ಕಾಂಗ್ರೆಸ್‌ ನಾಯಕರಿಗೆ ಸಿಎಂ ಬೊಮ್ಮಾಯಿ ತಿರುಗೇಟು

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸರ್ಕಾರಿ ಜಾಹೀರಾತಿನಲ್ಲಿ ನೆಹರೂ ಇದ್ದಾರೆ

Team Udayavani, Aug 15, 2022, 6:45 AM IST

CMಕಾಂಗ್ರೆಸ್‌ ನಾಯಕರಿಗೆ ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಸರ್ಕಾರದ ಜಾಹೀರಾತಿನಲ್ಲಿ ನೆಹರೂ ಅವರನ್ನು ಕೈಬಿಟ್ಟಿರುವುದಕ್ಕೆ ತಗಾದೆ ತೆಗೆದಿರುವ ಕಾಂಗ್ರೆಸ್‌ಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಾಹೀರಾತಿನಲ್ಲಿ ನೆಹರೂ ಇದ್ದಾರೆ. ಆದರೆ ಕಾಂಗ್ರೆಸ್‌ಗೆ ಯಾಕಿಷ್ಟು ಗಾಬರಿ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಆಯೋಜಿಸಲಾಗಿದ್ದ ದೇಶ ವಿಭಜನೆಯ ದುರಂತ ಘಟನೆಗಳು ಎಂಬ ಪತ್ರಿಕಾ ವರದಿಗಳ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ, ವೀಕ್ಷಣೆ ಮಾಡಿದ ಬಳಿಕ ಅವರು ಮಾತನಾಡಿದರು.

ಕಾಂಗ್ರೆಸ್‌ನವರಿಗೆ ನಾನೊಂದು ಪ್ರಶ್ನೆ ಕೇಳಲು ಬಯಸುತ್ತೇನೆ. ಸಂವಿಧಾನ ಕೊಟ್ಟ ಅಂಬೇಡ್ಕರ್‌ ಅವರನ್ನು ಮರೆಸಿ ಬಿಟ್ಟಿದ್ರಲ್ಲಾ, ಅವರು ಎಲ್ಲೂ ಇಲ್ಲದಂಗೆ ಮಾಡಿದ್ರು. ಆಗ ಇವರಿಗೆ ನೆನಪಾಗಿಲ್ವಾ? ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಸರ್ದಾರ್‌ ವಲ್ಲಭಾಯ್‌ ಪಟೇಲ್‌ ಅವರನ್ನು ಮರೆಸಿದ್ರು. ಯಾವುದೇ ಒಬ್ಬರಿಂದ ಸ್ವಾತಂತ್ರ್ಯ ಬಂದಿದೆ ಅನ್ನೋ ಪರಿಕಲ್ಪನೆ ತಪ್ಪು. ಅನೇಕ ಜನ ಪ್ರಾಣ ಬಲಿದಾನ ಮಾಡಿದ್ದಾರೆ ಎಂದರು.

75ನೇ ಸ್ವಾತಂತ್ರ್ಯೋತ್ಸವ ಅನಾಮಧೇಯ ಹೋರಾಟಗಾರರಿಗೆ ಮೀಸಲಿಟ್ಟಿದ್ದು, ಎಲ್ಲೇ ಹೋದರೂ ನೆಹರೂ ಹೆಸರು ಇಟ್ಟಿದ್ದೇವೆ. ಜಾಹೀರಾತಿನಲ್ಲೂ ನೆಹರೂ ಇದ್ದಾರೆ. ಆದರೂ ಕಾಂಗ್ರೆಸ್ಸಿಗರಿಗೆ ಯಾಕಿಷ್ಟು ಗಾಬರಿ? ಅಂಬೇಡ್ಕರ್‌, ಭಗತ್‌ ಸಿಂಗ್‌, ಸುಭಾಷ್‌ ಚಂದ್ರಬೋಸ್‌, ಚಂದ್ರಶೇಖರ್‌ ಅಜಾದ್‌ ಇವರಿಗೆ ನೆನಪಾಗಿಲ್ಲ ತಿರುಗೇಟು ನೀಡಿದರು.

