ನು ಆಶ್ರಯಿಸಿದ್ದಾರೆ.

ನರೇಗಾದಡಿ ಕಾಮಗಾರಿ
ಕಾಲುಸಂಕ ಅಭಿವೃದ್ಧಿ ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಹೀಗೆ ವಿವಿಧ ಇಲಾಖೆಯ ಅಧೀನದಲ್ಲಿ ಬರುವ ಜತೆಗೆ ಖಾಸಗಿ ಜಮೀನಿನಲ್ಲಿ ಇರುವುದರಿಂದ ಅಭಿವೃದ್ಧಿಗೆ ಸಾಕಷ್ಟು ತೊಡಕಿದೆ. ಇದನ್ನೆಲ್ಲವನ್ನು ನಿವಾರಿಸಿಕೊಂಡು ನರೇಗಾ ಅಡಿ ಯಲ್ಲಿ ಸುಮಾರು 4.50 ಲಕ್ಷದ ವರೆಗೂ ವೆಚ್ಚ ಮಾಡಿ, ಸುಸಜ್ಜಿತ ಕಾಲುಸಂಕ ನಿರ್ಮಿಸಲು ಅವಕಾಶ ಇದೆ. ಅದನ್ನು ಸಮರ್ಪಕವಾಗಿ ಬಳಸಿ ಪಿಡಿಒಗಳ ಮೂಲಕ ಮಾಹಿತಿ ಪಡೆದು ಕೂಡಲೇ ಕಾಮಗಾರಿ ಆರಂಭಿಸಲಿದ್ದೇವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಹೇಗಿರಲಿದೆ ಕಾಲುಸಂಕ ?
ಕನಿಷ್ಠ 3 ಅಡಿ ಅಗಲ ಹಾಗೂ 30 ಮೀ. ಉದ್ದದವರೆಗೂ ಕಾಲುಸಂಕ ನಿರ್ಮಿಸಿ ಎರಡೂ ಬದಿಗಳಲ್ಲಿ ತಡೆ ಮತ್ತು ಹಿಡಿಯಲು ಬೇಕಾದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಆದರೆ ನರೇಗಾದಡಿ ಪರಿಕರಗಳಿಗೆ ಅನುದಾನ ಬೇಗ ಬರುವುದಿಲ್ಲ ಎಂಬ ಆರೋಪವೂ ಇದೆ.

ಜಿಲ್ಲೆಯ ಎಲ್ಲ ಗ್ರಾ.ಪಂ.ಗಳಲ್ಲೂ ಸಮೀಕ್ಷೆ ನಡೆಸಿ ಮಾಹಿತಿ ಪಡೆಯ ಲಾಗಿದೆ. ನರೇಗಾದಡಿ
ಶೀಘ್ರವೇ ಕಾಲುಸಂಕಗಳ ಕಾಮಗಾರಿ ಆರಂಭ ವಾಗಲಿದೆ. ಸ್ಥಳೀಯರು ಬಳಸುತ್ತಿರುವ ಖಾಸಗಿ ಜಮೀನಿನಲ್ಲಿರುವ ಕಾಲುಸಂಕ ಗಳನ್ನು ಆಯಾ ಜಮೀನು ಮಾಲಕರ ಮನವೊಲಿಸಿ ಸುಸ್ಥಿತಿಗೆ ತರಲಾಗುವುದು.
– ಪ್ರಸನ್ನ ಎಚ್‌., ಸಿಇಒ, ಜಿ.ಪಂ. ಉಡುಪಿ

- ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.