ನಿಜವಾದ ಹೋರಾಟಗಾರರ ಸವಿನೆನಪು ಕರ್ನಾಟಕದಲ್ಲಿ ಮಾಡಿಕೊಟ್ಟಿದ್ದೇವೆ. ಅವರಿಗೆ ನಮನ ಸಲ್ಲಿಸಿದ್ದು ಕರ್ನಾಟಕದಲ್ಲಿ ಮಾತ್ರ. ಹಿಂದೆಂದೂ ನೆನಪು ಮಾಡಿಕೊಂಡ ದಾಖಲೆಗಳು ಇಲ್ಲ. ಎಲ್ಲರನ್ನೂ ನೆನಪು ಮಾಡಿಕೊಂಡಿದ್ದೀವಿ, ಅದಕ್ಕೆ ಅಭಿನಂದನೆ ಸಲ್ಲಿಸಬೇಕು. ದಾದಾಬಾಯಿ ನವರೋಜಿ, ಹರ್ಡೇಕರ್‌ ಅವರನ್ನು ನೆನಪು ಮಾಡಿಕೊಂಡಿದ್ದೇವೆ. ಅವರೆಲ್ಲ ಕಾಂಗ್ರೆಸ್‌ನವರೆ. ನಾವೇನು ಭೇದ ಭಾವ ಮಾಡಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ಸಿದ್ದು ವಿರುದ್ಧ ಗರಂ: ಅಧಿಕಾರಕ್ಕೋಸ್ಕರ ಬೊಮ್ಮಾಯಿಯವರು ಆರ್‌ಎಸ್‌ಎಸ್‌ನವರ ಹಿಡಿತದಲ್ಲಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಪ್ರಾರಂಭದಲ್ಲಿ ಏಕವಚನದಲ್ಲೇ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಸಿದ್ದರಾಮಯ್ಯ ಆ ಹುಡುಗ ರಾಹುಲ್‌ ಗಾಂಧಿ ಮುಂದೆ ಕೈಕಟ್ಟಿಕೊಂಡು ನಿಂತ ಮೇಲೆ ಅವನದೆಲ್ಲ ಸ್ವಾಭಿಮಾನ ಮುಗಿದುಹೋಯ್ತು. ನಾವೆಲ್ಲ ಸಿದ್ದರಾಮಣ್ಣನ ಬಗ್ಗೆ ಬಹಳಷ್ಟು ಎತ್ತರಕ್ಕಿದ್ವಿ. ಅವನಿಗಿಂತ ಸಣ್ಣವಯಸ್ಸಿನ ರಾಹುಲ್‌ ಗಾಂಧಿ ಮುಂದೆ ದೆಹಲಿಗೆ ಹೋಗಿ ಕೈಕಟ್ಟಿಕೊಂಡು ನಿಲ್ತಾರೆ, ದಿನಗಟ್ಟಲೇ ಕಾಯ್ತಾರೆ ಅವರ ಮೇಲಿದ್ದ ಗೌರವ, ಸ್ವಾಭಿಮಾನ ಅಲ್ಲಿಗೆ ಮುಗಿಯಿತು ಎಂದರು.

ಕರಾಳ ದಿನ ನೋಡಿದಾಗ ಕಣ್ಣಲ್ಲಿ ನೀರು ಬರುತ್ತೆ
ದೇಶ ವಿಭಜನೆಯ ಕರಾಳ ದಿನವನ್ನು ನೋಡಿದಾಗ ಕಣ್ಣಲ್ಲಿ ನೀರು ಬರುತ್ತದೆ. ಪೂರ್ವ ಹಾಗೂ ಪಶ್ಚಿಮ ದೇಶ ವಿಭಜನೆ ಆದಾಗ 10 ಲಕ್ಷ ಜನರು ವಲಸೆ ಆದರು. ದೊಡ್ಡ ಹಿಂಸಾಚಾರ, ಸಾವು-ನೋವು ಆಯಿತು. ಬಹಳಷ್ಟು ಕಡೆ ಹಸಿವಿನಿಂದ ಸತ್ತರು. ಇದು ಯಾಕೆ ಆಯಿತು ಎಂದು ಇತಿಹಾಸದಲ್ಲಿ ದಾಖಲೆ ಇದೆ. ಇದಕ್ಕೆ ಯಾರೆಲ್ಲ ಕಾರಣ ಅಂತಾನೂ ದಾಖಲೆ ಇದೆ. ಇದೊಂದು ದೊಡ್ಡ ದುರಂತ. ಸ್ವಾತಂತ್ರ್ಯ ಪಡೆಯುವ ಸಂದರ್ಭದಲ್ಲಿ ದೇಶವನ್ನು ಒಡೆಯುವ ಕೆಲಸ ಆಗಿದೆ. ರಕ್ತ ಭೂಮಿಗೆ ಚಲ್ಲಿದ್ದಾರೆ. ಸ್ವಾತಂತ್ರ್ಯ ಸಮಯದಲ್ಲಿ ಪ್ರಾಣ ಹೋಯಿತು. ವಿಭಜನೆ ಸಮಯದಲ್ಲಿ ಪ್ರಾಣ ಹೋಯಿತು. ದೇಶ ಒಂದಾಗಿದ್ದರೆ ಇಂತಹ ಘಟನೆ ತಪ್ಪಿಸಬಹುದಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.